ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಡಿತ ಬಸವರಾಜ ರಾಜಗುರು ರಾಷ್ಟ್ರೀಯ ಪ್ರಶಸ್ತಿಗೆ ಅಶ್ವಿನಿ ಭಿಡೆ ದೇಶಪಾಂಡೆ ಆಯ್ಕೆ

Published 18 ಆಗಸ್ಟ್ 2023, 14:05 IST
Last Updated 18 ಆಗಸ್ಟ್ 2023, 14:05 IST
ಅಕ್ಷರ ಗಾತ್ರ

ಧಾರವಾಡ: ಸ್ವರ ಸಾಮ್ರಾಟ ಪಂಡಿತ ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ನೀಡುವ ಪಂಡಿತ ಬಸವರಾಜ ರಾಜಗುರು ರಾಷ್ಟ್ರೀಯ ಪ್ರಶಸ್ತಿಗೆ ಮುಂಬೈನ ಸಂಗೀತ ಕಲಾವಿದೆ ಅಶ್ವಿನಿ ಭಿಡೆ ದೇಶಪಾಂಡೆ, ಯುವ ಪ್ರಶಸ್ತಿಗೆ ಧಾರವಾಡದ ತಬಲಾ ವಾದಕ ಉದಯ ಕುಲಕರ್ಣಿ ಹಾಗೂ ಬೆಂಗಳೂರಿನ ಗಾಯಕ ಇಮಾನ ದಾಸ್ ಅವರನ್ನು ಆಯ್ಕೆ ಮಾಡಲಾಗಿದೆ.

ಪಂಡಿತ ಬಸವರಾಜ ರಾಜಗುರು ರಾಷ್ಟ್ರೀಯ ಪ್ರಶಸ್ತಿ ₹ 1 ಲಕ್ಷ ನಗದು, ಯುವಪ್ರಶಸ್ತಿ ತಲಾ ₹ 25 ಸಾವಿರ ನಗದು ಪುರಸ್ಕಾರ ಒಳಗೊಂಡಿದೆ. ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆ. 24ರಂದು ಜರುಗುವ ಪಂಡಿತ ಬಸವರಾಜ ರಾಜಗುರು ಅವರ 103ನೇ ಜನ್ಮದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್‌ ಸದಸ್ಯ ಕಾರ್ಯದರ್ಶಿ ಕುಮಾರ ಬೆಕ್ಕೇರಿ ತಿಳಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT