<p><strong>ಬೆಂಗಳೂರು:</strong> ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಅಡಿಯಲ್ಲಿ ಸ್ಥಳೀಯ ಇತಿಹಾಸಕ್ಕೆ ಸಂಬಂಧಿಸಿದ ಪಠ್ಯಕ್ರಮ ಅಳವಡಿಕೆ ಮಾಡುವಲ್ಲಿ ವಿಫಲವಾಗಿರುವ ಮಂಗಳೂರು ವಿಶ್ವವಿದ್ಯಾಲಯದ ವಿರುದ್ಧ ಕ್ರಮ ಜರು ಗಿಸಬೇಕು ಎಂದು ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್ ಸರ್ಕಾರವನ್ನು ಆಗ್ರಹಿಸಿದರು.</p>.<p>ಗುರುವಾರ ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ‘ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಯ ಸ್ಥಳೀಯ ಇತಿಹಾಸಕ್ಕೆ ಸಂಬಂಧಿಸಿದ ಪಠ್ಯ ಅಳವಡಿಸಲು ಅವಕಾಶವಿತ್ತು. ಆದರೆ, ರಾಜ್ಯ ಉನ್ನತ ಶಿಕ್ಷಣ ಪರಿಷತ್ಗೆ ಪ್ರಸ್ತಾವ ಸಲ್ಲಿಸಿ, ಒಪ್ಪಿಗೆ ಪಡೆಯಬೇಕಿತ್ತು. ಆದರೆ, ಮಂಗಳೂರು ವಿಶ್ವವಿದ್ಯಾಲಯದ ಅಧಿಕಾರಿಗಳು ಈ ಕೆಲಸ ಮಾಡದೆ ಲೋಪ ಎಸಗಿದ್ದಾರೆ’ ಎಂದರು.</p>.<p>ಉತ್ತರ ನೀಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ, ‘ಈ ವಿಚಾರದಲ್ಲಿ ವಿಶ್ವವಿದ್ಯಾಲಯದ ಆಡಳಿತವೇ ಕ್ರಮ ಕೈಗೊಳ್ಳಬೇಕಿತ್ತು. ಸರ್ಕಾರದ ಪಾತ್ರ ಏನೂ ಇಲ್ಲ. ವಿಶ್ವವಿದ್ಯಾಲಯ ಪಠ್ಯಕ್ರಮ ಅಳವಡಿಸಲು ಪ್ರಸ್ತಾವ ಸಲ್ಲಿಸಿದ್ದರೆ ಉನ್ನತ ಶಿಕ್ಷಣ ಪರಿಷತ್ ಅನುಮೋದನೆ ನೀಡುತ್ತಿತ್ತು’ ಎಂದು ತಿಳಿಸಿದರು.</p>.<p>‘ತಪ್ಪು ಮಾಡಿದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಬೇಕು’ ಎಂದು ಖಾದರ್ ಆಗ್ರಹಿಸಿದರು. ಎಚ್ಚರಿಕೆ ನೀಡುವಂತೆ ಸ್ಪೀಕರ್ ಕಾಗೇರಿ ಕೂಡ ಸೂಚಿಸಿದರು. ಇದಕ್ಕೆ ಸಚಿವರು ಒಪ್ಪಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಅಡಿಯಲ್ಲಿ ಸ್ಥಳೀಯ ಇತಿಹಾಸಕ್ಕೆ ಸಂಬಂಧಿಸಿದ ಪಠ್ಯಕ್ರಮ ಅಳವಡಿಕೆ ಮಾಡುವಲ್ಲಿ ವಿಫಲವಾಗಿರುವ ಮಂಗಳೂರು ವಿಶ್ವವಿದ್ಯಾಲಯದ ವಿರುದ್ಧ ಕ್ರಮ ಜರು ಗಿಸಬೇಕು ಎಂದು ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್ ಸರ್ಕಾರವನ್ನು ಆಗ್ರಹಿಸಿದರು.</p>.<p>ಗುರುವಾರ ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ‘ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಯ ಸ್ಥಳೀಯ ಇತಿಹಾಸಕ್ಕೆ ಸಂಬಂಧಿಸಿದ ಪಠ್ಯ ಅಳವಡಿಸಲು ಅವಕಾಶವಿತ್ತು. ಆದರೆ, ರಾಜ್ಯ ಉನ್ನತ ಶಿಕ್ಷಣ ಪರಿಷತ್ಗೆ ಪ್ರಸ್ತಾವ ಸಲ್ಲಿಸಿ, ಒಪ್ಪಿಗೆ ಪಡೆಯಬೇಕಿತ್ತು. ಆದರೆ, ಮಂಗಳೂರು ವಿಶ್ವವಿದ್ಯಾಲಯದ ಅಧಿಕಾರಿಗಳು ಈ ಕೆಲಸ ಮಾಡದೆ ಲೋಪ ಎಸಗಿದ್ದಾರೆ’ ಎಂದರು.</p>.<p>ಉತ್ತರ ನೀಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ, ‘ಈ ವಿಚಾರದಲ್ಲಿ ವಿಶ್ವವಿದ್ಯಾಲಯದ ಆಡಳಿತವೇ ಕ್ರಮ ಕೈಗೊಳ್ಳಬೇಕಿತ್ತು. ಸರ್ಕಾರದ ಪಾತ್ರ ಏನೂ ಇಲ್ಲ. ವಿಶ್ವವಿದ್ಯಾಲಯ ಪಠ್ಯಕ್ರಮ ಅಳವಡಿಸಲು ಪ್ರಸ್ತಾವ ಸಲ್ಲಿಸಿದ್ದರೆ ಉನ್ನತ ಶಿಕ್ಷಣ ಪರಿಷತ್ ಅನುಮೋದನೆ ನೀಡುತ್ತಿತ್ತು’ ಎಂದು ತಿಳಿಸಿದರು.</p>.<p>‘ತಪ್ಪು ಮಾಡಿದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಬೇಕು’ ಎಂದು ಖಾದರ್ ಆಗ್ರಹಿಸಿದರು. ಎಚ್ಚರಿಕೆ ನೀಡುವಂತೆ ಸ್ಪೀಕರ್ ಕಾಗೇರಿ ಕೂಡ ಸೂಚಿಸಿದರು. ಇದಕ್ಕೆ ಸಚಿವರು ಒಪ್ಪಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>