<p><strong>ಬೆಂಗಳೂರು:</strong> ‘ಮನುವಾದಿ ಆರ್ಎಸ್ಎಸ್, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಸಂವಿಧಾನ ವಿರೋಧಿಗಳು. ಇವರೇ ನಿಜವಾಗಿಯೂ ಮೀಸಲಾತಿ ವಿರೋಧಿಗಳು. ಆರ್ಎಸ್ಎಸ್ನ ಪ್ರಮುಖ ಹುದ್ದೆಗಳಲ್ಲಿ ದಲಿತರು ಇದ್ದಾರಾ’ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್ ಪ್ರಶ್ನಿಸಿದರು.</p>.<p>‘ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆ ಕತ್ತರಿಸಿದರೆ ₹11 ಲಕ್ಷ ಬಹುಮಾನ ನೀಡುತ್ತೇನೆ’ ಎಂದಿದ್ದ ಮಹಾರಾಷ್ಟ್ರದ ಶಿವಸೇನಾ (ಶಿಂಧೆ ಬಣ) ನಾಯಕ ಸಂಜಯ್ ಗಾಯಕ್ವಾಡ್ ಹೇಳಿಕೆ ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಂಗಳವಾರ ನಡೆಸಿದ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದರು.</p>.<p>‘ಮೀಸಲಾತಿ ಜಾರಿಗೆ ತಂದಿದ್ದೇ ಕಾಂಗ್ರೆಸ್. ಪಂಚಾಯತ್ ರಾಜ್ ವ್ಯವಸ್ಥೆ ತಂದು ದಲಿತರು, ಹಿಂದುಳಿದವರಿಗೆ ಮೀಸಲಾತಿ ಕೊಟ್ಟಿದ್ದೂ ಕಾಂಗ್ರೆಸ್. ಆಗ ಅದರ ವಿರುದ್ಧ ನ್ಯಾಯಾಲಯಕ್ಕೆ ಹೋಗಿದ್ದ ಬಿಜೆಪಿ ಈಗ, ಕಾಂಗ್ರೆಸ್ ಮೀಸಲಾತಿ ವಿರೋಧಿ ಎಂದು ಆರೋಪಿಸುತ್ತಿದೆ’ ಎಂದರು.</p>.<p>‘ರಾಹುಲ್ ಗಾಂಧಿ ಅವರ ಪೂರ್ಣ ಹೇಳಿಕೆಯನ್ನು ನೋಡದೆ, ತುಂಡರಿಸಿದ ತುಣುಕನ್ನಷ್ಟೇ ಬಿಜೆಪಿ ಮತ್ತು ಆರ್ಎಸ್ಎಸ್ನವರು ಹಂಚಿಕೊಳ್ಳುತ್ತಿದ್ದಾರೆ. ಈ ಮೂಲಕ ಪರಿಶಿಷ್ಟರು ಮತ್ತು ಶೋಷಿತರನ್ನು ರಾಹುಲ್ ವಿರುದ್ಧ ಎತ್ತಿಕಟ್ಟಲಾಗುತ್ತಿದೆ. ಇದನ್ನು ನಾವು ಖಂಡಿಸುತ್ತೇವೆ’ ಎಂದು ಕೆಪಿಸಿಸಿ ತನ್ನ ಪ್ರಕಟಣೆಯಲ್ಲಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮನುವಾದಿ ಆರ್ಎಸ್ಎಸ್, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಸಂವಿಧಾನ ವಿರೋಧಿಗಳು. ಇವರೇ ನಿಜವಾಗಿಯೂ ಮೀಸಲಾತಿ ವಿರೋಧಿಗಳು. ಆರ್ಎಸ್ಎಸ್ನ ಪ್ರಮುಖ ಹುದ್ದೆಗಳಲ್ಲಿ ದಲಿತರು ಇದ್ದಾರಾ’ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್ ಪ್ರಶ್ನಿಸಿದರು.</p>.<p>‘ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆ ಕತ್ತರಿಸಿದರೆ ₹11 ಲಕ್ಷ ಬಹುಮಾನ ನೀಡುತ್ತೇನೆ’ ಎಂದಿದ್ದ ಮಹಾರಾಷ್ಟ್ರದ ಶಿವಸೇನಾ (ಶಿಂಧೆ ಬಣ) ನಾಯಕ ಸಂಜಯ್ ಗಾಯಕ್ವಾಡ್ ಹೇಳಿಕೆ ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಂಗಳವಾರ ನಡೆಸಿದ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದರು.</p>.<p>‘ಮೀಸಲಾತಿ ಜಾರಿಗೆ ತಂದಿದ್ದೇ ಕಾಂಗ್ರೆಸ್. ಪಂಚಾಯತ್ ರಾಜ್ ವ್ಯವಸ್ಥೆ ತಂದು ದಲಿತರು, ಹಿಂದುಳಿದವರಿಗೆ ಮೀಸಲಾತಿ ಕೊಟ್ಟಿದ್ದೂ ಕಾಂಗ್ರೆಸ್. ಆಗ ಅದರ ವಿರುದ್ಧ ನ್ಯಾಯಾಲಯಕ್ಕೆ ಹೋಗಿದ್ದ ಬಿಜೆಪಿ ಈಗ, ಕಾಂಗ್ರೆಸ್ ಮೀಸಲಾತಿ ವಿರೋಧಿ ಎಂದು ಆರೋಪಿಸುತ್ತಿದೆ’ ಎಂದರು.</p>.<p>‘ರಾಹುಲ್ ಗಾಂಧಿ ಅವರ ಪೂರ್ಣ ಹೇಳಿಕೆಯನ್ನು ನೋಡದೆ, ತುಂಡರಿಸಿದ ತುಣುಕನ್ನಷ್ಟೇ ಬಿಜೆಪಿ ಮತ್ತು ಆರ್ಎಸ್ಎಸ್ನವರು ಹಂಚಿಕೊಳ್ಳುತ್ತಿದ್ದಾರೆ. ಈ ಮೂಲಕ ಪರಿಶಿಷ್ಟರು ಮತ್ತು ಶೋಷಿತರನ್ನು ರಾಹುಲ್ ವಿರುದ್ಧ ಎತ್ತಿಕಟ್ಟಲಾಗುತ್ತಿದೆ. ಇದನ್ನು ನಾವು ಖಂಡಿಸುತ್ತೇವೆ’ ಎಂದು ಕೆಪಿಸಿಸಿ ತನ್ನ ಪ್ರಕಟಣೆಯಲ್ಲಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>