ಭೇಟಿಯ ನಂತರ ಶರಣ ಪ್ರಕಾಶ ಪಾಟೀಲ ಮಾತನಾಡಿ, ‘ರಾಯಚೂರು ನಗರದಲ್ಲಿ ಏಮ್ಸ್ ಸ್ಥಾಪನೆ ಆಗಬೇಕೆಂದು ನಡೆಸಲಾಗುತ್ತಿರುವ ಹೋರಾಟ 636 ದಿನಗಳಿಗೆ ತಲುಪಿದೆ. ಜಿಲ್ಲೆಗೆ ಏಮ್ಸ್ ಮಂಜೂರು ಮಾಡುವುದರಿಂದ ಆಗುವ ಅನುಕೂಲತೆಗಳ ಬಗ್ಗೆ, ಜನರ ಜೀವನ ಮಟ್ಟದಲ್ಲಾಗುವ ಬದಲಾವಣೆಗಳ ಬಗ್ಗೆ ವಿವರವಾಗಿ ಸಚಿವರಿಗೆ ತಿಳಿಸಲಾಗಿದೆ. ಬಜೆಟ್ ಅಧಿವೇಶನ ಮುಗಿಯುವ ಮುನ್ನವೇ ಘೋಷಣೆ ಮಾಡುವಂತೆಯೂ ಒತ್ತಾಯಿಸಲಾಗಿದೆ’ ಎಂದರು.