<p><strong>ವಿಧಾನ ಪರಿಷತ್</strong>: 53,977 ಹೆಕ್ಟೇರ್ ಅಡಿಕೆ ತೋಟಗಳಲ್ಲಿ ಎಲೆಚುಕ್ಕಿ ರೋಗ ವ್ಯಾಪಿಸಿದೆ. ಔಷಧ ಸಿಂಪಡಣೆಯಿಂದ ಹಲವು ರೈತರು ಕಾಯಿಲೆಗೆ ತುತ್ತಾಗುತ್ತಿದ್ದಾರೆ ಎಂದು ಬಿಜೆಪಿಯ ಎಸ್.ರುದ್ರೇಗೌಡ ಹೇಳಿದರು.</p><p>ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಪೂರಕ ಔಷಧ ಕಂಡುಹಿಡಿಯದ ಕಾರಣ ತಜ್ಞರು ಸಲಹೆ ನೀಡುವ ಎಲ್ಲ ಔಷಧಗಳನ್ನು ಸಿಂಪಡಿಸಲಾಗುತ್ತಿದೆ. ಇದರಿಂದ ರೈತರೇ ಆರೋಗ್ಯ ಸಮಸ್ಯೆ ಎದುರಿಸುವಂತಾಗಿದೆ. ರೋಗ ಹತೋಟಿಗೆ ಹೆಚ್ಚಿನ ಸಂಶೋಧನೆ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p><p>ಅವರ ಪ್ರಶ್ನೆಗಳಿಗೆ ತೋಟಗಾರಿಕಾ ಸಚಿವರ ಪರವಾಗಿ ಉತ್ತರ ನೀಡಿದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ‘ರೋಗ ವ್ಯಾಪಿಸಿದ ತೋಟಗಳ ರೈತರಿಗೆ ₹6 ಸಾವಿರ ಮೌಲ್ಯದ ಔಷಧ ವಿತರಿಸಲಾಗುತ್ತಿದೆ. ಪ್ರತಿ ಹೆಕ್ಟೇರ್ಗೆ 1,200 ಸಹಾಯಧನ ನೀಡುತ್ತಿದ್ದೇವೆ. ಸಂಶೋಧನೆಗಾಗಿ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ₹43.61 ಲಕ್ಷ ನೀಡಲಾಗಿದೆ. ಹಾನಿ ನಿಯಂತ್ರಣಕ್ಕೆ ₹21.50 ಕೋಟಿ ಹೆಚ್ಚುವರಿ ಅನುದಾನ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ವಿವರ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಧಾನ ಪರಿಷತ್</strong>: 53,977 ಹೆಕ್ಟೇರ್ ಅಡಿಕೆ ತೋಟಗಳಲ್ಲಿ ಎಲೆಚುಕ್ಕಿ ರೋಗ ವ್ಯಾಪಿಸಿದೆ. ಔಷಧ ಸಿಂಪಡಣೆಯಿಂದ ಹಲವು ರೈತರು ಕಾಯಿಲೆಗೆ ತುತ್ತಾಗುತ್ತಿದ್ದಾರೆ ಎಂದು ಬಿಜೆಪಿಯ ಎಸ್.ರುದ್ರೇಗೌಡ ಹೇಳಿದರು.</p><p>ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಪೂರಕ ಔಷಧ ಕಂಡುಹಿಡಿಯದ ಕಾರಣ ತಜ್ಞರು ಸಲಹೆ ನೀಡುವ ಎಲ್ಲ ಔಷಧಗಳನ್ನು ಸಿಂಪಡಿಸಲಾಗುತ್ತಿದೆ. ಇದರಿಂದ ರೈತರೇ ಆರೋಗ್ಯ ಸಮಸ್ಯೆ ಎದುರಿಸುವಂತಾಗಿದೆ. ರೋಗ ಹತೋಟಿಗೆ ಹೆಚ್ಚಿನ ಸಂಶೋಧನೆ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p><p>ಅವರ ಪ್ರಶ್ನೆಗಳಿಗೆ ತೋಟಗಾರಿಕಾ ಸಚಿವರ ಪರವಾಗಿ ಉತ್ತರ ನೀಡಿದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ‘ರೋಗ ವ್ಯಾಪಿಸಿದ ತೋಟಗಳ ರೈತರಿಗೆ ₹6 ಸಾವಿರ ಮೌಲ್ಯದ ಔಷಧ ವಿತರಿಸಲಾಗುತ್ತಿದೆ. ಪ್ರತಿ ಹೆಕ್ಟೇರ್ಗೆ 1,200 ಸಹಾಯಧನ ನೀಡುತ್ತಿದ್ದೇವೆ. ಸಂಶೋಧನೆಗಾಗಿ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ₹43.61 ಲಕ್ಷ ನೀಡಲಾಗಿದೆ. ಹಾನಿ ನಿಯಂತ್ರಣಕ್ಕೆ ₹21.50 ಕೋಟಿ ಹೆಚ್ಚುವರಿ ಅನುದಾನ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ವಿವರ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>