<p>ಕೆ.ಆರ್.ನಗರ, (ಮೈಸೂರು): ‘40 ವರ್ಷಗಳನನ್ನ ರಾಜಕೀಯ ಜೀವನದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ರಾಜಕಾರಣ ಹೀಗೆಯೇ ಇರುತ್ತದೆ ಎನ್ನಲಾಗದು. ಕಾಲಚಕ್ರದಲ್ಲಿ ಏನು ಬೇಕಾದರೂ ಆಗಬಹುದು’ ಎಂದು ವಿಧಾನಪರಿಷತ್ ಸದಸ್ಯ ಬಿಜೆಪಿಯ ಎ.ಎಚ್.ವಿಶ್ವನಾಥ್ ಹೇಳಿದರು.</p>.<p>‘ಮತ್ತೆ ಕಾಂಗ್ರೆಸ್ ಸೇರುವಿರಾ?’ ಎಂಬ ಸುದ್ದಿಗಾರರ ಪ್ರಶ್ನೆಗೆ ಅವರು ಹೀಗೇ ಪ್ರತಿಕ್ರಿಯಿಸಿದರು. ‘ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಈ ಯಾವ ಪಕ್ಷಗಳೂ ಮುಳುಗುವ ಹಡಗುಗಳಲ್ಲ. ಅವು ಜನರೊಂದಿಗೆ ತೇಲುವಂಥವು; ಇರುವಂಥವು’ ಎಂದು ಅವರು ಹೇಳಿದರು.</p>.<p>‘ಭಾರತ್ ಜೋಡೊ ಯಾತ್ರೆಯಿಂದ ಕಾಂಗ್ರೆಸ್ಗೆ ಶಕ್ತಿ ಬರುತ್ತಿದೆ. ರಾಹುಲ್ ಗಾಂಧಿ ಬಗ್ಗೆ ಜನರಲ್ಲಿ ಕೆಟ್ಟ ಅಭಿಪ್ರಾಯ ಗಳನ್ನು ವಿರೋಧಿಗಳು ಮೂಡಿಸಿ ದ್ದರು.ಪಾದಯಾತ್ರೆಯ ಮೂಲಕ ದೇಶದಲ್ಲಿ ಪರ್ಯಾಯ ನಾಯಕ ಇದ್ದಾನೆ ಎಂದು ಅವರು ತೋರಿಸಿಕೊಟ್ಟಿದ್ದಾರೆ’ ಎಂದರು.</p>.<p>‘10 ಲಕ್ಷ ಉದ್ಯೋಗದ ಭರವಸೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಮೀಸಲಾತಿ ಆಧಾರದಲ್ಲಿ ಭರ್ತಿಗೆ ಕ್ರಮ ಕೈಗೊಳ್ಳಬೇಕು. ದುರ್ಬಲ ವರ್ಗದವರು ಉದ್ಯೋಗದಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು’ ಎಂದು ವಿಶ್ವನಾಥ್ ಅವರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆ.ಆರ್.ನಗರ, (ಮೈಸೂರು): ‘40 ವರ್ಷಗಳನನ್ನ ರಾಜಕೀಯ ಜೀವನದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ರಾಜಕಾರಣ ಹೀಗೆಯೇ ಇರುತ್ತದೆ ಎನ್ನಲಾಗದು. ಕಾಲಚಕ್ರದಲ್ಲಿ ಏನು ಬೇಕಾದರೂ ಆಗಬಹುದು’ ಎಂದು ವಿಧಾನಪರಿಷತ್ ಸದಸ್ಯ ಬಿಜೆಪಿಯ ಎ.ಎಚ್.ವಿಶ್ವನಾಥ್ ಹೇಳಿದರು.</p>.<p>‘ಮತ್ತೆ ಕಾಂಗ್ರೆಸ್ ಸೇರುವಿರಾ?’ ಎಂಬ ಸುದ್ದಿಗಾರರ ಪ್ರಶ್ನೆಗೆ ಅವರು ಹೀಗೇ ಪ್ರತಿಕ್ರಿಯಿಸಿದರು. ‘ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಈ ಯಾವ ಪಕ್ಷಗಳೂ ಮುಳುಗುವ ಹಡಗುಗಳಲ್ಲ. ಅವು ಜನರೊಂದಿಗೆ ತೇಲುವಂಥವು; ಇರುವಂಥವು’ ಎಂದು ಅವರು ಹೇಳಿದರು.</p>.<p>‘ಭಾರತ್ ಜೋಡೊ ಯಾತ್ರೆಯಿಂದ ಕಾಂಗ್ರೆಸ್ಗೆ ಶಕ್ತಿ ಬರುತ್ತಿದೆ. ರಾಹುಲ್ ಗಾಂಧಿ ಬಗ್ಗೆ ಜನರಲ್ಲಿ ಕೆಟ್ಟ ಅಭಿಪ್ರಾಯ ಗಳನ್ನು ವಿರೋಧಿಗಳು ಮೂಡಿಸಿ ದ್ದರು.ಪಾದಯಾತ್ರೆಯ ಮೂಲಕ ದೇಶದಲ್ಲಿ ಪರ್ಯಾಯ ನಾಯಕ ಇದ್ದಾನೆ ಎಂದು ಅವರು ತೋರಿಸಿಕೊಟ್ಟಿದ್ದಾರೆ’ ಎಂದರು.</p>.<p>‘10 ಲಕ್ಷ ಉದ್ಯೋಗದ ಭರವಸೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಮೀಸಲಾತಿ ಆಧಾರದಲ್ಲಿ ಭರ್ತಿಗೆ ಕ್ರಮ ಕೈಗೊಳ್ಳಬೇಕು. ದುರ್ಬಲ ವರ್ಗದವರು ಉದ್ಯೋಗದಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು’ ಎಂದು ವಿಶ್ವನಾಥ್ ಅವರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>