ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಪ್ರದೇಶ: 2 ಮಕ್ಕಳನ್ನು ಹತ್ಯೆ ಮಾಡಿದ ವ್ಯಕ್ತಿ ಎನ್‌ಕೌಂಟರ್‌ಗೆ ಬಲಿ

Published 20 ಮಾರ್ಚ್ 2024, 3:22 IST
Last Updated 20 ಮಾರ್ಚ್ 2024, 3:22 IST
ಅಕ್ಷರ ಗಾತ್ರ

ಬದೌನ್‌: ಕ್ಷೌರಿಕನೊಬ್ಬ ಇಬ್ಬರು ಮಕ್ಕಳ ಮೇಲೆ ದಾಳಿ ಮಾಡಿ, ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಈ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆ ವ್ಯಕ್ತಿಯನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ.

ದಾಳಿ ಮಾಡಿದ ಬಾರ್ಬರ್‌ನನ್ನು ಸಾಜಿದ್‌ (22) ಎಂದು ಗುರುತಿಸಲಾಗಿದೆ.

ಇಲ್ಲಿನ ಬಾಬಾ ಕಾಲೋನಿಯಲ್ಲಿ ಸಾಜಿದ್‌ ಬಾರ್ಬಾರ್‌ ಶಾಪ್‌ ನಡೆಸುತ್ತಿದ್ದ. ಇದರ ಎದುರಿನ ಮನೆಗೆ ಹೋಗಿ ಮನೆಯ ಟೆರಸ್‌ ಮೇಲೆ ಆಟವಾಡುತ್ತಿದ್ದ ಮೂವರು ಮಕ್ಕಳ ಮೇಲೆ ದಾಳಿ ಮಾಡಿದ್ದಾನೆ. ಘಟನೆಯಲ್ಲಿ ಆಯುಷ್‌ (12) ಮತ್ತು ಆಯಾನ್‌ (8) ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬ ಬಾಲಕ ಯುವರಾಜ್‌ (10) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. 

ಇಲ್ಲಿನ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ಸಮೀಪದಲ್ಲೇ ಈ ಘಟನೆ ನಡೆದಿದೆ. 

ಘಟನೆ ತಿಳಿದ ಸ್ಥಳಕ್ಕೆ ಹೋಗುವಷ್ಟರಲ್ಲಿ ಸಾಜಿದ್‌ ಅಲ್ಲಿಂದ ಪರಾರಿಯಾಗಿದ್ದ. ಅವನ ಬೆನ್ನತ್ತಿದ ಪೊಲೀಸರು ಇಲ್ಲಿನ ಹೊರವಲಯದಲ್ಲಿರುವ ಕಾಡಿನಲ್ಲಿ ಪತ್ತೆ ಮಾಡಿದ್ದರು. ಸಾಜಿದ್‌ನನ್ನು ಬಂಧಿಸುವ ವೇಳೆಯಲ್ಲಿ ಅವನು ಪೊಲೀಸರ ಮೇಲೆ ಗುಂಡು ಹಾರಿಸಲು ಯತ್ನಿಸಿದ್ದ. ಈ ವೇಳೆ ಪೊಲೀಸರು ಎನ್‌ಕೌಂಟರ್‌ ಮಾಡಿದ್ದರಿಂದ ಗುಂಡು ತಗುಲಿ ಸಾಜಿದ್‌ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ವೈಯಕ್ತಿಕ ಕಾರಣಗಳಿಗಾಗಿ ಸಾಜಿದ್‌ ಮಕ್ಕಳ ಮೇಲೆ ದಾಳಿ ಮಾಡಿದ್ದಾನೆ. ಸಾಜಿದ್‌ ಒಬ್ಬನೇ ಈ ಕೃತ್ಯವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT