ಗ್ಯಾರಂಟಿ ಯೋಜನೆಗಳು ಬಿಟ್ಟಿ ಭಾಗ್ಯಗಳು ಎಂಬ ಬಿಜೆಪಿ ನಾಯಕರ ಟೀಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ʼಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಈವರೆಗೆ ಅಂಬಾನಿ, ಅದಾನಿಯಂತಹ ಕೆಲವೇ ಮಂದಿ ಶ್ರೀಮಂತರ ₹ 20 ಲಕ್ಷ ಕೋಟಿಯಷ್ಟು ಸಾಲವನ್ನು ಮನ್ನಾ ಮಾಡಲಾಗಿದೆ. ಇದು ಯಾವ ಭಾಗ್ಯ ಎಂಬುದನ್ನು ಬಿಜೆಪಿ ನಾಯಕರು ಹೇಳಬೇಕುʼ ಎಂದರು.