ಲಖೀಂಪುರ ಜಿಲ್ಲೆಯಲ್ಲಿ ಹೆಚ್ಚಿನ ಸಮಸ್ಯೆ ಉಂಟಾಗಿದ್ದು, 22,000 ಮಂದಿ ಪ್ರವಾಹದಿಂದ ತೊಂದರೆಗೊಳಗಾಗಿದ್ದಾರೆ. ದಿಬ್ರೂಗಢದಲ್ಲಿ 3,800 ಮಂದಿ ಹಾಗೂ ಕೊಕ್ರಜಾರ್ನಲ್ಲಿ 1,800 ಮಂದಿ ಪ್ರವಾಹದಿಂದ ಸಮಸ್ಯೆಗೆ ಈಡಾಗಿದ್ದಾರೆ.
ಸದ್ಯ 25 ಪರಿಹಾರ ವಿತರಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಯಾವುದೇ ನಿರಾಶ್ರಿತರ ಕೇಂದ್ರ ತೆರೆದಿಲ್ಲ. ನೆರೆಯಿಂದಾಗಿ 444 ಗ್ರಾಮಗಳು ಮುಳುಗಡೆಯಾಗಿದ್ದು, 4,741.23 ಹೆಕ್ಟೆರ್ ಪ್ರದೇಶದ ಬೆಳೆ ನಾಶವಾಗಿದೆ.
ಬಿಸ್ವನಾಥ್, ಧುಬ್ರಿ, ದಿಬ್ರೂಗಢ, ಗೋಲಾಘಾಟ್, ಕಮ್ರೂಪ್, ಕರೀಮ್ಗಂಜ್, ಕೊಕ್ರಜಾರ್, ಲಖೀಂಪುರ, ಮಜುಲಿ, ಮೋರಿಗಾಂವ್, ನಾಗಾಂವ್, ನಲ್ಬರಿ, ಶಿವಸಾಗರ್, ಸೋನಿತ್ಪುರ್, ಸೌತ್ ಸಲ್ಮಾರಾ, ತಮುಲ್ಪುರ್ ಮತ್ತು ಉದಲ್ಗುರಿಯಲ್ಲಿ ಭಾರಿ ಪ್ರಮಾಣದ ಭೂಸವೆತ ಉಂಟಾಗಿದೆ. ನೀರನ ರಭಸಕ್ಕೆ ರಸ್ತೆ, ಸೇತುವೆಗಳು ಕೊಚ್ಚಿ ಹೋಗಿದೆ.