ಪರೀಕ್ಷಾ ಹಗರಣದಿಂದ ಈ ಮೊದಲೇ ಹೈರಾಣಾಗಿ ಹೋಗಿರುವ ಪಿಎಸ್ಐ ಹುದ್ದೆಗಳ ಆಕಾಂಕ್ಷಿಗಳ ಮನವಿ ಅತ್ಯಂತ ನ್ಯಾಯ ಸಮ್ಮತವಾಗಿದ್ದು, ಇದನ್ನು ಮುಖ್ಯಮಂತ್ರಿಯವರು ಸಹಾನುಭೂತಿಯಿಂದ ಪರಿಶೀಲಿಸಬೇಕಿತ್ತು. ಆದರೆ, ಪೊಲೀಸರನ್ನು ಬಿಟ್ಟು ಬಂಧಿಸಿದ ಕ್ರಮ ಕಾಂಗ್ರೆಸ್ ಸರ್ಕಾರಕ್ಕೆ, ಅಮಾಯಕ ನಿರುದ್ಯೋಗಿಗಳ ಮೇಲೆ ಇರುವ ತಾತ್ಸಾರ ಧೋರಣೆಯನ್ನು ಪ್ರತಿಬಿಂಬಿಸಿದೆ. ಪಿಎಸ್ಐ ಹುದ್ದೆ ಆಕಾಂಕ್ಷಿಗಳ ಬೇಡಿಕೆ ನ್ಯಾಯ ಸಮ್ಮತವಾಗಿದೆ. ಅವರ ನ್ಯಾಯಯುತ ಬೇಡಿಕೆಗಳನ್ನು ಬಿಜೆಪಿ ಬೆಂಬಲಿಸುತ್ತದೆ ಎಂದು ಅವರು ತಿಳಿಸಿದ್ದಾರೆ.