‘ಕಲೆ ಮತ್ತು ಸಂಸ್ಕೃತಿ ಪಠ್ಯದ ಮುಖ್ಯ ಭಾಗವಾಗಬೇಕು. ಕರಕುಶಲತೆಯು ಕಾಗದ ಕತ್ತರಿಸುವುದು, ಕೆಲ ಕಲಾಕೃತಿಗಳನ್ನು ರಚಿಸುವುದಕಷ್ಟೇ ಸೀಮಿತವಾಗಬಾರದು. ಕಲೆಯ ಹಲವು ರೂಪಗಳನ್ನು ಹಂತಹಂತವಾಗಿ ಮಕ್ಕಳಿಗೆ ಕಲಿಸಬೇಕು. ಮಲೆನಾಡಿನ ಸಂಸ್ಕೃತಿಯನ್ನು ಬಯಲುಸೀಮೆ, ಕರಾವಳಿ ವಿದ್ಯಾರ್ಥಿಗಳು, ಬಯಲು ಸೀಮೆಯ ಕಲೆ, ಸಂಸ್ಕೃತಿಯನ್ನು ಇತರೆ ಭಾಗಗಳ ವಿದ್ಯಾರ್ಥಿಗಳು ಕಲಿಯಬೇಕು. ಆಹಾರ ಸಂಸ್ಕೃತಿಯ ಪರಿಚಯವಾಗಬೇಕು. ಅದಕ್ಕಾಗಿ ಎಸ್ಇಪಿಯಲ್ಲಿ ಅಳವಡಿಸಲಾಗುತ್ತಿದೆ’ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.