ಜೆಡಿಎಸ್ನ ಭದ್ರಕೋಟೆಯಾದ ಜಿಲ್ಲೆಯಲ್ಲಿ ಬಿಜೆಪಿ ತನ್ನ ನೆಲೆ ವಿಸ್ತರಿಸಲು ಮುಂದಾಗಿದ್ದು, ರಾಮಸ್ವಾಮಿ ಅವರನ್ನು ಸೆಳೆಯುವ ಮೂಲಕ ಪಕ್ಷದ ಬಲವರ್ಧನೆಗೆ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ಮೊದಲು ಕಾಂಗ್ರೆಸ್ನಲ್ಲಿದ್ದ ರಾಮಸ್ವಾಮಿ, ನಂತರ ಜೆಡಿಎಸ್ಗೆ ಬಂದಿದ್ದರು. ಇದೀಗ ಬಿಜೆಪಿಗೆ ಸೇರಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.