<p><strong>ಬೆಂಗಳೂರು</strong>: ತುಮಕೂರು ಹೊರವಲಯದ ಅಂತರಸನಹಳ್ಳಿಯ ಎರಡು ಗೋದಾಮುಗಳ ಮೇಲೆ ದಾಳಿ ಮಾಡಿರುವ ವಾಣಿಜ್ಯ ತೆರಿಗೆ ಅಧಿಕಾರಿಗಳು, ಅಕ್ರಮವಾಗಿ ದಾಸ್ತಾನಿಟ್ಟಿದ್ದ 4,670 ಕ್ವಿಂಟಲ್ ಅಡಿಕೆಯನ್ನು ಪತ್ತೆ ಹಚ್ಚಿ ತೆರಿಗೆ ಮತ್ತು ದಂಡ ಸೇರಿ ₹ 72 ಲಕ್ಷ ವಸೂಲು ಮಾಡಿದ್ದಾರೆ.</p>.<p>ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಕಮಿಷನರ್ ನಿತೇಶ್ ಪಾಟೀಲ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದಾಗ ಗೋದಾಮಿನ ಮಾಲೀಕರು ಹಾಗೂ ಕೆಲಸಗಾರರು ಪ್ರತಿರೋಧ ತೋರಿದರು. ಇದು ಅಕ್ಕಿ ಗಿರಣಿಯಾಗಿದ್ದು ಭತ್ತ ದಾಸ್ತಾನು ಮಾಡಲಾಗಿದೆ ಎಂದು ದಿಕ್ಕು ತಪ್ಪಿಸಲು ಪ್ರಯತ್ನಿಸಿದರು ಎನ್ನಲಾಗಿದೆ.</p>.<p>ಆದರೆ, ಅಧಿಕೃತ ಅನುಮತಿಯೊಂದಿಗೆ ಬಂದಿದ್ದ ಅಧಿಕಾರಿಗಳ ತಂಡ ಬಲವಂತವಾಗಿ ಗೋದಾಮುಗಳಿಗೆ ಪ್ರವೇಶಿಸಿದಾಗ ₹ 12 ಕೋಟಿ ಮೌಲ್ಯದ 4,670 ಕ್ವಿಂಟಲ್ ಅಡಿಕೆ ಪತ್ತೆಯಾಯಿತು. ಅಗತ್ಯ ದಾಖಲೆಗಳಿಲ್ಲದೆ ತೆರಿಗೆ ತಪ್ಪಿಸಿ ಅಕ್ರಮವಾಗಿ ದಾಸ್ತಾನು ಇಡಲಾಗಿತ್ತು.</p>.<p>ಪ್ರಕರಣ ದಾಖಲಿಸಿಕೊಂಡ ವಾಣಿಜ್ಯ ತೆರಿಗೆ ಅಧಿಕಾರಿಗಳು ಒಂದು ಗೋದಾಮು ಜಪ್ತಿ ಮಾಡಿದ್ದಾರೆ. ಭಾಗಶಃ ದಂಡ ಮತ್ತು ತೆರಿಗೆ ಹಣ ವಸೂಲು ಮಾಡಿದ್ದಾರೆ. ದಂಡ ಹಾಗೂ ತೆರಿಗೆ ಒಟ್ಟು ₹ 1.2 ಕೋಟಿ ಆಗಲಿದೆ. ತನಿಖೆ ಮುಂದುವರಿದಿರುವುದರಿಂದ ಅಡಿಕೆ ಮಾಲೀಕರ ಹೆಸರನ್ನು ಗೌಪ್ಯವಾಗಿ ಇಡಲಾಗಿದೆ.</p>.<p>ತುಮಕೂರು, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಅಡಿಕೆಯನ್ನು ಅಧಿಕ ಪ್ರಮಾಣದಲ್ಲಿ ಬೆಳೆಯುತ್ತಿದ್ದು, ತೆರಿಗೆ ತಪ್ಪಿಸಿ ಖರೀದಿ, ಸಾಗಣೆ ಹಾಗೂ ದಾಸ್ತಾನು ಮಾಡಲಾಗುತ್ತಿದೆ. ಅಕ್ರಮ ದಾಸ್ತಾನು ವಿರುದ್ಧ ಕಾರ್ಯಾಚರಣೆ ಮುಂದುವರಿದಿದೆ ಎಂದು ನಿತೇಶ್ ಪಾಟೀಲ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ತುಮಕೂರು ಹೊರವಲಯದ ಅಂತರಸನಹಳ್ಳಿಯ ಎರಡು ಗೋದಾಮುಗಳ ಮೇಲೆ ದಾಳಿ ಮಾಡಿರುವ ವಾಣಿಜ್ಯ ತೆರಿಗೆ ಅಧಿಕಾರಿಗಳು, ಅಕ್ರಮವಾಗಿ ದಾಸ್ತಾನಿಟ್ಟಿದ್ದ 4,670 ಕ್ವಿಂಟಲ್ ಅಡಿಕೆಯನ್ನು ಪತ್ತೆ ಹಚ್ಚಿ ತೆರಿಗೆ ಮತ್ತು ದಂಡ ಸೇರಿ ₹ 72 ಲಕ್ಷ ವಸೂಲು ಮಾಡಿದ್ದಾರೆ.</p>.<p>ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಕಮಿಷನರ್ ನಿತೇಶ್ ಪಾಟೀಲ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದಾಗ ಗೋದಾಮಿನ ಮಾಲೀಕರು ಹಾಗೂ ಕೆಲಸಗಾರರು ಪ್ರತಿರೋಧ ತೋರಿದರು. ಇದು ಅಕ್ಕಿ ಗಿರಣಿಯಾಗಿದ್ದು ಭತ್ತ ದಾಸ್ತಾನು ಮಾಡಲಾಗಿದೆ ಎಂದು ದಿಕ್ಕು ತಪ್ಪಿಸಲು ಪ್ರಯತ್ನಿಸಿದರು ಎನ್ನಲಾಗಿದೆ.</p>.<p>ಆದರೆ, ಅಧಿಕೃತ ಅನುಮತಿಯೊಂದಿಗೆ ಬಂದಿದ್ದ ಅಧಿಕಾರಿಗಳ ತಂಡ ಬಲವಂತವಾಗಿ ಗೋದಾಮುಗಳಿಗೆ ಪ್ರವೇಶಿಸಿದಾಗ ₹ 12 ಕೋಟಿ ಮೌಲ್ಯದ 4,670 ಕ್ವಿಂಟಲ್ ಅಡಿಕೆ ಪತ್ತೆಯಾಯಿತು. ಅಗತ್ಯ ದಾಖಲೆಗಳಿಲ್ಲದೆ ತೆರಿಗೆ ತಪ್ಪಿಸಿ ಅಕ್ರಮವಾಗಿ ದಾಸ್ತಾನು ಇಡಲಾಗಿತ್ತು.</p>.<p>ಪ್ರಕರಣ ದಾಖಲಿಸಿಕೊಂಡ ವಾಣಿಜ್ಯ ತೆರಿಗೆ ಅಧಿಕಾರಿಗಳು ಒಂದು ಗೋದಾಮು ಜಪ್ತಿ ಮಾಡಿದ್ದಾರೆ. ಭಾಗಶಃ ದಂಡ ಮತ್ತು ತೆರಿಗೆ ಹಣ ವಸೂಲು ಮಾಡಿದ್ದಾರೆ. ದಂಡ ಹಾಗೂ ತೆರಿಗೆ ಒಟ್ಟು ₹ 1.2 ಕೋಟಿ ಆಗಲಿದೆ. ತನಿಖೆ ಮುಂದುವರಿದಿರುವುದರಿಂದ ಅಡಿಕೆ ಮಾಲೀಕರ ಹೆಸರನ್ನು ಗೌಪ್ಯವಾಗಿ ಇಡಲಾಗಿದೆ.</p>.<p>ತುಮಕೂರು, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಅಡಿಕೆಯನ್ನು ಅಧಿಕ ಪ್ರಮಾಣದಲ್ಲಿ ಬೆಳೆಯುತ್ತಿದ್ದು, ತೆರಿಗೆ ತಪ್ಪಿಸಿ ಖರೀದಿ, ಸಾಗಣೆ ಹಾಗೂ ದಾಸ್ತಾನು ಮಾಡಲಾಗುತ್ತಿದೆ. ಅಕ್ರಮ ದಾಸ್ತಾನು ವಿರುದ್ಧ ಕಾರ್ಯಾಚರಣೆ ಮುಂದುವರಿದಿದೆ ಎಂದು ನಿತೇಶ್ ಪಾಟೀಲ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>