ಭೂ ಪರಿವರ್ತನೆ, ತತ್ಕಾಲ್ ಪೋಡಿ, ಹದ್ದುಬಸ್ತು, 11–ಇ ನಕ್ಷೆ ಸೇರಿದಂತೆ ಇಲಾಖೆ ಒದಗಿ
ಸುವ ಸೇವೆಗಳಿಗೆ ಅರ್ಜಿ ಸಲ್ಲಿಸಲು ಇದುವರೆಗೂ ಹೋಬಳಿಮಟ್ಟದ ನಾಡಕಚೇರಿ, ಇಲ್ಲವೇ ತಾಲ್ಲೂಕು ಕಚೇರಿಗಳಲ್ಲಿನ ಅಟಲ್ಜಿ ಜನಸ್ನೇಹಿ ಕೇಂದ್ರಗಳಿಗೆ ತೆರಳಬೇಕಿತ್ತು. ಪ್ರತಿ ತಾಲ್ಲೂಕು ಸುಮಾರು 30ರಿಂದ 40 ಹಾಗೂ ಹೋಬಳಿಗಳು ಐದಾರು ಗ್ರಾಮ ಪಂಚಾಯಿತಿಗಳನ್ನು ಒಳಗೊಂಡಿದ್ದು, ಸಾವಿರಾರು ಜನರು ಸೇವೆ ಪಡೆಯಲು ಸರದಿಯಲ್ಲಿ ನಿಲ್ಲುವ ಸ್ಥಿತಿ ಇದೆ. ಬಾಪೂಜಿ ಕೇಂದ್ರಗಳಲ್ಲೇ ಅರ್ಜಿ ಸಲ್ಲಿಕೆಗೆ ಅವಕಾಶ ನೀಡುವುದರಿಂದ ಅನಗತ್ಯ ಅಲೆದಾಟ ತಪ್ಪಲಿದೆ. ಸಮಯ, ವೆಚ್ಚದ ಉಳಿತಾಯವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ವಿವರಿಸಿದೆ.