<p><strong>ರಾಯಚೂರು</strong>: ದೇವರ ಹೆಸರಿನಲ್ಲಿ ಶಾಲಾ ಜಾಗ ಒತ್ತುವರಿ ಮಾಡಿದ್ದನ್ನು ತೆರವುಗೊಳಿಸಿ ಪ್ರೌಢಶಾಲೆ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆ (ಎಐಆರ್ ಎಸ್ ) ಜಿಲ್ಲಾ ಸಮಿತಿಯು ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಆಯುಕ್ತರಿಗೆ ಮನವಿ ಸಲ್ಲಿಸಿದೆ.</p>.<p>ರಾಯಚೂರು ನಗರದ ಎಲ್.ಬಿ.ಎಸ್ ನಗರದ ಅಲ್ಲಮಪ್ರಭು ಕಾಲೊನಿಯ ಸರ್ಕಾರಿ ಪ್ರೌಢಶಾಲೆ ನಿರ್ಮಾಣಕ್ಕೆ ವಿಶ್ವನಾಥ ಕಾಲೊನಿಯ ಸರ್ವೆ ನಂಬರ್ 384/1ರ 17.84 ಮೀ. ಅಗಲ, 57 ಮೀ. ಉದ್ದದ ಸಿ.ಎ ಸೈಟನ್ನು ನೀಡಿದ್ದು, ಸ್ಥಳೀಯ ಕೆಲವರು ನಿವೇಶನ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ದೂರಿದೆ.</p>.<p>ಭೂಗಳ್ಳರು ಶಿವಲಿಂಗ ಇಟ್ಟು ಒತ್ತುವರಿ ಮಾಡಿಕೊಂಡಿದ್ದು ಕಾಮಗಾರಿ ಮಾಡಬೇಕಿರುವ ಪಿಡಬ್ಲ್ಯೂಡಿ ಇಲಾಖೆಯ ಅಧಿಕಾರಿಗಳಿಗೆ ಅಡ್ಡಿಪಡಿಸುತ್ತಿದ್ದಾರೆ. ಶಾಲೆಯ ಜಾಗ ಒತ್ತುವರಿ ಮಾಡಿಕೊಂಡಿದ್ದರಿಂದ ಚಂದ್ರಬಂಡಾ ಮಾರ್ಗದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಬೋಧನೆ ಮಾಡಲಾಗುತ್ತಿದೆ. ಈ ಬಗ್ಗೆ ಶಿಕ್ಷಣ ಇಲಾಖೆಯ ಸಚಿವರಿಗೆ, ಸ್ಥಳೀಯ ಶಾಸಕರಿಗೆ, ಇಲಾಖೆಯ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿ, ಹೋರಾಟ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅಜೀಜ್ ಜಾಗೀರದಾರ್, ರವಿ ಬೇಸರ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ದೇವರ ಹೆಸರಿನಲ್ಲಿ ಶಾಲಾ ಜಾಗ ಒತ್ತುವರಿ ಮಾಡಿದ್ದನ್ನು ತೆರವುಗೊಳಿಸಿ ಪ್ರೌಢಶಾಲೆ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆ (ಎಐಆರ್ ಎಸ್ ) ಜಿಲ್ಲಾ ಸಮಿತಿಯು ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಆಯುಕ್ತರಿಗೆ ಮನವಿ ಸಲ್ಲಿಸಿದೆ.</p>.<p>ರಾಯಚೂರು ನಗರದ ಎಲ್.ಬಿ.ಎಸ್ ನಗರದ ಅಲ್ಲಮಪ್ರಭು ಕಾಲೊನಿಯ ಸರ್ಕಾರಿ ಪ್ರೌಢಶಾಲೆ ನಿರ್ಮಾಣಕ್ಕೆ ವಿಶ್ವನಾಥ ಕಾಲೊನಿಯ ಸರ್ವೆ ನಂಬರ್ 384/1ರ 17.84 ಮೀ. ಅಗಲ, 57 ಮೀ. ಉದ್ದದ ಸಿ.ಎ ಸೈಟನ್ನು ನೀಡಿದ್ದು, ಸ್ಥಳೀಯ ಕೆಲವರು ನಿವೇಶನ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ದೂರಿದೆ.</p>.<p>ಭೂಗಳ್ಳರು ಶಿವಲಿಂಗ ಇಟ್ಟು ಒತ್ತುವರಿ ಮಾಡಿಕೊಂಡಿದ್ದು ಕಾಮಗಾರಿ ಮಾಡಬೇಕಿರುವ ಪಿಡಬ್ಲ್ಯೂಡಿ ಇಲಾಖೆಯ ಅಧಿಕಾರಿಗಳಿಗೆ ಅಡ್ಡಿಪಡಿಸುತ್ತಿದ್ದಾರೆ. ಶಾಲೆಯ ಜಾಗ ಒತ್ತುವರಿ ಮಾಡಿಕೊಂಡಿದ್ದರಿಂದ ಚಂದ್ರಬಂಡಾ ಮಾರ್ಗದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಬೋಧನೆ ಮಾಡಲಾಗುತ್ತಿದೆ. ಈ ಬಗ್ಗೆ ಶಿಕ್ಷಣ ಇಲಾಖೆಯ ಸಚಿವರಿಗೆ, ಸ್ಥಳೀಯ ಶಾಸಕರಿಗೆ, ಇಲಾಖೆಯ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿ, ಹೋರಾಟ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅಜೀಜ್ ಜಾಗೀರದಾರ್, ರವಿ ಬೇಸರ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>