ಗುರುವಾರ ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ‘ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಯ ಸ್ಥಳೀಯ ಇತಿಹಾಸಕ್ಕೆ ಸಂಬಂಧಿಸಿದ ಪಠ್ಯ ಅಳವಡಿಸಲು ಅವಕಾಶವಿತ್ತು. ಆದರೆ, ರಾಜ್ಯ ಉನ್ನತ ಶಿಕ್ಷಣ ಪರಿಷತ್ಗೆ ಪ್ರಸ್ತಾವ ಸಲ್ಲಿಸಿ, ಒಪ್ಪಿಗೆ ಪಡೆಯಬೇಕಿತ್ತು. ಆದರೆ, ಮಂಗಳೂರು ವಿಶ್ವವಿದ್ಯಾಲಯದ ಅಧಿಕಾರಿಗಳು ಈ ಕೆಲಸ ಮಾಡದೆ ಲೋಪ ಎಸಗಿದ್ದಾರೆ’ ಎಂದರು.