<p>ಮಡಿಕೇರಿ: ‘ಅಕ್ಕಿ ಬದಲಿಗೆ ಹಣ ಕೊಡುತ್ತೇವೆ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜ್ಞಾನ ಇದೆಯೇ, ದುಡ್ಡನ್ನು ತಿನ್ನಲಾಗುತ್ತದೆಯೇ?’ ಎಂದು ಶಾಸಕ ಆರ್.ಅಶೋಕ್ ಪ್ರಶ್ನಿಸಿದರು.</p>.<p>ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿ, ‘ಚೀಲ ಮಾತ್ರ ಸಿದ್ದರಾಮಯ್ಯ ಅವರದ್ದು; ಅದರೊಳಗಿನ ಅಕ್ಕಿ ಕೇಂದ್ರ ಸರ್ಕಾರದ್ದು ಎಂಬುದು ಜನರಿಗೆ ಗೊತ್ತಾಗಿದೆ. ಮೋಸ ಎನ್ನುವುದು ಕಾಂಗ್ರೆಸ್ನವರ ಡಿಎನ್ಎನಲ್ಲಿದೆ’ ಎಂದು ಟೀಕಿಸಿದರು.</p>.<p>‘ಸಿದ್ದರಾಮಯ್ಯ ಹೇಳಿದ್ದೇನು, ಅಧಿಕಾರಕ್ಕೆ ಬಂದ ನಂತರ ಮಾಡಿದ್ದೇನು ಎಂಬುದನ್ನು ಪಕ್ಷದಿಂದ ಮನೆ ಮನೆಗೂ ತಲುಪಿಸಲಾಗುವುದು’ ಎಂದು ತಿಳಿಸಿದರು.</p>.<p>‘ಈ ಸರ್ಕಾರ ಜನರಿಗೆ ಮೋಸ ಮಾಡುತ್ತಿದೆ. ಎಲ್ಲ ಗ್ಯಾರಂಟಿಗೂ ಒಂದೊಂದು ಚೆಕ್ಪೋಸ್ಟ್ ಇಟ್ಟಿದೆ. ಇವರ ಯಾವ ಗ್ಯಾರಂಟಿಗಳೂ ಜನರಿಗೆ ತಲುಪಿಲ್ಲ. ಇದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಸಮ್ಮಿಶ್ರ ಸರ್ಕಾರವಾಗಿದೆ. ಈ ಇಬ್ಬರೂ ಶಾಸಕರನ್ನು ತಮ್ಮತ್ತ ಸೆಳೆಯಲು ಗ್ಯಾರಂಟಿಗಳನ್ನು ನೀಡುತ್ತಿದ್ದಾರೆ’ ಎಂದು ಟೀಕಿಸಿದರು.</p>.<p>ಇದಕ್ಕೂ ಮುನ್ನ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ತರಬಹುದು’ ಎಂದರು.</p>.<p>‘ಮುಂಬರುವ 5 ರಾಜ್ಯಗಳ ಚುನಾವಣೆಗೆ ಕರ್ನಾಟಕವೇ ಕಾಂಗ್ರೆಸ್ಗೆ ಎಟಿಎಂ. ಅದಕ್ಕಾಗಿ ವರ್ಗಾವಣೆ ದಂಧೆಯಲ್ಲಿ ತೊಡಗಿದೆ’ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ‘ಅಕ್ಕಿ ಬದಲಿಗೆ ಹಣ ಕೊಡುತ್ತೇವೆ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜ್ಞಾನ ಇದೆಯೇ, ದುಡ್ಡನ್ನು ತಿನ್ನಲಾಗುತ್ತದೆಯೇ?’ ಎಂದು ಶಾಸಕ ಆರ್.ಅಶೋಕ್ ಪ್ರಶ್ನಿಸಿದರು.</p>.<p>ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿ, ‘ಚೀಲ ಮಾತ್ರ ಸಿದ್ದರಾಮಯ್ಯ ಅವರದ್ದು; ಅದರೊಳಗಿನ ಅಕ್ಕಿ ಕೇಂದ್ರ ಸರ್ಕಾರದ್ದು ಎಂಬುದು ಜನರಿಗೆ ಗೊತ್ತಾಗಿದೆ. ಮೋಸ ಎನ್ನುವುದು ಕಾಂಗ್ರೆಸ್ನವರ ಡಿಎನ್ಎನಲ್ಲಿದೆ’ ಎಂದು ಟೀಕಿಸಿದರು.</p>.<p>‘ಸಿದ್ದರಾಮಯ್ಯ ಹೇಳಿದ್ದೇನು, ಅಧಿಕಾರಕ್ಕೆ ಬಂದ ನಂತರ ಮಾಡಿದ್ದೇನು ಎಂಬುದನ್ನು ಪಕ್ಷದಿಂದ ಮನೆ ಮನೆಗೂ ತಲುಪಿಸಲಾಗುವುದು’ ಎಂದು ತಿಳಿಸಿದರು.</p>.<p>‘ಈ ಸರ್ಕಾರ ಜನರಿಗೆ ಮೋಸ ಮಾಡುತ್ತಿದೆ. ಎಲ್ಲ ಗ್ಯಾರಂಟಿಗೂ ಒಂದೊಂದು ಚೆಕ್ಪೋಸ್ಟ್ ಇಟ್ಟಿದೆ. ಇವರ ಯಾವ ಗ್ಯಾರಂಟಿಗಳೂ ಜನರಿಗೆ ತಲುಪಿಲ್ಲ. ಇದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಸಮ್ಮಿಶ್ರ ಸರ್ಕಾರವಾಗಿದೆ. ಈ ಇಬ್ಬರೂ ಶಾಸಕರನ್ನು ತಮ್ಮತ್ತ ಸೆಳೆಯಲು ಗ್ಯಾರಂಟಿಗಳನ್ನು ನೀಡುತ್ತಿದ್ದಾರೆ’ ಎಂದು ಟೀಕಿಸಿದರು.</p>.<p>ಇದಕ್ಕೂ ಮುನ್ನ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ತರಬಹುದು’ ಎಂದರು.</p>.<p>‘ಮುಂಬರುವ 5 ರಾಜ್ಯಗಳ ಚುನಾವಣೆಗೆ ಕರ್ನಾಟಕವೇ ಕಾಂಗ್ರೆಸ್ಗೆ ಎಟಿಎಂ. ಅದಕ್ಕಾಗಿ ವರ್ಗಾವಣೆ ದಂಧೆಯಲ್ಲಿ ತೊಡಗಿದೆ’ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>