<p><strong>ಬೆಳಗಾವಿ:</strong> ಅರಿವು ಯೋಜನೆಯಡಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕ ಮೊತ್ತದ ಶೇ 75ರಷ್ಟು ಸಾಲ ನೀಡಬೇಕು ಎಂದು ವಿಧಾನಮಂಡಲದ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಶಿಫಾರಸು ಮಾಡಿದೆ.</p>.<p>ಸಮಿತಿಯ ವರದಿಯನ್ನು ವಿಧಾನಸಭೆಯಲ್ಲಿ ಸಮಿತಿಯ ಅಧ್ಯಕ್ಷ ಎನ್.ಎ.ಹ್ಯಾರಿಸ್ ಗುರುವಾರ ಮಂಡಿಸಿದರು.</p>.<p>ವಿದ್ಯಾರ್ಥಿಗಳಿಗೆ ನೀಡಲಾಗುವ ಸಾಲವನ್ನು 2 ಹಾಗೂ 3ನೇ ವರ್ಷದಲ್ಲಿ ವಸೂಲಿ ಮಾಡಲಾಗುತ್ತದೆ. ಅದರ ಬದಲು, ಶಿಕ್ಷಣ ಪೂರ್ಣಗೊಂಡು ಉದ್ಯೋಗ ಸಿಕ್ಕ ಬಳಿಕ ಸಾಲ ಮರುಪಾವತಿಗೆ ಅವಕಾಶ ಮಾಡಿಕೊಡಬೇಕು ಎಂದೂ ಸಮಿತಿ ಸೂಚಿಸಿದೆ.</p>.<p><strong>ಸಮಿತಿಯ ಇತರ ಶಿಫಾರಸುಗಳು:</strong></p>.<p>*ಬೆಂಗಳೂರಿನ ಬೆಳ್ಳಹಳ್ಳಿ ಗ್ರಾಮದ ಸರ್ಕಾರಿ ಜಾಗದ ಒತ್ತುವರಿ ಪ್ರಯತ್ನ ನಡೆದಿದೆ. ಈ ಜಾಗದ ಸುತ್ತ ಬೇಲಿ ಹಾಕಬೇಕು ಹಾಗೂ ವಕ್ಫ್ ಆಸ್ತಿ ಎಂಬ ಫಲಕ ಹಾಕಬೇಕು.</p>.<p>*ವಕ್ಫ್ ಆಸ್ತಿಗಳ ಸರ್ವೆ ಕಾರ್ಯ ಆಮೆಗತಿಯಲ್ಲಿ ಸಾಗಿದೆ. ಅದನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು.</p>.<p>*ವಕ್ಫ್ ಆಸ್ತಿಗಳ ಒತ್ತುವರಿ ತೆರವುಗೊಳಿಸಬೇಕು.</p>.<p>*ಖಬರ್ಸ್ತಾನ್ಗಳಿಗೆ ಅಗತ್ಯ ಜಮೀನು ಮಂಜೂರು ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಅರಿವು ಯೋಜನೆಯಡಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕ ಮೊತ್ತದ ಶೇ 75ರಷ್ಟು ಸಾಲ ನೀಡಬೇಕು ಎಂದು ವಿಧಾನಮಂಡಲದ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಶಿಫಾರಸು ಮಾಡಿದೆ.</p>.<p>ಸಮಿತಿಯ ವರದಿಯನ್ನು ವಿಧಾನಸಭೆಯಲ್ಲಿ ಸಮಿತಿಯ ಅಧ್ಯಕ್ಷ ಎನ್.ಎ.ಹ್ಯಾರಿಸ್ ಗುರುವಾರ ಮಂಡಿಸಿದರು.</p>.<p>ವಿದ್ಯಾರ್ಥಿಗಳಿಗೆ ನೀಡಲಾಗುವ ಸಾಲವನ್ನು 2 ಹಾಗೂ 3ನೇ ವರ್ಷದಲ್ಲಿ ವಸೂಲಿ ಮಾಡಲಾಗುತ್ತದೆ. ಅದರ ಬದಲು, ಶಿಕ್ಷಣ ಪೂರ್ಣಗೊಂಡು ಉದ್ಯೋಗ ಸಿಕ್ಕ ಬಳಿಕ ಸಾಲ ಮರುಪಾವತಿಗೆ ಅವಕಾಶ ಮಾಡಿಕೊಡಬೇಕು ಎಂದೂ ಸಮಿತಿ ಸೂಚಿಸಿದೆ.</p>.<p><strong>ಸಮಿತಿಯ ಇತರ ಶಿಫಾರಸುಗಳು:</strong></p>.<p>*ಬೆಂಗಳೂರಿನ ಬೆಳ್ಳಹಳ್ಳಿ ಗ್ರಾಮದ ಸರ್ಕಾರಿ ಜಾಗದ ಒತ್ತುವರಿ ಪ್ರಯತ್ನ ನಡೆದಿದೆ. ಈ ಜಾಗದ ಸುತ್ತ ಬೇಲಿ ಹಾಕಬೇಕು ಹಾಗೂ ವಕ್ಫ್ ಆಸ್ತಿ ಎಂಬ ಫಲಕ ಹಾಕಬೇಕು.</p>.<p>*ವಕ್ಫ್ ಆಸ್ತಿಗಳ ಸರ್ವೆ ಕಾರ್ಯ ಆಮೆಗತಿಯಲ್ಲಿ ಸಾಗಿದೆ. ಅದನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು.</p>.<p>*ವಕ್ಫ್ ಆಸ್ತಿಗಳ ಒತ್ತುವರಿ ತೆರವುಗೊಳಿಸಬೇಕು.</p>.<p>*ಖಬರ್ಸ್ತಾನ್ಗಳಿಗೆ ಅಗತ್ಯ ಜಮೀನು ಮಂಜೂರು ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>