<p><strong>ಬೆಂಗಳೂರು</strong>: ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಅಭಿವೃದ್ಧಿಗಾಗಿ ರೂಪಿಸಿರುವ ಎಸ್ಸಿಪಿ– ಟಿಎಸ್ಪಿ ಯೋಜನೆಯ ಅನುದಾನ ಬಳಕೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ವಿಧಾನಸಭೆಯಲ್ಲಿ ಶುಕ್ರವಾರ ವಾಕ್ಸಮರ ನಡೆಯಿತು.</p>.<p>ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉತ್ತರ ನೀಡಿದ ಬಳಿಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಅಭಿವೃದ್ಧಿಗೆ ಅನುದಾನ ಖರ್ಚು ಮಾಡಿಲ್ಲ. ಇದರಿಂದಾಗಿ ಸಮುದಾಯಕ್ಕೆ ಅನ್ಯಾಯವಾಗಿದೆ’ ಎಂದು ಆಕ್ಷೇಪಿಸಿದರು.</p>.<p>ಯಡಿಯೂರಪ್ಪ, ‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ, ಒಬಿಸಿಯವರ ಬಗ್ಗೆ ಕಾಳಜಿ ವಹಿಸಿದ್ದ ಕಾರಣಕ್ಕೆ ಅವರು ನಮ್ಮ ಜತೆಗೆ ಇದ್ದಾರೆ. ಮಾರ್ಚ್ ಅಂತ್ಯದ ವೇಳೆ ಯೋಜನೆಯ ಗುರಿ ಸಾಧಿಸುತ್ತೇವೆ‘ ಎಂದರು.</p>.<p>ಆಗ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ‘ಕೋವಿಡ್ ಕಾರಣಕ್ಕೆ ವಸತಿ ಶಾಲೆಗಳೆಲ್ಲ ಮುಚ್ಚಿದ್ದವು. ಹೀಗಾಗಿ ಅನುದಾನ ಬಳಕೆಯಲ್ಲಿ ಸ್ವಲ್ಪ ಹಿಂದೆ ಉಳಿದಿದ್ದೇವೆ. ಆದರೆ, ಸಮುದಾಯದ ಅಭಿವೃದ್ಧಿಗಾಗಿ ಶಾಶ್ವತ ಕೆಲಸ ಮಾಡಿದ್ದೇವೆ. 4,853 ಎಕರೆ ಭೂಮಿ ಖರೀದಿಸಿದ್ದೇವೆ. 25 ವರ್ಷಗಳಲ್ಲಿ ಯಾವ ಸರ್ಕಾರವೂ ಈ ಕೆಲಸ ಮಾಡಿರಲಿಲ್ಲ‘ ಎಂದರು.</p>.<p>ಈ ಮಾತಿಗೆ ಕಾಂಗ್ರೆಸ್ನ ಪ್ರಿಯಾಂಕ್ ಖರ್ಗೆ, ತುಕಾರಾಮ್, ಭೀಮಾ ನಾಯ್ಕ್, ಅಜಯ್ ಸಿಂಗ್, ಪಿ.ಟಿ.ಪರಮೇಶ್ವರ ನಾಯ್ಕ್ ಮತ್ತಿತರರು ಆಕ್ಷೇಪಿಸಿದರು. ಎಸ್ಸಿಪಿ– ಟಿಎಸ್ಪಿ ಕಾಯ್ದೆಯನ್ನು ತಂದಿದ್ದೇ ಸಿದ್ದರಾಮಯ್ಯ ಸರ್ಕಾರ ಎಂದರು.</p>.<p>ಗೋವಿಂದ ಕಾರಜೋಳ, ‘ನಾವು ಏನು ಮಾಡಿದ್ದೇವೆ?, ನೀವೇನೂ ಮಾಡಿದ್ದೀರಿ? ಎಂಬ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ’ ಎಂದು ಸವಾಲು ಎಸೆದರು. ’ಮುಂದಿನ ಅಧಿವೇಶನದಲ್ಲಿ ಈ ವಿಚಾರದ ಬಗ್ಗೆ ಅರ್ಧ ದಿನ ಚರ್ಚೆ ಮಾಡೋಣ‘ ಎಂದು ಮುಖ್ಯಮಂತ್ರಿ ಸಹಮತ ವ್ಯಕ್ತಪಡಿಸಿದರು. ಇದಕ್ಕೆ ನಾವು ಸಿದ್ಧರಿದ್ದೇವೆ ಎಂದು ಕಾಂಗ್ರೆಸ್ ಸದಸ್ಯರು ಹೇಳಿದರು.</p>.<p>‘ಈ ಯೋಜನೆಗೆ 17–18ರಲ್ಲಿ ನಾನು ₹30 ಸಾವಿರ ಕೋಟಿ ಕೊಟ್ಟಿದ್ದೆ. ಬಿಜೆಪಿ ಸರ್ಕಾರ ₹25 ಸಾವಿರ ಕೋಟಿಯಷ್ಟೇ ಕೊಟ್ಟಿದೆ’ ಎಂದು ಸಿದ್ದರಾಮಯ್ಯ ದೂರಿದರು.</p>.<p>ಯೋಜನೆಗೆ ಮೀಸಲಿಟ್ಟ ಮೊತ್ತ ಹಾಗೂ ಖರ್ಚು ಮಾಡಿರುವ ಬಗ್ಗೆ ಯಡಿಯೂರಪ್ಪ ವಿವರ ನೀಡಿದರು. ಅನುದಾನ ಹಂಚಿಕೆ ತಾರತಮ್ಯದ ಬಗ್ಗೆ ಸಿದ್ದರಾಮಯ್ಯ ಮಾತನಾಡಲು ಆರಂಭಿಸಿದರು.</p>.<p>ಆಗ ಮುಖ್ಯಮಂತ್ರಿ ಕುಳಿತಲ್ಲೇ ವಾಚ್ ತೋರಿಸಿ, ‘ಈಗ ಮಧ್ಯಾಹ್ನ 12.35 ಆಗಿದೆ. ರಾಷ್ಟ್ರಪತಿಯವರ ಜತೆಗೆ ಏರೊ ಇಂಡಿಯಾ ಪ್ರದರ್ಶನಕ್ಕೆ ಹೋಗಬೇಕಿದೆ. ಬೇಗ ಮುಗಿಸಿ’ ಎಂದು ನಗುತ್ತಲೇ ವಿನಂತಿಸಿದರು.</p>.<p>ಸಿದ್ದರಾಮಯ್ಯ ಕೂಡಲೇ, ‘ಮುಖ್ಯಮಂತ್ರಿಯವರ ಉತ್ತರ ನಮಗೆ ಸಮಾಧಾನ ತಂದಿಲ್ಲ. ನಾವು ಸಭಾತ್ಯಾಗ ಮಾಡುತ್ತೇವೆ’ ಎಂದು ಪ್ರಕಟಿಸಿದರು. ಕಾಂಗ್ರೆಸ್ ಸದಸ್ಯರು ಘೋಷಣೆ ಕೂಗುತ್ತಾ ಸದನದಿಂದ ನಿರ್ಗಮಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಅಭಿವೃದ್ಧಿಗಾಗಿ ರೂಪಿಸಿರುವ ಎಸ್ಸಿಪಿ– ಟಿಎಸ್ಪಿ ಯೋಜನೆಯ ಅನುದಾನ ಬಳಕೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ವಿಧಾನಸಭೆಯಲ್ಲಿ ಶುಕ್ರವಾರ ವಾಕ್ಸಮರ ನಡೆಯಿತು.</p>.<p>ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉತ್ತರ ನೀಡಿದ ಬಳಿಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಅಭಿವೃದ್ಧಿಗೆ ಅನುದಾನ ಖರ್ಚು ಮಾಡಿಲ್ಲ. ಇದರಿಂದಾಗಿ ಸಮುದಾಯಕ್ಕೆ ಅನ್ಯಾಯವಾಗಿದೆ’ ಎಂದು ಆಕ್ಷೇಪಿಸಿದರು.</p>.<p>ಯಡಿಯೂರಪ್ಪ, ‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ, ಒಬಿಸಿಯವರ ಬಗ್ಗೆ ಕಾಳಜಿ ವಹಿಸಿದ್ದ ಕಾರಣಕ್ಕೆ ಅವರು ನಮ್ಮ ಜತೆಗೆ ಇದ್ದಾರೆ. ಮಾರ್ಚ್ ಅಂತ್ಯದ ವೇಳೆ ಯೋಜನೆಯ ಗುರಿ ಸಾಧಿಸುತ್ತೇವೆ‘ ಎಂದರು.</p>.<p>ಆಗ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ‘ಕೋವಿಡ್ ಕಾರಣಕ್ಕೆ ವಸತಿ ಶಾಲೆಗಳೆಲ್ಲ ಮುಚ್ಚಿದ್ದವು. ಹೀಗಾಗಿ ಅನುದಾನ ಬಳಕೆಯಲ್ಲಿ ಸ್ವಲ್ಪ ಹಿಂದೆ ಉಳಿದಿದ್ದೇವೆ. ಆದರೆ, ಸಮುದಾಯದ ಅಭಿವೃದ್ಧಿಗಾಗಿ ಶಾಶ್ವತ ಕೆಲಸ ಮಾಡಿದ್ದೇವೆ. 4,853 ಎಕರೆ ಭೂಮಿ ಖರೀದಿಸಿದ್ದೇವೆ. 25 ವರ್ಷಗಳಲ್ಲಿ ಯಾವ ಸರ್ಕಾರವೂ ಈ ಕೆಲಸ ಮಾಡಿರಲಿಲ್ಲ‘ ಎಂದರು.</p>.<p>ಈ ಮಾತಿಗೆ ಕಾಂಗ್ರೆಸ್ನ ಪ್ರಿಯಾಂಕ್ ಖರ್ಗೆ, ತುಕಾರಾಮ್, ಭೀಮಾ ನಾಯ್ಕ್, ಅಜಯ್ ಸಿಂಗ್, ಪಿ.ಟಿ.ಪರಮೇಶ್ವರ ನಾಯ್ಕ್ ಮತ್ತಿತರರು ಆಕ್ಷೇಪಿಸಿದರು. ಎಸ್ಸಿಪಿ– ಟಿಎಸ್ಪಿ ಕಾಯ್ದೆಯನ್ನು ತಂದಿದ್ದೇ ಸಿದ್ದರಾಮಯ್ಯ ಸರ್ಕಾರ ಎಂದರು.</p>.<p>ಗೋವಿಂದ ಕಾರಜೋಳ, ‘ನಾವು ಏನು ಮಾಡಿದ್ದೇವೆ?, ನೀವೇನೂ ಮಾಡಿದ್ದೀರಿ? ಎಂಬ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ’ ಎಂದು ಸವಾಲು ಎಸೆದರು. ’ಮುಂದಿನ ಅಧಿವೇಶನದಲ್ಲಿ ಈ ವಿಚಾರದ ಬಗ್ಗೆ ಅರ್ಧ ದಿನ ಚರ್ಚೆ ಮಾಡೋಣ‘ ಎಂದು ಮುಖ್ಯಮಂತ್ರಿ ಸಹಮತ ವ್ಯಕ್ತಪಡಿಸಿದರು. ಇದಕ್ಕೆ ನಾವು ಸಿದ್ಧರಿದ್ದೇವೆ ಎಂದು ಕಾಂಗ್ರೆಸ್ ಸದಸ್ಯರು ಹೇಳಿದರು.</p>.<p>‘ಈ ಯೋಜನೆಗೆ 17–18ರಲ್ಲಿ ನಾನು ₹30 ಸಾವಿರ ಕೋಟಿ ಕೊಟ್ಟಿದ್ದೆ. ಬಿಜೆಪಿ ಸರ್ಕಾರ ₹25 ಸಾವಿರ ಕೋಟಿಯಷ್ಟೇ ಕೊಟ್ಟಿದೆ’ ಎಂದು ಸಿದ್ದರಾಮಯ್ಯ ದೂರಿದರು.</p>.<p>ಯೋಜನೆಗೆ ಮೀಸಲಿಟ್ಟ ಮೊತ್ತ ಹಾಗೂ ಖರ್ಚು ಮಾಡಿರುವ ಬಗ್ಗೆ ಯಡಿಯೂರಪ್ಪ ವಿವರ ನೀಡಿದರು. ಅನುದಾನ ಹಂಚಿಕೆ ತಾರತಮ್ಯದ ಬಗ್ಗೆ ಸಿದ್ದರಾಮಯ್ಯ ಮಾತನಾಡಲು ಆರಂಭಿಸಿದರು.</p>.<p>ಆಗ ಮುಖ್ಯಮಂತ್ರಿ ಕುಳಿತಲ್ಲೇ ವಾಚ್ ತೋರಿಸಿ, ‘ಈಗ ಮಧ್ಯಾಹ್ನ 12.35 ಆಗಿದೆ. ರಾಷ್ಟ್ರಪತಿಯವರ ಜತೆಗೆ ಏರೊ ಇಂಡಿಯಾ ಪ್ರದರ್ಶನಕ್ಕೆ ಹೋಗಬೇಕಿದೆ. ಬೇಗ ಮುಗಿಸಿ’ ಎಂದು ನಗುತ್ತಲೇ ವಿನಂತಿಸಿದರು.</p>.<p>ಸಿದ್ದರಾಮಯ್ಯ ಕೂಡಲೇ, ‘ಮುಖ್ಯಮಂತ್ರಿಯವರ ಉತ್ತರ ನಮಗೆ ಸಮಾಧಾನ ತಂದಿಲ್ಲ. ನಾವು ಸಭಾತ್ಯಾಗ ಮಾಡುತ್ತೇವೆ’ ಎಂದು ಪ್ರಕಟಿಸಿದರು. ಕಾಂಗ್ರೆಸ್ ಸದಸ್ಯರು ಘೋಷಣೆ ಕೂಗುತ್ತಾ ಸದನದಿಂದ ನಿರ್ಗಮಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>