ನೀತಿ ಆಯೋಗದ ಅಧಿಕಾರಿಗಳು, ಇತ್ತೀಚೆಗೆ ನಡೆದ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ‘ಆಸ್ತಿ ನಗದೀಕರಣ’ ಕುರಿತು ಮಾರ್ಗದರ್ಶನ ನೀಡಿದ್ದಾರೆ. ರಾಜ್ಯ ಹೆದ್ದಾರಿಗಳು, ನಗರ ಬಸ್ ನಿಲ್ದಾಣಗಳು, ಕ್ರೀಡಾ ಸಂಕೀರ್ಣಗಳು, ಸಣ್ಣ ಬಂದರುಗಳು, ವಿಮಾನ ನಿಲ್ದಾಣಗಳು ಸೇರಿದಂತೆ ಕರ್ನಾಟಕದಲ್ಲಿ ಪ್ರಮುಖ ಆಸ್ತಿಗಳನ್ನು ನಗದೀಕರಣ ಯೋಜನೆ ವ್ಯಾಪ್ತಿಗೆ ಒಳಪಡಿಸಲು ಗುರುತಿಸುವಂತೆ ಸೂಚಿಸಿದ್ದರು.