<p><strong>ನವದೆಹಲಿ</strong>: ಕರ್ನಾಟಕದಲ್ಲಿ ರೈಲ್ವೆ ಯೋಜನೆಗಳಿಗೆ 8,280 ಎಕರೆ ಭೂಸ್ವಾಧೀನ ಬಾಕಿ ಇದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಲೋಕಸಭೆಗೆ ಬುಧವಾರ ತಿಳಿಸಿದರು. </p>.<p>ಪ್ರಶ್ನೋತ್ತರ ಅವಧಿಯಲ್ಲಿ ರಾಯಚೂರು ಸಂಸದ ಜಿ.ಕುಮಾರ ನಾಯಕ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ‘ನಾಲ್ಕು ಪ್ರಮುಖ ಯೋಜನೆಗಳಿಗೆ ಒಂದೇ ಒಂದು ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿಲ್ಲ’ ಎಂದರು. </p>.<p>‘ರಾಜ್ಯದಲ್ಲಿ 25 ರೈಲ್ವೆ (ಹೊಸ ಹಾಗೂ ಜೋಡಿ ಹಳಿ) ಯೋಜನೆಗಳು ಅನುಷ್ಠಾನಗೊಳ್ಳುತ್ತಿವೆ. ಈ ಯೋಜನೆಗಳ ಒಟ್ಟು ಉದ್ದ 3,264 ಕಿ.ಮೀ. ಈ ತನಕ ಪೂರ್ಣಗೊಂಡಿರುವ 1,394 ಕಿ.ಮೀ. ಪೂರ್ಣಗೊಂಡಿದೆ. ಭೂಸ್ವಾಧೀನ ಪ್ರಕ್ರಿಯೆ ವಿಳಂಬವಾಗಿರುವುದರಿಂದ ಯೋಜನೆಗಳ ಅನುಷ್ಠಾನ ತಡವಾಗಿದೆ. ಶೇ 37ರಷ್ಟು ಜಮೀನು ಸ್ವಾಧೀನಪಡಿಸಿಕೊಳ್ಳಬೇಕಿದೆ’ ಎಂದು ಅವರು ಮಾಹಿತಿ ನೀಡಿದರು. </p>.<p>ಹೆಜ್ಜಾಲ–ಚಾಮರಾಜನಗರ ನಡುವೆ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಯೋಜನೆಗೆ ರಾಜ್ಯ ಸರ್ಕಾರ ಶೇ 50ರಷ್ಟು ಅನುದಾನ ನೀಡಬೇಕಿತ್ತು. ಆದಾಗ್ಯೂ, ಕರ್ನಾಟಕ ಸರ್ಕಾರ ಇದೀಗ ನಿಲುವು ಬದಲಿಸಿದ್ದರಿಂದ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲು ಆಗುತ್ತಿಲ್ಲ ಎಂದು ವೈಷ್ಣವ್ ತಿಳಿಸಿದರು. </p>.<p><strong>ನೈರುತ್ಯ ವಲಯದಲ್ಲಿ ರೈಲ್ವೆ ಜಾಲ ಕಡಿಮೆ</strong>: ‘ದೇಶದಲ್ಲಿ 17 ರೈಲ್ವೆ ವಲಯಗಳಿವೆ. ಒಟ್ಟು ರೈಲ್ವೆ ಜಾಲ 69,181 ಕಿ.ಮೀ. ಬೇರೆ ವಲಯಗಳಿಗೆ ಹೋಲಿಸಿದರೆ ನೈರುತ್ಯ ವಲಯದಲ್ಲಿ ರೈಲ್ವೆ ಜಾಲ ಕಡಿಮೆ. ಇಲ್ಲಿ 3,692 ಕಿ.ಮೀ. ರೈಲ್ವೆ ಜಾಲ ಇದೆ’ ಎಂದು ಅವರು ಮಾಹಿತಿ ನೀಡಿದರು. </p>.<p>‘ಯಾವುದೇ ಪ್ರದೇಶದಲ್ಲಿನ ರೈಲ್ವೆ ಜಾಲವು ಆ ಪ್ರದೇಶದ ಜನಸಂಖ್ಯಾ ಸಾಂದ್ರತೆ, ಭೂಪ್ರದೇಶ, ಭೌಗೋಳಿಕ ಲಕ್ಷಣಗಳು ಇತ್ಯಾದಿ ಅಂಶಗಳನ್ನು ಅವಲಂಬಿಸಿರುತ್ತದೆ. ಆದ್ದರಿಂದ, ರೈಲ್ವೆ ಸಾಂದ್ರತೆಯು ಪ್ರದೇಶದಿಂದ ಪ್ರದೇಶಕ್ಕೆ ಬದಲಾಗುತ್ತದೆ’ ಎಂದು ಅವರು ಸ್ಪಷ್ಟಪಡಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕರ್ನಾಟಕದಲ್ಲಿ ರೈಲ್ವೆ ಯೋಜನೆಗಳಿಗೆ 8,280 ಎಕರೆ ಭೂಸ್ವಾಧೀನ ಬಾಕಿ ಇದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಲೋಕಸಭೆಗೆ ಬುಧವಾರ ತಿಳಿಸಿದರು. </p>.<p>ಪ್ರಶ್ನೋತ್ತರ ಅವಧಿಯಲ್ಲಿ ರಾಯಚೂರು ಸಂಸದ ಜಿ.ಕುಮಾರ ನಾಯಕ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ‘ನಾಲ್ಕು ಪ್ರಮುಖ ಯೋಜನೆಗಳಿಗೆ ಒಂದೇ ಒಂದು ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿಲ್ಲ’ ಎಂದರು. </p>.<p>‘ರಾಜ್ಯದಲ್ಲಿ 25 ರೈಲ್ವೆ (ಹೊಸ ಹಾಗೂ ಜೋಡಿ ಹಳಿ) ಯೋಜನೆಗಳು ಅನುಷ್ಠಾನಗೊಳ್ಳುತ್ತಿವೆ. ಈ ಯೋಜನೆಗಳ ಒಟ್ಟು ಉದ್ದ 3,264 ಕಿ.ಮೀ. ಈ ತನಕ ಪೂರ್ಣಗೊಂಡಿರುವ 1,394 ಕಿ.ಮೀ. ಪೂರ್ಣಗೊಂಡಿದೆ. ಭೂಸ್ವಾಧೀನ ಪ್ರಕ್ರಿಯೆ ವಿಳಂಬವಾಗಿರುವುದರಿಂದ ಯೋಜನೆಗಳ ಅನುಷ್ಠಾನ ತಡವಾಗಿದೆ. ಶೇ 37ರಷ್ಟು ಜಮೀನು ಸ್ವಾಧೀನಪಡಿಸಿಕೊಳ್ಳಬೇಕಿದೆ’ ಎಂದು ಅವರು ಮಾಹಿತಿ ನೀಡಿದರು. </p>.<p>ಹೆಜ್ಜಾಲ–ಚಾಮರಾಜನಗರ ನಡುವೆ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಯೋಜನೆಗೆ ರಾಜ್ಯ ಸರ್ಕಾರ ಶೇ 50ರಷ್ಟು ಅನುದಾನ ನೀಡಬೇಕಿತ್ತು. ಆದಾಗ್ಯೂ, ಕರ್ನಾಟಕ ಸರ್ಕಾರ ಇದೀಗ ನಿಲುವು ಬದಲಿಸಿದ್ದರಿಂದ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲು ಆಗುತ್ತಿಲ್ಲ ಎಂದು ವೈಷ್ಣವ್ ತಿಳಿಸಿದರು. </p>.<p><strong>ನೈರುತ್ಯ ವಲಯದಲ್ಲಿ ರೈಲ್ವೆ ಜಾಲ ಕಡಿಮೆ</strong>: ‘ದೇಶದಲ್ಲಿ 17 ರೈಲ್ವೆ ವಲಯಗಳಿವೆ. ಒಟ್ಟು ರೈಲ್ವೆ ಜಾಲ 69,181 ಕಿ.ಮೀ. ಬೇರೆ ವಲಯಗಳಿಗೆ ಹೋಲಿಸಿದರೆ ನೈರುತ್ಯ ವಲಯದಲ್ಲಿ ರೈಲ್ವೆ ಜಾಲ ಕಡಿಮೆ. ಇಲ್ಲಿ 3,692 ಕಿ.ಮೀ. ರೈಲ್ವೆ ಜಾಲ ಇದೆ’ ಎಂದು ಅವರು ಮಾಹಿತಿ ನೀಡಿದರು. </p>.<p>‘ಯಾವುದೇ ಪ್ರದೇಶದಲ್ಲಿನ ರೈಲ್ವೆ ಜಾಲವು ಆ ಪ್ರದೇಶದ ಜನಸಂಖ್ಯಾ ಸಾಂದ್ರತೆ, ಭೂಪ್ರದೇಶ, ಭೌಗೋಳಿಕ ಲಕ್ಷಣಗಳು ಇತ್ಯಾದಿ ಅಂಶಗಳನ್ನು ಅವಲಂಬಿಸಿರುತ್ತದೆ. ಆದ್ದರಿಂದ, ರೈಲ್ವೆ ಸಾಂದ್ರತೆಯು ಪ್ರದೇಶದಿಂದ ಪ್ರದೇಶಕ್ಕೆ ಬದಲಾಗುತ್ತದೆ’ ಎಂದು ಅವರು ಸ್ಪಷ್ಟಪಡಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>