<p><strong>ಸುವರ್ಣವಿಧಾನಸೌಧ(ಬೆಳಗಾವಿ):</strong> ರಾಜ್ಯದ 10 ಜಿಲ್ಲೆಗಳಲ್ಲಿ 92,000 ಎಕರೆ ಪ್ರದೇಶದಲ್ಲಿನ ಅಡಿಕೆ ಬೆಳೆ ಕೊಳೆರೋಗಕ್ಕೆ ತುತ್ತಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.</p>.<p>ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರ ಪ್ರಶ್ನೆಗೆ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಪರವಾಗಿ ಉತ್ತರ ನೀಡಿದರು.</p>.<p>‘ಎನ್ಡಿಆರ್ಎಫ್ನಿಂದ ಪರಿಹಾರ ನೀಡಲು ಸಾಧ್ಯವಿಲ್ಲ. ಇಲಾಖೆಯಿಂದಲೂ ಪರಿಹಾರ ನೀಡುವ ಯೋಜನೆ ಇಲ್ಲ. ಆದರೆ, ಹವಾಮಾನ ಆಧಾರಿತ ವಿಮೆಯಿಂದ ಬೆಳೆಗಾರರಿಗೆ ಸ್ಪಲ್ಪಮಟ್ಟಿಗೆ ಅನುಕೂಲ ಆಗಬಹುದು’ ಎಂದು ಹೇಳಿದರು.</p>.<p>2025–26 ನೇ ಸಾಲಿನಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ ವಿಶೇಷ ಮಧ್ಯಪ್ರವೇಶ ಕಾರ್ಯಕ್ರಮದಡಿ ಎಲೆಚುಕ್ಕಿ ರೋಗ ನಿಯಂತ್ರಣ ಕಾರ್ಯಕ್ರಮಕ್ಕೆ ₹8.60 ಕೋಟಿ ನಿಗದಿ ಮಾಡಲಾಗಿದೆ. ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಜಿಲ್ಲೆಗಳಿಗೆ ಅಡಿಕೆ ಬೆಳೆ ಅಧಿಸೂಚಿತವಾಗಿದ್ದು, ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟವಾದರೆ ಈ ಯೋಜನೆಯಡಿ ವಿಮೆ ಪರಿಹಾರ ಒದಗಿಸಲಾಗುತ್ತದೆ ಎಂದು ಹೇಳಿದರು.</p>.<p>ಎಲೆಚುಕ್ಕೆ ರೋಗ, ಹಳದಿ ಎಲೆ ರೋಗ, ಕೊಳೆ ರೋಗಗಳ ನಿರ್ವಹಣೆಗಾಗಿ ರೋಗಬಾಧಿತ ಸಸ್ಯ ಭಾಗ ತೆಗೆಯುವುದು, ಸಸ್ಯ ಸಂರಕ್ಷಣಾ ಕ್ರಮ ಮತ್ತು ಪೋಷಕಾಂಶಗಳ ಸಮಗ್ರ ನಿರ್ವಹಣೆ ಸಹಾಯಧನಕ್ಕಾಗಿ ₹577.76 ಕೋಟಿ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಎಂಐಡಿಎಚ್ ಮಾರ್ಗಸೂಚಿ ಅನ್ವಯ ಶೇ 30 ರ ಸಹಾಯಧನದಂತೆ ಕೇಂದ್ರದ ಪಾಲು ₹103.99 ಕೋಟಿ ಹಾಗೂ ರಾಜ್ಯದ ಪಾಲು ₹69.33 ಕೋಟಿ ಸೇರಿ ₹173.32 ಕೋಟಿ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.</p>.<p>ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅಡಿಕೆ ಮತ್ತು ತೆಂಗು ಬೆಳೆ ಸೇರಿದಂತೆ ಇತರ ತೋಟಗಾರಿಕಾ ಬೆಳೆಗಳ ಸಮಗ್ರ ನಿರ್ವಹಣೆಗೆ ₹5,000 ಪ್ರತಿ ಹೆಕ್ಟೇರ್ ಘಟಕ ವೆಚ್ಚದಲ್ಲಿ ಶೇ 30 ರಂತೆ ಪ್ರತಿ ಹೆಕ್ಟೇರ್ಗೆ ₹1500 ರಂತೆ 2 ಹೆಕ್ಟೇರ್ವರೆಗೆ ₹3,000 ಸಹಾಯಧನ ನೀಡಲಾಗುತ್ತದೆ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುವರ್ಣವಿಧಾನಸೌಧ(ಬೆಳಗಾವಿ):</strong> ರಾಜ್ಯದ 10 ಜಿಲ್ಲೆಗಳಲ್ಲಿ 92,000 ಎಕರೆ ಪ್ರದೇಶದಲ್ಲಿನ ಅಡಿಕೆ ಬೆಳೆ ಕೊಳೆರೋಗಕ್ಕೆ ತುತ್ತಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.</p>.<p>ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರ ಪ್ರಶ್ನೆಗೆ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಪರವಾಗಿ ಉತ್ತರ ನೀಡಿದರು.</p>.<p>‘ಎನ್ಡಿಆರ್ಎಫ್ನಿಂದ ಪರಿಹಾರ ನೀಡಲು ಸಾಧ್ಯವಿಲ್ಲ. ಇಲಾಖೆಯಿಂದಲೂ ಪರಿಹಾರ ನೀಡುವ ಯೋಜನೆ ಇಲ್ಲ. ಆದರೆ, ಹವಾಮಾನ ಆಧಾರಿತ ವಿಮೆಯಿಂದ ಬೆಳೆಗಾರರಿಗೆ ಸ್ಪಲ್ಪಮಟ್ಟಿಗೆ ಅನುಕೂಲ ಆಗಬಹುದು’ ಎಂದು ಹೇಳಿದರು.</p>.<p>2025–26 ನೇ ಸಾಲಿನಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ ವಿಶೇಷ ಮಧ್ಯಪ್ರವೇಶ ಕಾರ್ಯಕ್ರಮದಡಿ ಎಲೆಚುಕ್ಕಿ ರೋಗ ನಿಯಂತ್ರಣ ಕಾರ್ಯಕ್ರಮಕ್ಕೆ ₹8.60 ಕೋಟಿ ನಿಗದಿ ಮಾಡಲಾಗಿದೆ. ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಜಿಲ್ಲೆಗಳಿಗೆ ಅಡಿಕೆ ಬೆಳೆ ಅಧಿಸೂಚಿತವಾಗಿದ್ದು, ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟವಾದರೆ ಈ ಯೋಜನೆಯಡಿ ವಿಮೆ ಪರಿಹಾರ ಒದಗಿಸಲಾಗುತ್ತದೆ ಎಂದು ಹೇಳಿದರು.</p>.<p>ಎಲೆಚುಕ್ಕೆ ರೋಗ, ಹಳದಿ ಎಲೆ ರೋಗ, ಕೊಳೆ ರೋಗಗಳ ನಿರ್ವಹಣೆಗಾಗಿ ರೋಗಬಾಧಿತ ಸಸ್ಯ ಭಾಗ ತೆಗೆಯುವುದು, ಸಸ್ಯ ಸಂರಕ್ಷಣಾ ಕ್ರಮ ಮತ್ತು ಪೋಷಕಾಂಶಗಳ ಸಮಗ್ರ ನಿರ್ವಹಣೆ ಸಹಾಯಧನಕ್ಕಾಗಿ ₹577.76 ಕೋಟಿ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಎಂಐಡಿಎಚ್ ಮಾರ್ಗಸೂಚಿ ಅನ್ವಯ ಶೇ 30 ರ ಸಹಾಯಧನದಂತೆ ಕೇಂದ್ರದ ಪಾಲು ₹103.99 ಕೋಟಿ ಹಾಗೂ ರಾಜ್ಯದ ಪಾಲು ₹69.33 ಕೋಟಿ ಸೇರಿ ₹173.32 ಕೋಟಿ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.</p>.<p>ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅಡಿಕೆ ಮತ್ತು ತೆಂಗು ಬೆಳೆ ಸೇರಿದಂತೆ ಇತರ ತೋಟಗಾರಿಕಾ ಬೆಳೆಗಳ ಸಮಗ್ರ ನಿರ್ವಹಣೆಗೆ ₹5,000 ಪ್ರತಿ ಹೆಕ್ಟೇರ್ ಘಟಕ ವೆಚ್ಚದಲ್ಲಿ ಶೇ 30 ರಂತೆ ಪ್ರತಿ ಹೆಕ್ಟೇರ್ಗೆ ₹1500 ರಂತೆ 2 ಹೆಕ್ಟೇರ್ವರೆಗೆ ₹3,000 ಸಹಾಯಧನ ನೀಡಲಾಗುತ್ತದೆ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>