<p><strong>ಬೆಂಗಳೂರು:</strong> ಅಟಲ್ ಭೂಜಲ್ ಯೋಜನೆಯಡಿ ಮೊದಲ ಹಂತದಲ್ಲಿ 16 ಜಿಲ್ಲೆಗಳ 41 ತಾಲ್ಲೂಕುಗಳಲ್ಲಿ ನೀರಿನ ಅಂತರ್ಜಲಮಟ್ಟ ಏರಿಕೆ ಮಾಡಲು ಯೋಜನೆ ರೂಪಿಸಲಾಗುತ್ತಿದೆ ಎಂದು ಕಾನೂನು ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.</p>.<p>ಈ ಯೋಜನೆಯ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ ₹1,230 ಕೋಟಿಯನ್ನು ಮೀಸಲಿಟ್ಟಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಕೇಂದ್ರ ಸರ್ಕಾರವೇ 16 ಜಿಲ್ಲೆಗಳನ್ನು ಈ ಯೋಜನೆಗಾಗಿ ಆಯ್ಕೆ ಮಾಡಿದೆ. ಮಳೆಯ ಮೂಲಕ ಭೂಮಿಗೆ ಬಿದ್ದ ನೀರು ಇಂಗುತ್ತಿಲ್ಲ. ರಾಜ್ಯದಲ್ಲಿ ನೀರಿನ ಮಟ್ಟ ಬಹಳ ಕುಸಿದಿದೆ ಮತ್ತು ಅಂತರ್ಜಲ ಮಟ್ಟವೂ ಕುಸಿದಿದೆ. ಈ ಹಿನ್ನೆಲೆಯಲ್ಲಿ ಅಂತರ್ಜಲ ವೃದ್ಧಿ ಅತಿ ಅವಶ್ಯಕ. ಈ ಕುರಿತು ಅಧಿಕಾರಿಗಳ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಅವರು ಹೇಳಿದರು.</p>.<p>ಕೇಂದ್ರದ ಸೂಚನೆಯಂತೆ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಬಾಗಲಕೋಟೆ, ಗದಗ, ಬೆಳಗಾವಿ, ಹಾಸನ ಜಿಲ್ಲೆಯಲ್ಲಿ ಯೋಜನೆ ಕಾರ್ಯಗತಗೊಳಿಸಲಾಗುತ್ತಿದೆ ಎಂದರು.<br />ಬೆಂಗಳೂರಿನ ಬೆಳ್ಳಂದೂರು ಕೆರೆಯ ಹೂಳು ತೆಗೆಯಲು ₹300 ಕೋಟಿ ಬಂದಿದೆ, ಆದರೆ, ಹೂಳು ತೆಗೆಯಲು ಆಗುತ್ತಿಲ್ಲ. ಪ್ರತಿನಿತ್ಯ ಏನಿಲ್ಲ ಅಂದರೂ 300 ರಿಂದ 400 ಲಾರಿ ಲೋಡ್ಗಳಷ್ಟು ಹೂಳು ತೆಗೆದು ಸಾಗಿಸಬೇಕು. ಇದಕ್ಕೆ ಸಾರ್ವಜನಿಕರು ಆಕ್ಷೇಪ ಎತ್ತಬಹುದು. ಹೂಳು ತೆಗೆಯಲು ಹಸಿರು ಪೀಠ ಸೂಚನೆ ನೀಡಿದೆ. ಹೂಳು ತೆಗೆಯಲು 2 ವರ್ಷವಾದರೂ ಬೇಕು. ಅದನ್ನು ಕಾರ್ಯಗತಗೊಳಿಸುವುದು ಹೇಗೆ ಎಂಬ ಜಿಜ್ಞಾಸೆ ಕಾಡಿದೆ. ಇದಕ್ಕೆ ಸಾರ್ವಜನಿಕರ ಸಹಕಾರವೂ ಬೇಕು ಎಂದರು.</p>.<p><strong>ಉಸ್ತುವಾರಿ ಬದಲಾವಣೆ ಬೇಸರ ಇಲ್ಲ</strong></p>.<p>ಹಾಸನ ಜಿಲ್ಲಾ ಉಸ್ತುವಾರಿಯಿಂದ ಮುಕ್ತಗೊಳಿಸಿರುವುದಕ್ಕೆ ಬೇಸರವಿಲ್ಲ. ತುಮಕೂರು ಜಿಲ್ಲೆ ಉಸ್ತುವಾರಿ ಇದೆ. ಹಾಸನ ಜಿಲ್ಲಾ ಉಸ್ತುವಾರಿ ಆಗಿದ್ದಾಗ ಶಾಸಕ ಎಚ್.ಡಿ.ರೇವಣ್ಣ ನನಗೆ ಕಾಟ ಕೊಟ್ಟಿಲ್ಲ. ಅವರಿಂದ ಯಾವುದೇ ಸಮಸ್ಯೆ ಎದುರಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಟಲ್ ಭೂಜಲ್ ಯೋಜನೆಯಡಿ ಮೊದಲ ಹಂತದಲ್ಲಿ 16 ಜಿಲ್ಲೆಗಳ 41 ತಾಲ್ಲೂಕುಗಳಲ್ಲಿ ನೀರಿನ ಅಂತರ್ಜಲಮಟ್ಟ ಏರಿಕೆ ಮಾಡಲು ಯೋಜನೆ ರೂಪಿಸಲಾಗುತ್ತಿದೆ ಎಂದು ಕಾನೂನು ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.</p>.<p>ಈ ಯೋಜನೆಯ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ ₹1,230 ಕೋಟಿಯನ್ನು ಮೀಸಲಿಟ್ಟಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಕೇಂದ್ರ ಸರ್ಕಾರವೇ 16 ಜಿಲ್ಲೆಗಳನ್ನು ಈ ಯೋಜನೆಗಾಗಿ ಆಯ್ಕೆ ಮಾಡಿದೆ. ಮಳೆಯ ಮೂಲಕ ಭೂಮಿಗೆ ಬಿದ್ದ ನೀರು ಇಂಗುತ್ತಿಲ್ಲ. ರಾಜ್ಯದಲ್ಲಿ ನೀರಿನ ಮಟ್ಟ ಬಹಳ ಕುಸಿದಿದೆ ಮತ್ತು ಅಂತರ್ಜಲ ಮಟ್ಟವೂ ಕುಸಿದಿದೆ. ಈ ಹಿನ್ನೆಲೆಯಲ್ಲಿ ಅಂತರ್ಜಲ ವೃದ್ಧಿ ಅತಿ ಅವಶ್ಯಕ. ಈ ಕುರಿತು ಅಧಿಕಾರಿಗಳ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಅವರು ಹೇಳಿದರು.</p>.<p>ಕೇಂದ್ರದ ಸೂಚನೆಯಂತೆ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಬಾಗಲಕೋಟೆ, ಗದಗ, ಬೆಳಗಾವಿ, ಹಾಸನ ಜಿಲ್ಲೆಯಲ್ಲಿ ಯೋಜನೆ ಕಾರ್ಯಗತಗೊಳಿಸಲಾಗುತ್ತಿದೆ ಎಂದರು.<br />ಬೆಂಗಳೂರಿನ ಬೆಳ್ಳಂದೂರು ಕೆರೆಯ ಹೂಳು ತೆಗೆಯಲು ₹300 ಕೋಟಿ ಬಂದಿದೆ, ಆದರೆ, ಹೂಳು ತೆಗೆಯಲು ಆಗುತ್ತಿಲ್ಲ. ಪ್ರತಿನಿತ್ಯ ಏನಿಲ್ಲ ಅಂದರೂ 300 ರಿಂದ 400 ಲಾರಿ ಲೋಡ್ಗಳಷ್ಟು ಹೂಳು ತೆಗೆದು ಸಾಗಿಸಬೇಕು. ಇದಕ್ಕೆ ಸಾರ್ವಜನಿಕರು ಆಕ್ಷೇಪ ಎತ್ತಬಹುದು. ಹೂಳು ತೆಗೆಯಲು ಹಸಿರು ಪೀಠ ಸೂಚನೆ ನೀಡಿದೆ. ಹೂಳು ತೆಗೆಯಲು 2 ವರ್ಷವಾದರೂ ಬೇಕು. ಅದನ್ನು ಕಾರ್ಯಗತಗೊಳಿಸುವುದು ಹೇಗೆ ಎಂಬ ಜಿಜ್ಞಾಸೆ ಕಾಡಿದೆ. ಇದಕ್ಕೆ ಸಾರ್ವಜನಿಕರ ಸಹಕಾರವೂ ಬೇಕು ಎಂದರು.</p>.<p><strong>ಉಸ್ತುವಾರಿ ಬದಲಾವಣೆ ಬೇಸರ ಇಲ್ಲ</strong></p>.<p>ಹಾಸನ ಜಿಲ್ಲಾ ಉಸ್ತುವಾರಿಯಿಂದ ಮುಕ್ತಗೊಳಿಸಿರುವುದಕ್ಕೆ ಬೇಸರವಿಲ್ಲ. ತುಮಕೂರು ಜಿಲ್ಲೆ ಉಸ್ತುವಾರಿ ಇದೆ. ಹಾಸನ ಜಿಲ್ಲಾ ಉಸ್ತುವಾರಿ ಆಗಿದ್ದಾಗ ಶಾಸಕ ಎಚ್.ಡಿ.ರೇವಣ್ಣ ನನಗೆ ಕಾಟ ಕೊಟ್ಟಿಲ್ಲ. ಅವರಿಂದ ಯಾವುದೇ ಸಮಸ್ಯೆ ಎದುರಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>