ಈ ಹಗರಣಕ್ಕೆ ಸರ್ಕಾರವೇ ನೇರ ಹೊಣೆ. ನಕಲಿ ಖಾತೆ ತೆರೆದು, ಕ್ರಿಯಾ ಯೋಜನೆ ಇಲ್ಲದೆ ಹಣ ವರ್ಗಾವಣೆ ಮಾಡಿದ್ದಾರೆ. ವಾಲ್ಮೀಕಿ ನಿಗಮದ ಈ ಅವ್ಯವಹಾರವು ಪರಿಶಿಷ್ಟ ಪಂಗಡಕ್ಕೆ ಆಗಿರುವ ಅನ್ಯಾಯ. ಇದಕ್ಕೆ ನೇರ ಹೊಣೆಯಾಗಿರುವ ಮುಖ್ಯಮಂತ್ರಿಯವರಿಗೆ ಇನ್ನು ಧ್ವನಿಯೇ ಬಂದಿಲ್ಲ. ಎಲ್ಲಿ ಧ್ವನಿ ಅಡಗಿ ಹೋಗಿದೆಯೋ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು.