<p><strong>ಬೆಂಗಳೂರು</strong>: ಕೋಮು ದ್ವೇಷ ಪ್ರಚೋದನೆಯನ್ನು ನಿಗ್ರಹಿಸಲು ರಾಜ್ಯ ಸರ್ಕಾರವು ‘ವಿಶೇಷ ಕಾರ್ಯಪಡೆ’ಯನ್ನು ರಚಿಸಿದೆ. ಈ ಕಾರ್ಯಪಡೆಯು ಮೂರು ತಂಡಗಳನ್ನು ಹೊಂದಿದ್ದು ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲಿವೆ.</p>.<p>‘ದಕ್ಷಿಣ ಕನ್ನಡ ಜಿಲ್ಲೆಯು ಕೋಮು ಮತ್ತು ಆಡಳಿತಾತ್ಮಕ ದೃಷ್ಟಿಯಿಂದ ಹೆಚ್ಚು ಸೂಕ್ಷ್ಮವಾಗುತ್ತಿದ್ದು, ಅಭಿವೃದ್ಧಿ ಚಟುವಟಿಕೆಗಳು ಸ್ಥಗಿತವಾಗುತ್ತಿವೆ. ಶಾಂತಿ, ಸಾಮಾಜಿಕ ಒಗ್ಗಟ್ಟನ್ನು ತರುವ ಉದ್ದೇಶದಿಂದ ಈ ಕಾರ್ಯಪಡೆ ರಚಿಸಲಾಗುತ್ತಿದೆ’ ಎಂದು ಗೃಹ ಇಲಾಖೆಯು ಆದೇಶ ಪತ್ರದಲ್ಲಿ ತಿಳಿಸಿದೆ.</p>.<p>ಈಗಾಗಲೇ ಅಸ್ತಿತ್ವದಲ್ಲಿ ಇರುವ ನಕ್ಸಲ್ ನಿಗ್ರಹ ಪಡೆಯಿಂದ ಒಂದು ಡಿಜಿಪಿ, ಒಂದು ಡಿವೈಎಸ್ಪಿ, ಒಂದು ಸಹಾಯಕ ಕಮಾಂಡೆಂಟ್ ನಾಲ್ವರು ಪಿಐ, 16 ಪಿಎಸ್ಐ ಸೇರಿ 248 ಹುದ್ದೆಗಳನ್ನು ಬೇರ್ಪಡಿಸಲಾಗಿದೆ. ಇಷ್ಟೇ ಸಿಬ್ಬಂದಿ ಇರುವ ವಿಶೇಷ ಕಾರ್ಯಪಡೆಯನ್ನು ರಚಿಲಾಗಿದೆ.</p>.<p>ವಿಶೇಷ ಕಾರ್ಯಪಡೆಯ ಪ್ರತಿ ತಂಡಕ್ಕೆ ಆಯಾ ಜಿಲ್ಲಾ ಪೊಲೀಸ್ ಕಮಿಷನರ್ ಅಥವಾ ಎಸ್ಪಿ ಅಗತ್ಯ ಮೂಲಸೌಕರ್ಯವನ್ನು ಒದಗಿಸಬೇಕು. ಈ ತಂಡಗಳು ಸಂಬಂಧಿತ ವಲಯ ಐಜಿಪಿ ಅವರ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸಲಿವೆ ಎಂದು ಆದೇಶದಲ್ಲಿ ತಿಳಿಸಿದೆ.</p>.<h2>ಕಾರ್ಯಪಡೆ ಕರ್ತವ್ಯ</h2><h2></h2><ol><li><p>ದ್ವೇಷ ಭಾಷಣ, ಉದ್ರೇಕಕಾರಿ ಘಟನೆಗಳು ಮತ್ತು ಕೋಮು ಸಂಬಂಧಿ ಘಟನೆಗಳ ಸಂಬಂಧ ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಿಂದ ಗುಪ್ತಚರ ಮಾಹಿತಿ ಸಂಗ್ರಹ. ಇದಕ್ಕಾಗಿ ತಾಂತ್ರಿಕ ಕೋಶ ರಚನೆ</p></li><li><p>ಸಂಭಾವ್ಯ ಕೋಮು ಹಿಂಸಾ<br>ಚಾರದ ಬಗ್ಗೆ ಕಣ್ಗಾವಲು ಮತ್ತು ಮಾನವ ಗುಪ್ತಚರ ಮೂಲಕ ಎಚ್ಚರಿಕೆ ರವಾನೆ</p></li><li><p>ಕಟ್ಟುನಿಟ್ಟಿನ ಕ್ರಮಗಳ ಮೂಲಕ ಜನರ ವಿಶ್ವಾಸವೃದ್ಧಿ ಕ್ರಮ ಕೈಗೊಳ್ಳುವುದು</p></li><li><p>ಮೂಲಭೂತವಾದ ಪ್ರತಿಪಾದನೆಯನ್ನು ಗುರುತಿಸುವುದು</p></li><li><p>ಕೋಮು ಗಲಭೆ ಸಂದರ್ಭಗಳಲ್ಲಿ ವಿಶೇಷ ಕಾರ್ಯಪಡೆಯ ಅಧಿಕಾರಿ ಮತ್ತು ಸಿಬ್ಬಂದಿಯ ನಿಯೋಜನೆ</p></li></ol>.<h2>ಮಂಗಳೂರು ಕಮಿಷನರ್, ಎಸ್ಪಿ ಬದಲಾವಣೆ</h2><p>ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಅವರನ್ನು ಬದಲಿಸಿ, ಆ ಜಾಗಕ್ಕೆ ಗುಪ್ತಚರ ವಿಭಾಗದ ಡಿಜಿಪಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.</p><p>ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಅವರನ್ನು ವರ್ಗಾವಣೆ ಮಾಡಿ ಆ ಜಾಗಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ಅರುಣ್ ಅವರನ್ನು ನಿಯೋಜಿಸಲಾಗಿದೆ. ದ್ವೇಷ ಭಾಷಣ ಮಾಡಿದ್ದ ಆರೋಪದಲ್ಲಿ ಬಿಜೆಪಿ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಿದ ಕಾರಣಕ್ಕೆ<br>ಬಿಜೆಪಿ ಮುಖಂಡರ ಕೆಂಗಣ್ಣಿಗೆ ಅರುಣ್ ಅವರು ಈ ಹಿಂದೆ ಗುರಿಯಾಗಿದ್ದರು.</p><p>ಗುಪ್ತಚರ ವಿಭಾಗದ ವರಿಷ್ಠ ಹರಿರಾಮ್ ಶಂಕರ್ ಅವರನ್ನು ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ. ಹರಿರಾಮ್ ಶಂಕರ್ ಅವರು ಈ ಹಿಂದೆ ಮಂಗಳೂರು ಡಿಸಿಪಿ ಮತ್ತು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಅನುಪಮ್ ಅಗರವಾಲ್ ಅವರನ್ನು ಸಿಐಡಿ (ಆರ್ಥಿಕ ಅಪರಾಧಗಳು) ವಿಭಾಗದ ಡಿಜಿಪಿ ಆಗಿ ನೇಮಿಸಲಾಗಿದೆ. ಆದರೆ, ಯತೀಶ್ ಎನ್. ಅವರಿಗೆ ಹುದ್ದೆ ತೋರಿಸಿಲ್ಲ.</p><p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಸಚಿವ ಜಿ. ಪರಮೇಶ್ವರ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜೊತೆ ಚರ್ಚೆ ನಡೆಸಿದ ಬೆನ್ನಲ್ಲೆ ಈ ಆದೇಶ ಹೊರಬಿದ್ದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೋಮು ದ್ವೇಷ ಪ್ರಚೋದನೆಯನ್ನು ನಿಗ್ರಹಿಸಲು ರಾಜ್ಯ ಸರ್ಕಾರವು ‘ವಿಶೇಷ ಕಾರ್ಯಪಡೆ’ಯನ್ನು ರಚಿಸಿದೆ. ಈ ಕಾರ್ಯಪಡೆಯು ಮೂರು ತಂಡಗಳನ್ನು ಹೊಂದಿದ್ದು ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲಿವೆ.</p>.<p>‘ದಕ್ಷಿಣ ಕನ್ನಡ ಜಿಲ್ಲೆಯು ಕೋಮು ಮತ್ತು ಆಡಳಿತಾತ್ಮಕ ದೃಷ್ಟಿಯಿಂದ ಹೆಚ್ಚು ಸೂಕ್ಷ್ಮವಾಗುತ್ತಿದ್ದು, ಅಭಿವೃದ್ಧಿ ಚಟುವಟಿಕೆಗಳು ಸ್ಥಗಿತವಾಗುತ್ತಿವೆ. ಶಾಂತಿ, ಸಾಮಾಜಿಕ ಒಗ್ಗಟ್ಟನ್ನು ತರುವ ಉದ್ದೇಶದಿಂದ ಈ ಕಾರ್ಯಪಡೆ ರಚಿಸಲಾಗುತ್ತಿದೆ’ ಎಂದು ಗೃಹ ಇಲಾಖೆಯು ಆದೇಶ ಪತ್ರದಲ್ಲಿ ತಿಳಿಸಿದೆ.</p>.<p>ಈಗಾಗಲೇ ಅಸ್ತಿತ್ವದಲ್ಲಿ ಇರುವ ನಕ್ಸಲ್ ನಿಗ್ರಹ ಪಡೆಯಿಂದ ಒಂದು ಡಿಜಿಪಿ, ಒಂದು ಡಿವೈಎಸ್ಪಿ, ಒಂದು ಸಹಾಯಕ ಕಮಾಂಡೆಂಟ್ ನಾಲ್ವರು ಪಿಐ, 16 ಪಿಎಸ್ಐ ಸೇರಿ 248 ಹುದ್ದೆಗಳನ್ನು ಬೇರ್ಪಡಿಸಲಾಗಿದೆ. ಇಷ್ಟೇ ಸಿಬ್ಬಂದಿ ಇರುವ ವಿಶೇಷ ಕಾರ್ಯಪಡೆಯನ್ನು ರಚಿಲಾಗಿದೆ.</p>.<p>ವಿಶೇಷ ಕಾರ್ಯಪಡೆಯ ಪ್ರತಿ ತಂಡಕ್ಕೆ ಆಯಾ ಜಿಲ್ಲಾ ಪೊಲೀಸ್ ಕಮಿಷನರ್ ಅಥವಾ ಎಸ್ಪಿ ಅಗತ್ಯ ಮೂಲಸೌಕರ್ಯವನ್ನು ಒದಗಿಸಬೇಕು. ಈ ತಂಡಗಳು ಸಂಬಂಧಿತ ವಲಯ ಐಜಿಪಿ ಅವರ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸಲಿವೆ ಎಂದು ಆದೇಶದಲ್ಲಿ ತಿಳಿಸಿದೆ.</p>.<h2>ಕಾರ್ಯಪಡೆ ಕರ್ತವ್ಯ</h2><h2></h2><ol><li><p>ದ್ವೇಷ ಭಾಷಣ, ಉದ್ರೇಕಕಾರಿ ಘಟನೆಗಳು ಮತ್ತು ಕೋಮು ಸಂಬಂಧಿ ಘಟನೆಗಳ ಸಂಬಂಧ ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಿಂದ ಗುಪ್ತಚರ ಮಾಹಿತಿ ಸಂಗ್ರಹ. ಇದಕ್ಕಾಗಿ ತಾಂತ್ರಿಕ ಕೋಶ ರಚನೆ</p></li><li><p>ಸಂಭಾವ್ಯ ಕೋಮು ಹಿಂಸಾ<br>ಚಾರದ ಬಗ್ಗೆ ಕಣ್ಗಾವಲು ಮತ್ತು ಮಾನವ ಗುಪ್ತಚರ ಮೂಲಕ ಎಚ್ಚರಿಕೆ ರವಾನೆ</p></li><li><p>ಕಟ್ಟುನಿಟ್ಟಿನ ಕ್ರಮಗಳ ಮೂಲಕ ಜನರ ವಿಶ್ವಾಸವೃದ್ಧಿ ಕ್ರಮ ಕೈಗೊಳ್ಳುವುದು</p></li><li><p>ಮೂಲಭೂತವಾದ ಪ್ರತಿಪಾದನೆಯನ್ನು ಗುರುತಿಸುವುದು</p></li><li><p>ಕೋಮು ಗಲಭೆ ಸಂದರ್ಭಗಳಲ್ಲಿ ವಿಶೇಷ ಕಾರ್ಯಪಡೆಯ ಅಧಿಕಾರಿ ಮತ್ತು ಸಿಬ್ಬಂದಿಯ ನಿಯೋಜನೆ</p></li></ol>.<h2>ಮಂಗಳೂರು ಕಮಿಷನರ್, ಎಸ್ಪಿ ಬದಲಾವಣೆ</h2><p>ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಅವರನ್ನು ಬದಲಿಸಿ, ಆ ಜಾಗಕ್ಕೆ ಗುಪ್ತಚರ ವಿಭಾಗದ ಡಿಜಿಪಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.</p><p>ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಅವರನ್ನು ವರ್ಗಾವಣೆ ಮಾಡಿ ಆ ಜಾಗಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ಅರುಣ್ ಅವರನ್ನು ನಿಯೋಜಿಸಲಾಗಿದೆ. ದ್ವೇಷ ಭಾಷಣ ಮಾಡಿದ್ದ ಆರೋಪದಲ್ಲಿ ಬಿಜೆಪಿ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಿದ ಕಾರಣಕ್ಕೆ<br>ಬಿಜೆಪಿ ಮುಖಂಡರ ಕೆಂಗಣ್ಣಿಗೆ ಅರುಣ್ ಅವರು ಈ ಹಿಂದೆ ಗುರಿಯಾಗಿದ್ದರು.</p><p>ಗುಪ್ತಚರ ವಿಭಾಗದ ವರಿಷ್ಠ ಹರಿರಾಮ್ ಶಂಕರ್ ಅವರನ್ನು ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ. ಹರಿರಾಮ್ ಶಂಕರ್ ಅವರು ಈ ಹಿಂದೆ ಮಂಗಳೂರು ಡಿಸಿಪಿ ಮತ್ತು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಅನುಪಮ್ ಅಗರವಾಲ್ ಅವರನ್ನು ಸಿಐಡಿ (ಆರ್ಥಿಕ ಅಪರಾಧಗಳು) ವಿಭಾಗದ ಡಿಜಿಪಿ ಆಗಿ ನೇಮಿಸಲಾಗಿದೆ. ಆದರೆ, ಯತೀಶ್ ಎನ್. ಅವರಿಗೆ ಹುದ್ದೆ ತೋರಿಸಿಲ್ಲ.</p><p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಸಚಿವ ಜಿ. ಪರಮೇಶ್ವರ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜೊತೆ ಚರ್ಚೆ ನಡೆಸಿದ ಬೆನ್ನಲ್ಲೆ ಈ ಆದೇಶ ಹೊರಬಿದ್ದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>