<p><strong>ಬೆಳಗಾವಿ: </strong>ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರದ ಕಚೇರಿಗೆ ಬೆಳಗಾವಿಯಿಂದಲೇ ಮಂಗಳವಾರ ಮತ್ತೆ ಬೆದರಿಕೆ ಕರೆ ಮಾಡಲಾಗಿದೆ.</p>.<p>ಆದರೆ, ಈ ಕರೆಯನ್ನು ಸದ್ಯ ಹಿಂಡಲಗಾ ಜೈಲಿನಲ್ಲಿರುವ ಕೈದಿ ಜಯೇಶ್ ಪೂಜಾರಿ ಮಾಡಿಲ್ಲ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ನನಗೆ ₹10 ಕೋಟಿ ಹಣ ನೀಡಬೇಕು. ಇಲ್ಲದಿದ್ದರೆ ನಿತಿನ್ ಗಡ್ಕರಿ ಅವರನ್ನು ಕೊಲೆ ಮಾಡುತ್ತೇನೆ’ ಎಂದು ಹೇಳಿಕೊಂಡು ಬೆಳಗಾವಿಯಿಂದ ಜಯೇಶ್ ಪೂಜಾರಿ ಎಂಬ ವ್ಯಕ್ತಿ ಕರೆ ಮಾಡಿದ್ದಾಗಿ ನಾಗ್ಪುರ ಪೊಲೀಸರು ತಿಳಿಸಿದ್ದಾರೆ.</p>.<p>ಕೊಲೆ ಆರೋಪದಲ್ಲಿ ಹಿಂಡಲಗಾ ಜೈಲು ಸೇರಿರುವ ಜಯೇಶ್ ಪೂಜಾರಿ, ಜನವರಿ 14ರಂದು ನಿತಿನ್ ಗಡ್ಕರಿ ಅವರ ಕಚೇರಿಗೆ ಬೆದರಿಕೆ ಕರೆ ಮಾಡಿದ್ದ. ₹ 100 ಕೋಟಿ ನೀಡದಿದ್ದರೆ ಸ್ಫೋಟಿಸಿ ಗಡ್ಕರಿ ಅವರನ್ನು ಕೊಲೆ ಮಾಡುವುದಾಗಿ ಹೇಳಿದ್ದ. ಕರೆಯ ಜಾಡು ಹಿಡಿದು ನಾಗ್ಪುರ ಪೊಲೀಸರು ಹಿಂಡಲಗಾ ಜೈಲಿಗೆ ಬಂದು ಪರಿಶೀಲನೆ ನಡೆಸಿದ್ದರು.</p>.<p>ಇದೇ ವಿಚಾರವಾಗಿ ಜೈಲಿನ ಏಳು ಸಿಬ್ಬಂದಿಗೆ ನೋಟಿಸ್ ನೀಡಲಾಗಿತ್ತು. ಮಂಗಳವಾರ ಮತ್ತೆ ಇದೇ ವ್ಯಕ್ತಿಯ ಹೆಸರಿನಿಂದ ಕರೆ ಮಾಡಲಾಗಿದೆ.</p>.<p>‘ಹಿಂಡಲಗಾ ಜೈಲಿನಲ್ಲಿ ತಪಾಸಣೆ ಮಾಡಲಾಗಿದೆ. ಯಾರ ಬಳಿಯೂ ಮೊಬೈಲ್ ಇಲ್ಲ. ಜಯೇಶ್ ಪೂಜಾರಿಯನ್ನು ಭೇಟಿಯಾಗಲು ಬಂದವರು ಅಥವಾ ಜಾಮೀನು ಮೇಲೆ ಬಿಡುಗಡೆ ಆದವರು ಹೊರಗಿನಿಂದ ಈ ರೀತಿ ಕರೆ ಮಾಡಿರಬಹುದು’ ಎಂದು ಹಿಂಡಲಗಾ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಕೃಷ್ಣಕುಮಾರ ಪ್ರತಿಕ್ರಿಯಿಸಿದ್ದಾರೆ.</p>.<p>‘ನಾಗ್ಪುರದ ಕಚೇರಿಗೆ ಸಚಿವರ ಕೊಲೆ ಬೆದರಿಕೆ ಕರೆ ಹೋದ ಮಾಹಿತಿ ಸಿಕ್ಕಿದೆ. ಆದರೆ, ಅಲ್ಲಿನ ಪೊಲೀಸರು ಇದುವರೆಗೆ ನಮ್ಮನ್ನು ಸಂಪರ್ಕಿಸಿಲ್ಲ‘ ಎಂದು ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರದ ಕಚೇರಿಗೆ ಬೆಳಗಾವಿಯಿಂದಲೇ ಮಂಗಳವಾರ ಮತ್ತೆ ಬೆದರಿಕೆ ಕರೆ ಮಾಡಲಾಗಿದೆ.</p>.<p>ಆದರೆ, ಈ ಕರೆಯನ್ನು ಸದ್ಯ ಹಿಂಡಲಗಾ ಜೈಲಿನಲ್ಲಿರುವ ಕೈದಿ ಜಯೇಶ್ ಪೂಜಾರಿ ಮಾಡಿಲ್ಲ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ನನಗೆ ₹10 ಕೋಟಿ ಹಣ ನೀಡಬೇಕು. ಇಲ್ಲದಿದ್ದರೆ ನಿತಿನ್ ಗಡ್ಕರಿ ಅವರನ್ನು ಕೊಲೆ ಮಾಡುತ್ತೇನೆ’ ಎಂದು ಹೇಳಿಕೊಂಡು ಬೆಳಗಾವಿಯಿಂದ ಜಯೇಶ್ ಪೂಜಾರಿ ಎಂಬ ವ್ಯಕ್ತಿ ಕರೆ ಮಾಡಿದ್ದಾಗಿ ನಾಗ್ಪುರ ಪೊಲೀಸರು ತಿಳಿಸಿದ್ದಾರೆ.</p>.<p>ಕೊಲೆ ಆರೋಪದಲ್ಲಿ ಹಿಂಡಲಗಾ ಜೈಲು ಸೇರಿರುವ ಜಯೇಶ್ ಪೂಜಾರಿ, ಜನವರಿ 14ರಂದು ನಿತಿನ್ ಗಡ್ಕರಿ ಅವರ ಕಚೇರಿಗೆ ಬೆದರಿಕೆ ಕರೆ ಮಾಡಿದ್ದ. ₹ 100 ಕೋಟಿ ನೀಡದಿದ್ದರೆ ಸ್ಫೋಟಿಸಿ ಗಡ್ಕರಿ ಅವರನ್ನು ಕೊಲೆ ಮಾಡುವುದಾಗಿ ಹೇಳಿದ್ದ. ಕರೆಯ ಜಾಡು ಹಿಡಿದು ನಾಗ್ಪುರ ಪೊಲೀಸರು ಹಿಂಡಲಗಾ ಜೈಲಿಗೆ ಬಂದು ಪರಿಶೀಲನೆ ನಡೆಸಿದ್ದರು.</p>.<p>ಇದೇ ವಿಚಾರವಾಗಿ ಜೈಲಿನ ಏಳು ಸಿಬ್ಬಂದಿಗೆ ನೋಟಿಸ್ ನೀಡಲಾಗಿತ್ತು. ಮಂಗಳವಾರ ಮತ್ತೆ ಇದೇ ವ್ಯಕ್ತಿಯ ಹೆಸರಿನಿಂದ ಕರೆ ಮಾಡಲಾಗಿದೆ.</p>.<p>‘ಹಿಂಡಲಗಾ ಜೈಲಿನಲ್ಲಿ ತಪಾಸಣೆ ಮಾಡಲಾಗಿದೆ. ಯಾರ ಬಳಿಯೂ ಮೊಬೈಲ್ ಇಲ್ಲ. ಜಯೇಶ್ ಪೂಜಾರಿಯನ್ನು ಭೇಟಿಯಾಗಲು ಬಂದವರು ಅಥವಾ ಜಾಮೀನು ಮೇಲೆ ಬಿಡುಗಡೆ ಆದವರು ಹೊರಗಿನಿಂದ ಈ ರೀತಿ ಕರೆ ಮಾಡಿರಬಹುದು’ ಎಂದು ಹಿಂಡಲಗಾ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಕೃಷ್ಣಕುಮಾರ ಪ್ರತಿಕ್ರಿಯಿಸಿದ್ದಾರೆ.</p>.<p>‘ನಾಗ್ಪುರದ ಕಚೇರಿಗೆ ಸಚಿವರ ಕೊಲೆ ಬೆದರಿಕೆ ಕರೆ ಹೋದ ಮಾಹಿತಿ ಸಿಕ್ಕಿದೆ. ಆದರೆ, ಅಲ್ಲಿನ ಪೊಲೀಸರು ಇದುವರೆಗೆ ನಮ್ಮನ್ನು ಸಂಪರ್ಕಿಸಿಲ್ಲ‘ ಎಂದು ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>