<p><strong>ಬೆಂಗಳೂರು</strong>: ಮಸೀದಿಗಳಲ್ಲಿ ಕನ್ನಡದಲ್ಲೇ ಆಜಾನ್ ಕೂಗುವಂತೆ ಫರ್ಮಾನು ಹೊರಡಿಸಲು ನಿಮ್ಮಿಂದ ಸಾಧ್ಯವೇ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಪ್ರಶ್ನಿಸಿದ್ದಾರೆ.</p><p>ಮುಜರಾಯಿ ದೇವಾಲಯಗಳಲ್ಲಿ ಪೂಜೆ ಸಂದರ್ಭದಲ್ಲಿ ಕನ್ನಡದಲ್ಲೇ ಶ್ಲೋಕ ಹೇಳಬೇಕು. ಅದಕ್ಕಾಗಿ, ಕನ್ನಡ ಶ್ಲೋಕಗಳನ್ನು ಕಲಿಯಲು ಸೂಚನೆ ನೀಡಲಾಗುವುದು ಎಂದು ಸಾರಿಗೆ ಸಚಿವ ರೆಡ್ಡಿ ಅವರು ತಿಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದನ್ನೇ ಆಧಾರವಾಗಿಟ್ಟುಕೊಂಡು ಅಶೋಕ ವಾಗ್ದಾಳಿ ನಡೆಸಿದ್ದಾರೆ.</p><p>ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್/ಟ್ವಿಟರ್ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅಶೋಕ, 'ಮಸೀದಿಗಳಲ್ಲೂ ಕನ್ನಡದಲ್ಲೇ ನಮಾಜ್ ಮಾಡಬೇಕು, ಕನ್ನಡದಲ್ಲೇ ಆಜಾನ್ ಕೂಗಬೇಕು ಎಂದು ಫರ್ಮಾನು ಹೊರಡಿಸಿ ಸಚಿವ ರಾಮಲಿಂಗಾರೆಡ್ಡಿ ಅವರೇ. ಆಗುತ್ತಾ? ಓಲೈಕೆ, ತುಷ್ಟೀಕರಣಕ್ಕೂ ಒಂದು ಇತಿಮಿತಿ ಬೇಡವೇ? ಹಿಂದೂಗಳು ಸಹನಶೀಲರು, ಸಹಿಷ್ಣುಗಳು ಎಂದ ಮಾತ್ರಕ್ಕೆ ಈ ಮಟ್ಟಕ್ಕೆ ಇಳಿದು ತಾಳ್ಮೆ ಪರೀಕ್ಷೆ ಮಾಡಬೇಡಿ. ವೋಟಿಗೋಸ್ಕರ ನಮ್ಮ ದೇಶ, ಧರ್ಮ, ಸಂಸ್ಕೃತಿ ಆತ್ಮಸಾಕ್ಷಿ ಏನನ್ನಾದರೂ ಮಾರಿಕೊಳ್ಳುವ ನಿಮ್ಮ ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ನಾಚಿಕೆಯಾಗಬೇಕು' ಎಂದು ಗುಡುಗಿದ್ದಾರೆ.</p><p>ವಿಧಾನ ಪರಿಷತ್ತಿನಲ್ಲಿ ಕಲಾಪದ ಸಂದರ್ಭದಲ್ಲಿ ಮುಜರಾಯಿ ದೇವಾಲಯಗಳಲ್ಲಿ ಸಂಸ್ಕೃತದಲ್ಲಿ ಶ್ಲೋಕ ಹೇಳುವ ಕುರಿತು ಚರ್ಚೆಯಾಗಿದೆ. ಈ ವೇಳೆ ರೆಡ್ಡಿ ಅವರು ಕನ್ನಡದಲ್ಲಿ ಶ್ಲೋಕ ಹೇಳುವಂತೆ ಮಾಡುವ ಕುರಿತು ಮಾತನಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಸೀದಿಗಳಲ್ಲಿ ಕನ್ನಡದಲ್ಲೇ ಆಜಾನ್ ಕೂಗುವಂತೆ ಫರ್ಮಾನು ಹೊರಡಿಸಲು ನಿಮ್ಮಿಂದ ಸಾಧ್ಯವೇ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಪ್ರಶ್ನಿಸಿದ್ದಾರೆ.</p><p>ಮುಜರಾಯಿ ದೇವಾಲಯಗಳಲ್ಲಿ ಪೂಜೆ ಸಂದರ್ಭದಲ್ಲಿ ಕನ್ನಡದಲ್ಲೇ ಶ್ಲೋಕ ಹೇಳಬೇಕು. ಅದಕ್ಕಾಗಿ, ಕನ್ನಡ ಶ್ಲೋಕಗಳನ್ನು ಕಲಿಯಲು ಸೂಚನೆ ನೀಡಲಾಗುವುದು ಎಂದು ಸಾರಿಗೆ ಸಚಿವ ರೆಡ್ಡಿ ಅವರು ತಿಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದನ್ನೇ ಆಧಾರವಾಗಿಟ್ಟುಕೊಂಡು ಅಶೋಕ ವಾಗ್ದಾಳಿ ನಡೆಸಿದ್ದಾರೆ.</p><p>ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್/ಟ್ವಿಟರ್ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅಶೋಕ, 'ಮಸೀದಿಗಳಲ್ಲೂ ಕನ್ನಡದಲ್ಲೇ ನಮಾಜ್ ಮಾಡಬೇಕು, ಕನ್ನಡದಲ್ಲೇ ಆಜಾನ್ ಕೂಗಬೇಕು ಎಂದು ಫರ್ಮಾನು ಹೊರಡಿಸಿ ಸಚಿವ ರಾಮಲಿಂಗಾರೆಡ್ಡಿ ಅವರೇ. ಆಗುತ್ತಾ? ಓಲೈಕೆ, ತುಷ್ಟೀಕರಣಕ್ಕೂ ಒಂದು ಇತಿಮಿತಿ ಬೇಡವೇ? ಹಿಂದೂಗಳು ಸಹನಶೀಲರು, ಸಹಿಷ್ಣುಗಳು ಎಂದ ಮಾತ್ರಕ್ಕೆ ಈ ಮಟ್ಟಕ್ಕೆ ಇಳಿದು ತಾಳ್ಮೆ ಪರೀಕ್ಷೆ ಮಾಡಬೇಡಿ. ವೋಟಿಗೋಸ್ಕರ ನಮ್ಮ ದೇಶ, ಧರ್ಮ, ಸಂಸ್ಕೃತಿ ಆತ್ಮಸಾಕ್ಷಿ ಏನನ್ನಾದರೂ ಮಾರಿಕೊಳ್ಳುವ ನಿಮ್ಮ ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ನಾಚಿಕೆಯಾಗಬೇಕು' ಎಂದು ಗುಡುಗಿದ್ದಾರೆ.</p><p>ವಿಧಾನ ಪರಿಷತ್ತಿನಲ್ಲಿ ಕಲಾಪದ ಸಂದರ್ಭದಲ್ಲಿ ಮುಜರಾಯಿ ದೇವಾಲಯಗಳಲ್ಲಿ ಸಂಸ್ಕೃತದಲ್ಲಿ ಶ್ಲೋಕ ಹೇಳುವ ಕುರಿತು ಚರ್ಚೆಯಾಗಿದೆ. ಈ ವೇಳೆ ರೆಡ್ಡಿ ಅವರು ಕನ್ನಡದಲ್ಲಿ ಶ್ಲೋಕ ಹೇಳುವಂತೆ ಮಾಡುವ ಕುರಿತು ಮಾತನಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>