<p><strong>ನವದೆಹಲಿ</strong>: ಅಡಿಕೆ ಕ್ಯಾನ್ಸರ್ಗೆ ಕಾರಣವಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಪತ್ತೆ ಹಚ್ಚಲು ಶೀಘ್ರದಲ್ಲಿ ಸಂಶೋಧನೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಐಸಿಎಆರ್ಗೆ ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ್ ನಿರ್ದೇಶನ ನೀಡಿದರು. </p>.<p>ಕರ್ನಾಟಕದ ಸಂಸದರ ನಿಯೋಗ ಮತ್ತು ಕೇಂದ್ರ ಸಚಿವರ ಜತೆಗೆ ಗುರುವಾರ ಉನ್ನತ ಮಟ್ಟದ ಸಭೆ ನಡೆಸಿದ ಅವರು, ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಹಿಡಿಯಲು ಶೀಘ್ರದಲ್ಲೇ ಬೆಂಗಳೂರಿಗೆ ಬರುವುದಾಗಿ ಭರವಸೆ ನೀಡಿದರು. </p>.<p>ಕೇಂದ್ರ ಭಾರಿ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ‘ನಾನಾ ಕಾರಣಗಳಿಂದ ಅಡಿಕೆ ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದು, ಈ ಬಗ್ಗೆ ಸಚಿವರ ಗಮನ ಸೆಳೆಯಲಾಯಿತು. ಬೆಳೆಗಾರರ ಸಮಸ್ಯೆಗಳನ್ನು ಕಾಲಾವಧಿಯಲ್ಲಿ ಬಗೆಹರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ’ ಎಂದರು. </p>.<p>ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ‘ಅಡಿಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಶಿವರಾಜ ಸಿಂಗ್ ಚೌಹಾಣ್ ಗಮನ ಸೆಳೆಯಲಾಗಿದೆ. ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದರು. </p>.<p>‘ಅಡಿಕೆಗೆ ಎಲೆ ಚುಕ್ಕಿ ರೋಗ ಬಂದರೆ ಮತ್ತೆ ಅಲ್ಲಿ ಅಡಿಕೆ ಕೃಷಿ ನಡೆಸಲು ಸಾಧ್ಯವಿಲ್ಲ. ಇದಕ್ಕೆ ಪರಿಹಾರ ಕಂಡುಹಿಡಿಯುವಂತೆ ಮನವಿ ಮಾಡಿದ್ದೇವೆ. ಈ ಬಗ್ಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ’ ಎಂದರು. </p>.<p>‘ಅಡಿಕೆ ಕೊಯಿಲಿಗೆ ಕಾರ್ಮಿಕರು ಸಿಗುತ್ತಿಲ್ಲ. ಫೈಬರ್ ದೋಟಿ ಬಳಸಿ ಅಡಿಕೆ ಕಟಾವು ಮಾಡಬಹುದು. ಆದರೆ, ಈ ದೋಟಿಗೆ ಶೇ 48 ಕಸ್ಟಮ್ಸ್ ಸುಂಕ ವಿಧಿಸಲಾಗುತ್ತಿದೆ. ಇದನ್ನು ಕಡಿಮೆ ಮಾಡುವಂತೆ ಕೋರಿದ್ದೇವೆ. ಅಡಿಕೆ ಹಾಳೆ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಯಾಗುತ್ತಿದೆ. ಈ ಬಗ್ಗೆ ಸರ್ಕಾರವು ಜಾಗೃತಿ ಮೂಡಿಸಬೇಕು’ ಎಂದು ಅವರು ಒತ್ತಾಯಿಸಿದರು. </p>.<p><strong>ನಿಯೋಗದ ಬೇಡಿಕೆಗಳೇನು?</strong> </p><ul><li><p>ಅಡಿಕೆ ಹಳದಿ ಎಲೆ ಶಿಲೀಂಧ್ರ ಮತ್ತು ಇತರ ರೋಗಗಳಿಗೆ ದೀರ್ಘಾವಧಿಯ ಅಧ್ಯಯನ ಮಾಡಲು ಮತ್ತು ಪರಿಹಾರ ಕಂಡುಹಿಡಿಯಲು ಪ್ರತಿಷ್ಠಿತ ಸಂಶೋಧನಾ ಸಂಸ್ಥೆಯಿಂದ ಸಮಗ್ರ ಅಧ್ಯಯನ ನಡೆಸಬೇಕು. </p></li><li><p> ದೇಶಕ್ಕೆ ಅಡಿಕೆ ಅಕ್ರಮ ಆಮದನ್ನು ತಡೆಯಲು ಕಸ್ಟಮ್ಸ್ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕು. </p></li><li><p> ಅಡಿಕೆಯ ಅಕ್ರಮ ವ್ಯಾಪಾರ ತಡೆಗೆ ಜಿಪಿಎಸ್ ಟ್ರ್ಯಾಕಿಂಗ್ ವ್ಯವಸ್ಥೆ ಹಾಗೂ ಚೆಕ್ ಪಾಯಿಂಟ್ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. </p></li><li><p>ಎಫ್ಎಸ್ಎಸ್ಎಐ ಪ್ರಕಾರ ಅಡಿಕೆಯಲ್ಲಿ ತೇವಾಂಶ ಪ್ರಮಾಣ ಶೇ 7ರಷ್ಟಿರಬೇಕು. ಈ ಮಟ್ಟ ಕಾಯ್ದುಕೊಳ್ಳುವುದು ತುಂಬಾ ಕಷ್ಟ. ಹವಾಮಾನ ಪರಿಸ್ಥಿತಿಗಳಿಂದಾಗಿ ಈ ಪ್ರಮಾಣ ಶೇ 12 ಇರಬಹುದು ಎಂದು ಆದೇಶ ಹೊರಡಿಸಬೇಕು. </p></li><li><p>ಅಡಿಕೆ ಕೃಷಿಗೆ ನೀಡುವ ಸಾಲದ ಮೇಲಿನ ಬಡ್ಡಿ ಕಡಿತ ಮಾಡಬೇಕು. </p></li><li><p>ಅಡಿಕೆ ಮೇಲಿನ ಜಿಎಸ್ಟಿಯನ್ನು ಶೇ 5ರಿಂದ ಶೇ 2ಕ್ಕೆ ಇಳಿಸಬೇಕು. </p></li><li><p>ಅಡಿಕೆ ಬೆಳೆಗಾರರು ಬಳಸುವ ಕಾಪರ್ ಸಲ್ಫೇಟ್ ಮೇಲಿನ ಜಿಎಸ್ಟಿಯನ್ನು ಶೇ 18ರಿಂದ ಶೇ 5ಕ್ಕೆ ಕಡಿಮೆ ಮಾಡಬೇಕು. </p></li><li><p>ರೈತರು ಅಡಿಕೆ ಶೇಖರಣೆ ಮಾಡಲು ಗೋದಾಮುಗಳ ವ್ಯವಸ್ಥೆ ಮಾಡಬೇಕು. </p></li><li><p>ರೈತರಿಗೆ ಬೆಳೆ ವಿಮಾ ಸೌಲಭ್ಯ ಸರಳೀಕರಣಗೊಳಿಸಬೇಕು. </p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಅಡಿಕೆ ಕ್ಯಾನ್ಸರ್ಗೆ ಕಾರಣವಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಪತ್ತೆ ಹಚ್ಚಲು ಶೀಘ್ರದಲ್ಲಿ ಸಂಶೋಧನೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಐಸಿಎಆರ್ಗೆ ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ್ ನಿರ್ದೇಶನ ನೀಡಿದರು. </p>.<p>ಕರ್ನಾಟಕದ ಸಂಸದರ ನಿಯೋಗ ಮತ್ತು ಕೇಂದ್ರ ಸಚಿವರ ಜತೆಗೆ ಗುರುವಾರ ಉನ್ನತ ಮಟ್ಟದ ಸಭೆ ನಡೆಸಿದ ಅವರು, ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಹಿಡಿಯಲು ಶೀಘ್ರದಲ್ಲೇ ಬೆಂಗಳೂರಿಗೆ ಬರುವುದಾಗಿ ಭರವಸೆ ನೀಡಿದರು. </p>.<p>ಕೇಂದ್ರ ಭಾರಿ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ‘ನಾನಾ ಕಾರಣಗಳಿಂದ ಅಡಿಕೆ ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದು, ಈ ಬಗ್ಗೆ ಸಚಿವರ ಗಮನ ಸೆಳೆಯಲಾಯಿತು. ಬೆಳೆಗಾರರ ಸಮಸ್ಯೆಗಳನ್ನು ಕಾಲಾವಧಿಯಲ್ಲಿ ಬಗೆಹರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ’ ಎಂದರು. </p>.<p>ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ‘ಅಡಿಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಶಿವರಾಜ ಸಿಂಗ್ ಚೌಹಾಣ್ ಗಮನ ಸೆಳೆಯಲಾಗಿದೆ. ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದರು. </p>.<p>‘ಅಡಿಕೆಗೆ ಎಲೆ ಚುಕ್ಕಿ ರೋಗ ಬಂದರೆ ಮತ್ತೆ ಅಲ್ಲಿ ಅಡಿಕೆ ಕೃಷಿ ನಡೆಸಲು ಸಾಧ್ಯವಿಲ್ಲ. ಇದಕ್ಕೆ ಪರಿಹಾರ ಕಂಡುಹಿಡಿಯುವಂತೆ ಮನವಿ ಮಾಡಿದ್ದೇವೆ. ಈ ಬಗ್ಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ’ ಎಂದರು. </p>.<p>‘ಅಡಿಕೆ ಕೊಯಿಲಿಗೆ ಕಾರ್ಮಿಕರು ಸಿಗುತ್ತಿಲ್ಲ. ಫೈಬರ್ ದೋಟಿ ಬಳಸಿ ಅಡಿಕೆ ಕಟಾವು ಮಾಡಬಹುದು. ಆದರೆ, ಈ ದೋಟಿಗೆ ಶೇ 48 ಕಸ್ಟಮ್ಸ್ ಸುಂಕ ವಿಧಿಸಲಾಗುತ್ತಿದೆ. ಇದನ್ನು ಕಡಿಮೆ ಮಾಡುವಂತೆ ಕೋರಿದ್ದೇವೆ. ಅಡಿಕೆ ಹಾಳೆ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಯಾಗುತ್ತಿದೆ. ಈ ಬಗ್ಗೆ ಸರ್ಕಾರವು ಜಾಗೃತಿ ಮೂಡಿಸಬೇಕು’ ಎಂದು ಅವರು ಒತ್ತಾಯಿಸಿದರು. </p>.<p><strong>ನಿಯೋಗದ ಬೇಡಿಕೆಗಳೇನು?</strong> </p><ul><li><p>ಅಡಿಕೆ ಹಳದಿ ಎಲೆ ಶಿಲೀಂಧ್ರ ಮತ್ತು ಇತರ ರೋಗಗಳಿಗೆ ದೀರ್ಘಾವಧಿಯ ಅಧ್ಯಯನ ಮಾಡಲು ಮತ್ತು ಪರಿಹಾರ ಕಂಡುಹಿಡಿಯಲು ಪ್ರತಿಷ್ಠಿತ ಸಂಶೋಧನಾ ಸಂಸ್ಥೆಯಿಂದ ಸಮಗ್ರ ಅಧ್ಯಯನ ನಡೆಸಬೇಕು. </p></li><li><p> ದೇಶಕ್ಕೆ ಅಡಿಕೆ ಅಕ್ರಮ ಆಮದನ್ನು ತಡೆಯಲು ಕಸ್ಟಮ್ಸ್ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕು. </p></li><li><p> ಅಡಿಕೆಯ ಅಕ್ರಮ ವ್ಯಾಪಾರ ತಡೆಗೆ ಜಿಪಿಎಸ್ ಟ್ರ್ಯಾಕಿಂಗ್ ವ್ಯವಸ್ಥೆ ಹಾಗೂ ಚೆಕ್ ಪಾಯಿಂಟ್ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. </p></li><li><p>ಎಫ್ಎಸ್ಎಸ್ಎಐ ಪ್ರಕಾರ ಅಡಿಕೆಯಲ್ಲಿ ತೇವಾಂಶ ಪ್ರಮಾಣ ಶೇ 7ರಷ್ಟಿರಬೇಕು. ಈ ಮಟ್ಟ ಕಾಯ್ದುಕೊಳ್ಳುವುದು ತುಂಬಾ ಕಷ್ಟ. ಹವಾಮಾನ ಪರಿಸ್ಥಿತಿಗಳಿಂದಾಗಿ ಈ ಪ್ರಮಾಣ ಶೇ 12 ಇರಬಹುದು ಎಂದು ಆದೇಶ ಹೊರಡಿಸಬೇಕು. </p></li><li><p>ಅಡಿಕೆ ಕೃಷಿಗೆ ನೀಡುವ ಸಾಲದ ಮೇಲಿನ ಬಡ್ಡಿ ಕಡಿತ ಮಾಡಬೇಕು. </p></li><li><p>ಅಡಿಕೆ ಮೇಲಿನ ಜಿಎಸ್ಟಿಯನ್ನು ಶೇ 5ರಿಂದ ಶೇ 2ಕ್ಕೆ ಇಳಿಸಬೇಕು. </p></li><li><p>ಅಡಿಕೆ ಬೆಳೆಗಾರರು ಬಳಸುವ ಕಾಪರ್ ಸಲ್ಫೇಟ್ ಮೇಲಿನ ಜಿಎಸ್ಟಿಯನ್ನು ಶೇ 18ರಿಂದ ಶೇ 5ಕ್ಕೆ ಕಡಿಮೆ ಮಾಡಬೇಕು. </p></li><li><p>ರೈತರು ಅಡಿಕೆ ಶೇಖರಣೆ ಮಾಡಲು ಗೋದಾಮುಗಳ ವ್ಯವಸ್ಥೆ ಮಾಡಬೇಕು. </p></li><li><p>ರೈತರಿಗೆ ಬೆಳೆ ವಿಮಾ ಸೌಲಭ್ಯ ಸರಳೀಕರಣಗೊಳಿಸಬೇಕು. </p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>