<p><strong>ಬೆಂಗಳೂರು:</strong> ಬಗರ್ಹುಕುಂ ಕಾಲಮಿತಿಯನ್ನು ಮತ್ತೆ ಎರಡು ವರ್ಷಗಳಿಗೆ ವಿಸ್ತರಿಸಲು ಅನುವು ಮಾಡುವ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ಮಸೂದೆ– 2020 ಅನ್ನು ಕಂದಾಯ ಸಚಿವ ಆರ್.ಅಶೋಕ ಅವರು ವಿಧಾನಸಭೆಯಲ್ಲಿ ಗುರುವಾರ ಮಂಡಿಸಿದರು.</p>.<p>‘ಅನಧಿಕೃತ ಬೇಸಾಯ ಭೂಮಿಯ ಸಕ್ರಮೀಕರಣಕ್ಕಾಗಿ ಅರ್ಜಿಗಳ ವಿಲೇವಾರಿ ಬಾಕಿ ಇದೆ. ನಮೂನೆ 50ರಲ್ಲಿ 10,572 ಅರ್ಜಿಗಳು ಹಾಗೂ ನಮೂನೆ 53ರಲ್ಲಿ 1,40,781 ಅರ್ಜಿಗಳು ವಿಲೇವಾರಿಗಾಗಿ ಬಾಕಿ ಉಳಿದಿವೆ. ಕಾಲಮಿತಿಯು ಈ ವರ್ಷದ ಏಪ್ರಿಲ್ 27ಕ್ಕೆ ಕೊನೆಗೊಂಡಿದೆ. ಹೀಗಾಗಿ, ಕಾಲಮಿತಿಯನ್ನು ಎರಡು ವರ್ಷ ವಿಸ್ತರಿಸುವುದು ಅವಶ್ಯಕ’ ಎಂದು ಮಸೂದೆಯಲ್ಲಿ ತಿಳಿಸಲಾಗಿದೆ.</p>.<p>ರಸ್ತೆ, ಬೀದಿ, ಓಣಿ ಅಥವಾ ಬಿ ಖರಾಬು ಭೂಮಿಯನ್ನು ಘೋಷಿಸಿದ ಬಳಿಕ ಸಾರ್ವಜನಿಕ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು 90ದಿನಗಳಿಂದ 30 ದಿನಗಳಿಗೆ ಇಳಿಸಲು 68ನೇ ಪ್ರಕರಣಕ್ಕೆ ತಿದ್ದುಪಡಿ ತರಲು ಪ್ರಸ್ತಾಪಿಸಲಾಗಿದೆ.</p>.<p>ಸಾದಿಲ್ವಾರು ನಿಧಿ ₹500 ಕೋಟಿಗೆ: ಸಾಂಕ್ರಾಮಿಕ ರೋಗಗಳು, ನೈಸರ್ಗಿಕ ವಿಪತ್ತುಗಳಂತಹ ತುರ್ತು ಸನ್ನಿವೇಶಗಳಲ್ಲಿ ಸಂತ್ರಸ್ತರಿಗೆ ಬಿಡುಗಡೆಗೊಳಿಸಲು ಅನುಕೂಲ ಕಲ್ಪಿಸುವ ಸಾದಿಲ್ವಾರು ನಿಧಿಯನ್ನು ₹ 80 ಕೋಟಿಯಿಂದ ₹500 ಕೋಟಿಗೆ ಏರಿಸುವ ಕರ್ನಾಟಕ ಸಾದಿಲ್ವಾರು ನಿಧಿ (ತಿದ್ದುಪಡಿ) ಮಸೂದೆಗೆ ವಿಧಾನಸಭೆ ಒಪ್ಪಿಗೆ ನೀಡಿತು.</p>.<p>ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ನೆರವಾಗಲು ಮುಖ್ಯಮಂತ್ರಿ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. ಅದರಲ್ಲಿ ಆಟೊ ಅಥವಾ ಟ್ಯಾಕ್ಸಿ ಚಾಲಕರಿಗೆ, ಕ್ಷೌರಿಕರು, ಅಗಸರಿಗೆ ₹5 ಸಾವಿರ, ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ಗೆ ₹25 ಸಾವಿರ, ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ಹೆಕ್ಟೇರ್ಗೆ ₹15 ಸಾವಿರ ನೀಡಲಾಗುತ್ತದೆ ಎಂದು ಪ್ರಕಟಿಸಿದ್ದರು. ಈ ಮೊತ್ತವನ್ನು ಬಜೆಟ್ನಲ್ಲಿ ಪ್ರಕಟಿಸಲಿಲ್ಲ. ಇದನ್ನು ಸಾದಿಲ್ವಾರು ನಿಧಿಯಿಂದ ಭರಿಸಲಾಗುತ್ತಿದೆ ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.</p>.<p><span class="tlid-translation translation" lang="en" tabindex="-1"><span title="">Karnataka Land Revenue Bill</span></span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಗರ್ಹುಕುಂ ಕಾಲಮಿತಿಯನ್ನು ಮತ್ತೆ ಎರಡು ವರ್ಷಗಳಿಗೆ ವಿಸ್ತರಿಸಲು ಅನುವು ಮಾಡುವ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ಮಸೂದೆ– 2020 ಅನ್ನು ಕಂದಾಯ ಸಚಿವ ಆರ್.ಅಶೋಕ ಅವರು ವಿಧಾನಸಭೆಯಲ್ಲಿ ಗುರುವಾರ ಮಂಡಿಸಿದರು.</p>.<p>‘ಅನಧಿಕೃತ ಬೇಸಾಯ ಭೂಮಿಯ ಸಕ್ರಮೀಕರಣಕ್ಕಾಗಿ ಅರ್ಜಿಗಳ ವಿಲೇವಾರಿ ಬಾಕಿ ಇದೆ. ನಮೂನೆ 50ರಲ್ಲಿ 10,572 ಅರ್ಜಿಗಳು ಹಾಗೂ ನಮೂನೆ 53ರಲ್ಲಿ 1,40,781 ಅರ್ಜಿಗಳು ವಿಲೇವಾರಿಗಾಗಿ ಬಾಕಿ ಉಳಿದಿವೆ. ಕಾಲಮಿತಿಯು ಈ ವರ್ಷದ ಏಪ್ರಿಲ್ 27ಕ್ಕೆ ಕೊನೆಗೊಂಡಿದೆ. ಹೀಗಾಗಿ, ಕಾಲಮಿತಿಯನ್ನು ಎರಡು ವರ್ಷ ವಿಸ್ತರಿಸುವುದು ಅವಶ್ಯಕ’ ಎಂದು ಮಸೂದೆಯಲ್ಲಿ ತಿಳಿಸಲಾಗಿದೆ.</p>.<p>ರಸ್ತೆ, ಬೀದಿ, ಓಣಿ ಅಥವಾ ಬಿ ಖರಾಬು ಭೂಮಿಯನ್ನು ಘೋಷಿಸಿದ ಬಳಿಕ ಸಾರ್ವಜನಿಕ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು 90ದಿನಗಳಿಂದ 30 ದಿನಗಳಿಗೆ ಇಳಿಸಲು 68ನೇ ಪ್ರಕರಣಕ್ಕೆ ತಿದ್ದುಪಡಿ ತರಲು ಪ್ರಸ್ತಾಪಿಸಲಾಗಿದೆ.</p>.<p>ಸಾದಿಲ್ವಾರು ನಿಧಿ ₹500 ಕೋಟಿಗೆ: ಸಾಂಕ್ರಾಮಿಕ ರೋಗಗಳು, ನೈಸರ್ಗಿಕ ವಿಪತ್ತುಗಳಂತಹ ತುರ್ತು ಸನ್ನಿವೇಶಗಳಲ್ಲಿ ಸಂತ್ರಸ್ತರಿಗೆ ಬಿಡುಗಡೆಗೊಳಿಸಲು ಅನುಕೂಲ ಕಲ್ಪಿಸುವ ಸಾದಿಲ್ವಾರು ನಿಧಿಯನ್ನು ₹ 80 ಕೋಟಿಯಿಂದ ₹500 ಕೋಟಿಗೆ ಏರಿಸುವ ಕರ್ನಾಟಕ ಸಾದಿಲ್ವಾರು ನಿಧಿ (ತಿದ್ದುಪಡಿ) ಮಸೂದೆಗೆ ವಿಧಾನಸಭೆ ಒಪ್ಪಿಗೆ ನೀಡಿತು.</p>.<p>ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ನೆರವಾಗಲು ಮುಖ್ಯಮಂತ್ರಿ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. ಅದರಲ್ಲಿ ಆಟೊ ಅಥವಾ ಟ್ಯಾಕ್ಸಿ ಚಾಲಕರಿಗೆ, ಕ್ಷೌರಿಕರು, ಅಗಸರಿಗೆ ₹5 ಸಾವಿರ, ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ಗೆ ₹25 ಸಾವಿರ, ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ಹೆಕ್ಟೇರ್ಗೆ ₹15 ಸಾವಿರ ನೀಡಲಾಗುತ್ತದೆ ಎಂದು ಪ್ರಕಟಿಸಿದ್ದರು. ಈ ಮೊತ್ತವನ್ನು ಬಜೆಟ್ನಲ್ಲಿ ಪ್ರಕಟಿಸಲಿಲ್ಲ. ಇದನ್ನು ಸಾದಿಲ್ವಾರು ನಿಧಿಯಿಂದ ಭರಿಸಲಾಗುತ್ತಿದೆ ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.</p>.<p><span class="tlid-translation translation" lang="en" tabindex="-1"><span title="">Karnataka Land Revenue Bill</span></span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>