<p><strong>ಬೆಂಗಳೂರು</strong>: ಮೈಸೂರು ಚಲೋ ಪಾದಯಾತ್ರೆ ಸಂದರ್ಭದಲ್ಲಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಡಿ.ಕೆ ಶಿವಕುಮಾರ್ ಉದ್ದೇಶಿಸಿ ಹಲವು ಪ್ರಶ್ನೆಗಳನ್ನು ಕೇಳಿದ್ದರು.</p><p>ಇದಕ್ಕೆ ಕಾಂಗ್ರೆಸ್ ಇಂದು ಎಕ್ಸ್ ನಲ್ಲಿ ಕುಮಾರಸ್ವಾಮಿ ಅವರ ಹಳೇ ವಿಚಾರಗಳನ್ನು ಪ್ರಸ್ತಾಪಿಸಿ ಕೆಣಕಿದೆ. ಈ ಮೂಲಕ ವಾಕ್ಸಮರ ಮುಂದುವರೆದಿದೆ.</p><p>ಕುಮಾರಸ್ವಾಮಿ ಅವರೇ ನಿಮ್ಮ ಕರಾಳ ಇತಿಹಾಸ ಪುಟದಲ್ಲಿ ಮುಚ್ಚಿಹೋದ ಅಧ್ಯಾಯಗಳ ಪ್ರಶ್ನೆಗಳಿಗೆ ಉತ್ತರಿಸಿ ಎಂದು ಕಾಂಗ್ರೆಸ್ ಕೇಳಿದೆ.</p><p>2006ರಲ್ಲಿ ನಿಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಚರ್ಚ್ ಸ್ಟ್ರೀಟ್ ನಲ್ಲಿ, ಅರ್ಧ ರಾತ್ರಿಯಲ್ಲಿ ಗಲಾಟೆ ಮಾಡಿದ್ದಕ್ಕೆ ಪ್ರಕರಣ ದಾಖಲಾಗಿತ್ತು, ನಂತರ ಆ ಪ್ರಕರಣ ಏನಾಯ್ತು? ಎಂದು ಕೇಳಿದೆ.</p><p>ಜಂತಕಲ್ ಗಣಿ ಹಗರಣ, ವಿಶ್ವಭಾರತಿ ಹೌಸಿಂಗ್ ಸೊಸೈಟಿ ನಿವೇಶನ ಹಗರಣ, ಬಿಜೆಪಿ ಆರೋಪಿಸಿದ್ದ ಟೆಲಿಪೋನ್ ಟ್ಯಾಪಿಂಗ್ ಹಗರಣದ ತನಿಖೆಗಳು ಯಾವ ಹಂತಕ್ಕೆ ಬಂದಿವೆ ಹೇಳುವಿರಾ? ಎಂದು ಪ್ರಶ್ನಿಸಿದೆ.</p><p>ರೈತ ಮಹಿಳೆಗೆ ಇಷ್ಟು ದಿನ ಎಲ್ಲಿ ಮಲಗಿದ್ದೆ ಎಂದು ಕೇಳಿದ್ದಿರಿ ಎಂದು ಕೇಳಿದೆ.</p><p>ಲೋಕಸಭೆ ಚುನಾವಣೆಯಲ್ಲಿ ಮಹಿಳಾ ಅಭ್ಯರ್ಥಿಗೆ KRS ಡ್ಯಾಮಿಗೆ ಅಡ್ಡಲಾಗಿ ಮಲಗು ಎಂದಿದ್ದಿರಿ. ಶಕ್ತಿ ಯೋಜನೆಯಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದಿದ್ದಿರಿ ಎಂದು ಕೇಳಿದೆ.</p><p>ಇಂತಹ ಕೊಳಕು ಮನಸಿನ ರಾಜಕಾರಿಣಿಯಾದ ನಿಮಗೆ ಕಾಂಗ್ರೆಸ್ ಬಗ್ಗೆ ಮಾತಾಡುವ ನೈತಿಕತೆ ಇದೆಯೇ? ಎಂದು ಪ್ರಶ್ನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮೈಸೂರು ಚಲೋ ಪಾದಯಾತ್ರೆ ಸಂದರ್ಭದಲ್ಲಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಡಿ.ಕೆ ಶಿವಕುಮಾರ್ ಉದ್ದೇಶಿಸಿ ಹಲವು ಪ್ರಶ್ನೆಗಳನ್ನು ಕೇಳಿದ್ದರು.</p><p>ಇದಕ್ಕೆ ಕಾಂಗ್ರೆಸ್ ಇಂದು ಎಕ್ಸ್ ನಲ್ಲಿ ಕುಮಾರಸ್ವಾಮಿ ಅವರ ಹಳೇ ವಿಚಾರಗಳನ್ನು ಪ್ರಸ್ತಾಪಿಸಿ ಕೆಣಕಿದೆ. ಈ ಮೂಲಕ ವಾಕ್ಸಮರ ಮುಂದುವರೆದಿದೆ.</p><p>ಕುಮಾರಸ್ವಾಮಿ ಅವರೇ ನಿಮ್ಮ ಕರಾಳ ಇತಿಹಾಸ ಪುಟದಲ್ಲಿ ಮುಚ್ಚಿಹೋದ ಅಧ್ಯಾಯಗಳ ಪ್ರಶ್ನೆಗಳಿಗೆ ಉತ್ತರಿಸಿ ಎಂದು ಕಾಂಗ್ರೆಸ್ ಕೇಳಿದೆ.</p><p>2006ರಲ್ಲಿ ನಿಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಚರ್ಚ್ ಸ್ಟ್ರೀಟ್ ನಲ್ಲಿ, ಅರ್ಧ ರಾತ್ರಿಯಲ್ಲಿ ಗಲಾಟೆ ಮಾಡಿದ್ದಕ್ಕೆ ಪ್ರಕರಣ ದಾಖಲಾಗಿತ್ತು, ನಂತರ ಆ ಪ್ರಕರಣ ಏನಾಯ್ತು? ಎಂದು ಕೇಳಿದೆ.</p><p>ಜಂತಕಲ್ ಗಣಿ ಹಗರಣ, ವಿಶ್ವಭಾರತಿ ಹೌಸಿಂಗ್ ಸೊಸೈಟಿ ನಿವೇಶನ ಹಗರಣ, ಬಿಜೆಪಿ ಆರೋಪಿಸಿದ್ದ ಟೆಲಿಪೋನ್ ಟ್ಯಾಪಿಂಗ್ ಹಗರಣದ ತನಿಖೆಗಳು ಯಾವ ಹಂತಕ್ಕೆ ಬಂದಿವೆ ಹೇಳುವಿರಾ? ಎಂದು ಪ್ರಶ್ನಿಸಿದೆ.</p><p>ರೈತ ಮಹಿಳೆಗೆ ಇಷ್ಟು ದಿನ ಎಲ್ಲಿ ಮಲಗಿದ್ದೆ ಎಂದು ಕೇಳಿದ್ದಿರಿ ಎಂದು ಕೇಳಿದೆ.</p><p>ಲೋಕಸಭೆ ಚುನಾವಣೆಯಲ್ಲಿ ಮಹಿಳಾ ಅಭ್ಯರ್ಥಿಗೆ KRS ಡ್ಯಾಮಿಗೆ ಅಡ್ಡಲಾಗಿ ಮಲಗು ಎಂದಿದ್ದಿರಿ. ಶಕ್ತಿ ಯೋಜನೆಯಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದಿದ್ದಿರಿ ಎಂದು ಕೇಳಿದೆ.</p><p>ಇಂತಹ ಕೊಳಕು ಮನಸಿನ ರಾಜಕಾರಿಣಿಯಾದ ನಿಮಗೆ ಕಾಂಗ್ರೆಸ್ ಬಗ್ಗೆ ಮಾತಾಡುವ ನೈತಿಕತೆ ಇದೆಯೇ? ಎಂದು ಪ್ರಶ್ನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>