ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಕುಲಪತಿಗಳ ಸ್ಥಾನ ತೆರವಾಗಿ ಬಹಳ ತಿಂಗಳುಗಳೇ ಕಳೆದಿವೆ. ಮಂಗಳೂರು ವಿ.ವಿ, ರಾಣಿಚನ್ನಮ್ಮ ವಿ.ವಿ, ವಿಜಯನಗರ ವಿ.ವಿ, ಕುವೆಂಪು ವಿ.ವಿ. ಬಾಗಲಕೋಟೆ ತೋಟಗಾರಿಕಾ ವಿ.ವಿಗಳಲ್ಲಿ ಕುಲಪತಿಗಳ ಹುದ್ದೆಗಳು ತೆರವಾಗಿವೆ. ನೇಮಕಾತಿ ಮಾಡುವ ಯಾವ ಲಕ್ಷಣವೂ ಕಾಣಿಸುತ್ತಿಲ್ಲ. ಕುಲಪತಿಗಳ ಆಯ್ಕೆಗಾಗಿ ರಚಿಸಿದ್ದ ಶೋಧನಾ ಸಮಿತಿ ವರದಿಯನ್ನೂ ಕೊಟ್ಟಿದೆ. ಅದನ್ನು ನೋಡಲು ಮುಖ್ಯಮಂತ್ರಿಯವರಿಗೆ ಸಮಯವಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.