<p><strong>ಬೆಂಗಳೂರು</strong>: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಜನ್ಮದಿನದ ಅಂಗವಾಗಿ, ಇಲ್ಲಿನ ಹನುಮಂತ ನಗರದಲ್ಲಿರುವ ‘ನಮ್ಮ ದೇವೇಗೌಡ ಅಪ್ಪಾಜಿ ಕ್ಯಾಂಟೀನ್’ನಲ್ಲಿ ₹1ಕ್ಕೆ ಮುದ್ದೆ ಊಟ ವಿತರಿಸಲಾಯಿತು.</p>.<p>ವಿಧಾನ ಪರಿಷತ್ತಿನ ಸದಸ್ಯರೂ ಆಗಿರುವ ಟಿ.ಎ. ಶರವಣ ಅವರು, ‘ಅಪ್ಪಾಜಿ ಕ್ಯಾಂಟೀನ್’ ನಡೆಸುತ್ತಿದ್ದಾರೆ. </p>.<p>ಮುದ್ದೆ ಊಟದ ಜತೆಗೇ ₹1ಕ್ಕೆ ಉಪಾಹಾರದ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಸಾವಿರಾರು ಜನರು ಸರದಿಯಲ್ಲಿ ನಿಂತು ಊಟ, ಉಪಾಹಾರ ಸವಿದರು. ಬಿಗ್ಬಾಸ್ ವಿಜೇತ ಗಿಲ್ಲಿ ನಟ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. </p>.<p>‘ಹಸಿದವರಿಗೆ ಮೊದಲು ಅನ್ನ ನೀಡಬೇಕು ಎಂಬ ದೇವೇಗೌಡರ ಆಶಯದಂತೆ 9 ವರ್ಷಗಳಿಂದ ‘ನಮ್ಮ ದೇವೇಗೌಡ ಅಪ್ಪಾಜಿ ಕ್ಯಾಂಟೀನ್’ ನಡೆಸಿಕೊಂಡು ಬರುತ್ತಿದ್ದೇನೆ. ಅತಿ ಕಡಿಮೆ ಬೆಲೆಯಲ್ಲಿ ಊಟ, ಉಪಾಹಾರ ಒದಗಿಸಲಾಗುತ್ತಿದೆ. ಪ್ರತಿ ದಿನವೂ ಗುಣಮಟ್ಟದ, ಶುಚಿ ಹಾಗೂ ರುಚಿಯಾದ ಆಹಾರ ಸಿಗುತ್ತದೆ. ಕೋವಿಡ್ ಸಮಯದಲ್ಲಿ ಈ ಕ್ಯಾಂಟೀನ್ ಲಕ್ಷಾಂತರ ಜನರ ಹಸಿವು ನೀಗಿಸಿತ್ತು’ ಎಂದು ಶರವಣ ಹೇಳಿದರು.</p>.<p>ಇದೇ ದಿನ ಪೌರ ಕಾರ್ಮಿಕರು ಮತ್ತು ಆಟೊರಿಕ್ಷಾ ಚಾಲಕರಿಗೆ ಉಚಿತವಾಗಿ ಬಟ್ಟೆಗಳನ್ನು ವಿತರಿಸಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಜನ್ಮದಿನದ ಅಂಗವಾಗಿ, ಇಲ್ಲಿನ ಹನುಮಂತ ನಗರದಲ್ಲಿರುವ ‘ನಮ್ಮ ದೇವೇಗೌಡ ಅಪ್ಪಾಜಿ ಕ್ಯಾಂಟೀನ್’ನಲ್ಲಿ ₹1ಕ್ಕೆ ಮುದ್ದೆ ಊಟ ವಿತರಿಸಲಾಯಿತು.</p>.<p>ವಿಧಾನ ಪರಿಷತ್ತಿನ ಸದಸ್ಯರೂ ಆಗಿರುವ ಟಿ.ಎ. ಶರವಣ ಅವರು, ‘ಅಪ್ಪಾಜಿ ಕ್ಯಾಂಟೀನ್’ ನಡೆಸುತ್ತಿದ್ದಾರೆ. </p>.<p>ಮುದ್ದೆ ಊಟದ ಜತೆಗೇ ₹1ಕ್ಕೆ ಉಪಾಹಾರದ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಸಾವಿರಾರು ಜನರು ಸರದಿಯಲ್ಲಿ ನಿಂತು ಊಟ, ಉಪಾಹಾರ ಸವಿದರು. ಬಿಗ್ಬಾಸ್ ವಿಜೇತ ಗಿಲ್ಲಿ ನಟ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. </p>.<p>‘ಹಸಿದವರಿಗೆ ಮೊದಲು ಅನ್ನ ನೀಡಬೇಕು ಎಂಬ ದೇವೇಗೌಡರ ಆಶಯದಂತೆ 9 ವರ್ಷಗಳಿಂದ ‘ನಮ್ಮ ದೇವೇಗೌಡ ಅಪ್ಪಾಜಿ ಕ್ಯಾಂಟೀನ್’ ನಡೆಸಿಕೊಂಡು ಬರುತ್ತಿದ್ದೇನೆ. ಅತಿ ಕಡಿಮೆ ಬೆಲೆಯಲ್ಲಿ ಊಟ, ಉಪಾಹಾರ ಒದಗಿಸಲಾಗುತ್ತಿದೆ. ಪ್ರತಿ ದಿನವೂ ಗುಣಮಟ್ಟದ, ಶುಚಿ ಹಾಗೂ ರುಚಿಯಾದ ಆಹಾರ ಸಿಗುತ್ತದೆ. ಕೋವಿಡ್ ಸಮಯದಲ್ಲಿ ಈ ಕ್ಯಾಂಟೀನ್ ಲಕ್ಷಾಂತರ ಜನರ ಹಸಿವು ನೀಗಿಸಿತ್ತು’ ಎಂದು ಶರವಣ ಹೇಳಿದರು.</p>.<p>ಇದೇ ದಿನ ಪೌರ ಕಾರ್ಮಿಕರು ಮತ್ತು ಆಟೊರಿಕ್ಷಾ ಚಾಲಕರಿಗೆ ಉಚಿತವಾಗಿ ಬಟ್ಟೆಗಳನ್ನು ವಿತರಿಸಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>