‘ಪ್ರತಿ ಬಾರಿ ಅಧಿವೇಶನ ನಡೆದಾಗಲೂ ವಾಸ್ತವ್ಯಕ್ಕೆಂದು ಕೋಟಿಗಟ್ಟಲೆ ವ್ಯಯಿಸುವುದನ್ನು ತಪ್ಪಿಸಲು, ಇಲ್ಲಿ ಶಾಸಕರ ಭವನ ನಿರ್ಮಿಸಬೇಕು ಎನ್ನುವುದು ಬಹುಜನರ ಬೇಡಿಕೆಯಾಗಿದೆ. ಇದನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು. ಸ್ವಂತ ಕಟ್ಟಡ ನಿರ್ಮಿಸುವುದರಿಂದ ಅಪಾರ ಪ್ರಮಾಣದ ಹಣ ಉಳಿಸಬಹುದು. ಪ್ರತಿ ವರ್ಷ ಅಧಿವೇಶನ ನಡೆಸುವುದರಿಂದ ಇಲ್ಲಿ ಶಾಸಕರ ಭವನ ನಿರ್ಮಿಸುವುದು ಸೂಕ್ತ ಎನ್ನುವುದು ನನ್ನ ಅಭಿಪ್ರಾಯ’ ಎಂದರು.