‘ನಾಡಪ್ರಭು ಕೆಂಪೇಗೌಡರ ಆದರ್ಶಗಳನ್ನು ಪ್ರೇರಣೆಯಾಗಿ ಪಡೆದು ಕರುನಾಡನ್ನು ಪ್ರಗತಿಯತ್ತ ಕೊಂಡೊಯ್ಯಬೇಕು ಎನ್ನುವ ಸದುದ್ದೇಶದಿಂದ ಕೆಂಪೇಗೌಡ ಪ್ರತಿಮೆ ಸ್ಥಾಪಿಸಲಾಯಿತು. ಅವರ ದೂರದೃಷ್ಟಿ ಪ್ರತಿಬಿಂಬಿಸುವ ಥೀಮ್ ಪಾರ್ಕ್ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಅದನ್ನು ಸ್ಥಗಿತಗೊಳಿರುವುದು ಬೇಸರದ ಸಂಗತಿ’ ಎಂದು ಅವರು ಹೇಳಿದ್ದಾರೆ.