<p><strong>ಕಲಬುರಗಿ:</strong> ಇದೇ 14ರಂದು ಕರ್ನಾಟಕ ಲೋಕಸೇವಾ ಆಯೋಗವು ಕಲಬುರಗಿಯಲ್ಲಿ ಆಯೋಜಿಸಿದ್ದ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ನೇಮಕಾತಿ ಪರೀಕ್ಷೆಗೆ ರೈಲು ವಿಳಂಬದಿಂದಾಗಿ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಆಯೋಗವು ಇದೇ 29ರಂದು ಬೆಂಗಳೂರಿನಲ್ಲಿ ಮರು ಪರೀಕ್ಷೆ ನಡೆಸಲಿದೆ.</p>.<p>ಜೋಡಿ ರೈಲು ಮಾರ್ಗ ಕಾಮಗಾರಿಯಿಂದಾಗಿ ಹಾಸನ–ಸೊಲ್ಲಾಪುರ ಹಾಗೂ ಉದ್ಯಾನ್ ಎಕ್ಸ್ಪ್ರೆಸ್ ರೈಲುಗಳು ತಡವಾಗಿ ಕಲಬುರಗಿ ತಲುಪಿದ್ದವು. ಇದರಿಂದಾಗಿ ತಮಗೆ ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲ ಎಂದು ಸಾವಿರಾರು ಅಭ್ಯರ್ಥಿಗಳು ರಾಯಚೂರು ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದರು. ನಂತರ ಕಲಬುರಗಿ ತಲುಪಿ ಮಧ್ಯಾಹ್ನದ ಪರೀಕ್ಷೆಯನ್ನು ಬರೆದಿದ್ದರು.</p>.<p><strong>ವಿಡಿಯೊ ನೋಡಿ:</strong><a href="https://www.prajavani.net/video/karnataka-news/kalaburagi-kpsc-aspirants-miss-exam-as-train-delayed-by-5-hours-massive-protest-892991.html" itemprop="url">ಕೆಪಿಎಸ್ಸಿ ಪರೀಕ್ಷೆ: ರೈಲು ವಿಳಂಬ- ತಪ್ಪಿದ ಅವಕಾಶ </a></p>.<p>ಆ ರೈಲಿನಲ್ಲಿದ್ದ ಅಭ್ಯರ್ಥಿಗಳಿಗೆ ಮಾತ್ರ 29ರಂದು ಪರೀಕ್ಷೆ ನಡೆಸಲಾಗುವುದು. ಇದಕ್ಕಾಗಿ ಅಭ್ಯರ್ಥಿಗಳು ಮನವಿಪತ್ರ, ರೈಲ್ವೆ ಟಿಕೆಟ್ ಪ್ರತಿ, ಆಯೋಗವು ನೀಡಿದ ಪ್ರವೇಶ ಪತ್ರದ ಪ್ರತಿಯನ್ನು ಆಯೋಗಕ್ಕೆ 22ರೊಳಗೆ ಸ್ಪೀಡ್ ಪೋಸ್ಟ್ ಮೂಲಕ, ಖುದ್ದಾಗಿ ಅಥವಾ kpsc-ka@nic.in ಗೆ ಇ ಮೇಲ್ ಮಾಡಬೇಕು ಎಂದು ಆಯೋಗದ ಕಾರ್ಯದರ್ಶಿ ತಿಳಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/district/raichur/missed-kpsc-exam-candidates-protesting-a-train-blockade-at-raichur-892638.html" target="_blank">ರೈಲು ಪ್ರಯಾಣ ಆರೂವರೆ ತಾಸು ವಿಳಂಬ: ಕೈ ತಪ್ಪಿದ ಕೆಪಿಎಸ್ಸಿ ಪರೀಕ್ಷೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಇದೇ 14ರಂದು ಕರ್ನಾಟಕ ಲೋಕಸೇವಾ ಆಯೋಗವು ಕಲಬುರಗಿಯಲ್ಲಿ ಆಯೋಜಿಸಿದ್ದ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ನೇಮಕಾತಿ ಪರೀಕ್ಷೆಗೆ ರೈಲು ವಿಳಂಬದಿಂದಾಗಿ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಆಯೋಗವು ಇದೇ 29ರಂದು ಬೆಂಗಳೂರಿನಲ್ಲಿ ಮರು ಪರೀಕ್ಷೆ ನಡೆಸಲಿದೆ.</p>.<p>ಜೋಡಿ ರೈಲು ಮಾರ್ಗ ಕಾಮಗಾರಿಯಿಂದಾಗಿ ಹಾಸನ–ಸೊಲ್ಲಾಪುರ ಹಾಗೂ ಉದ್ಯಾನ್ ಎಕ್ಸ್ಪ್ರೆಸ್ ರೈಲುಗಳು ತಡವಾಗಿ ಕಲಬುರಗಿ ತಲುಪಿದ್ದವು. ಇದರಿಂದಾಗಿ ತಮಗೆ ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲ ಎಂದು ಸಾವಿರಾರು ಅಭ್ಯರ್ಥಿಗಳು ರಾಯಚೂರು ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದರು. ನಂತರ ಕಲಬುರಗಿ ತಲುಪಿ ಮಧ್ಯಾಹ್ನದ ಪರೀಕ್ಷೆಯನ್ನು ಬರೆದಿದ್ದರು.</p>.<p><strong>ವಿಡಿಯೊ ನೋಡಿ:</strong><a href="https://www.prajavani.net/video/karnataka-news/kalaburagi-kpsc-aspirants-miss-exam-as-train-delayed-by-5-hours-massive-protest-892991.html" itemprop="url">ಕೆಪಿಎಸ್ಸಿ ಪರೀಕ್ಷೆ: ರೈಲು ವಿಳಂಬ- ತಪ್ಪಿದ ಅವಕಾಶ </a></p>.<p>ಆ ರೈಲಿನಲ್ಲಿದ್ದ ಅಭ್ಯರ್ಥಿಗಳಿಗೆ ಮಾತ್ರ 29ರಂದು ಪರೀಕ್ಷೆ ನಡೆಸಲಾಗುವುದು. ಇದಕ್ಕಾಗಿ ಅಭ್ಯರ್ಥಿಗಳು ಮನವಿಪತ್ರ, ರೈಲ್ವೆ ಟಿಕೆಟ್ ಪ್ರತಿ, ಆಯೋಗವು ನೀಡಿದ ಪ್ರವೇಶ ಪತ್ರದ ಪ್ರತಿಯನ್ನು ಆಯೋಗಕ್ಕೆ 22ರೊಳಗೆ ಸ್ಪೀಡ್ ಪೋಸ್ಟ್ ಮೂಲಕ, ಖುದ್ದಾಗಿ ಅಥವಾ kpsc-ka@nic.in ಗೆ ಇ ಮೇಲ್ ಮಾಡಬೇಕು ಎಂದು ಆಯೋಗದ ಕಾರ್ಯದರ್ಶಿ ತಿಳಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/district/raichur/missed-kpsc-exam-candidates-protesting-a-train-blockade-at-raichur-892638.html" target="_blank">ರೈಲು ಪ್ರಯಾಣ ಆರೂವರೆ ತಾಸು ವಿಳಂಬ: ಕೈ ತಪ್ಪಿದ ಕೆಪಿಎಸ್ಸಿ ಪರೀಕ್ಷೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>