<p><strong>ಬೆಂಗಳೂರು</strong>: ‘ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನವನ್ನು ಜ್ಞಾನಜ್ಯೋತಿ ಸಭಾಂಗಣದಲ್ಲಿ ಇದೇ 25ರಂದು ಹಮ್ಮಿಕೊಳ್ಳಲಾಗಿದೆ’ ಎಂದು ಬಿಜೆಪಿ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ವಾಜಪೇಯಿ ಅವರ ಜನ್ಮದಿನವನ್ನು ‘ಸುಶಾಸನ ದಿನ’ವಾಗಿ ದೇಶದಾದ್ಯಂತ ಆಚರಿಸಲಾಗುತ್ತಿದೆ. ಪ್ರತಿಷ್ಠಾನವು ವಾಜಪೇಯಿ ಅವರ ಗೌರವಾರ್ಥ ಪ್ರತಿವರ್ಷ ಸುಶಾಸನ ದಿನವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದೆ. ಈ ಬಾರಿ ‘ಶಿಕ್ಷಣದಲ್ಲಿ ಸುಶಾಸನ’ ಎಂಬ ಕಾರ್ಯಕ್ರಮವನ್ನು ಮಧ್ಯಾಹ್ನ 1 ಗಂಟೆಯಿಂದ ಸಂಜೆ 7ರವರೆಗೆ ಆಯೋಜಿಸಲಾಗಿದೆ’ ಎಂದರು.</p>.<p>‘ಕಾರ್ಯಕ್ರಮವನ್ನು ಎರಡು ಭಾಗವಾಗಿ ಮಾಡಲಾಗಿದ್ದು, ಮೊದಲು ಸಂವಾದ ನಡೆಯಲಿದೆ. ಸಾರ್ವಜನಿಕ ವಿಶ್ವವಿದ್ಯಾಲಯ, ಪಠ್ಯಕ್ರಮ, ಕೃತಕ ಬುದ್ಧಿಮತ್ತೆ ಕುರಿತಂತೆ ಸಂವಾದ ನಡೆಯಲಿದೆ. ಸಾಯಿ ಸ್ವಾಮಿಯವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಿಕ್ಷಣ- ತಂತ್ರಜ್ಞಾನ ಕ್ಷೇತ್ರದ 15 ಜನ ತಜ್ಞರು ಇದರಲ್ಲಿ ಭಾಗವಹಿಸಲಿದ್ದಾರೆ’ ಎಂದರು.</p>.<p>‘ಎರಡನೇ ಭಾಗದಲ್ಲಿ ಅಟಲ್ ಪುರಸ್ಕಾರ ಪ್ರದಾನ ನಡೆಯಲಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಬಸವರಾಜ ಬೊಮ್ಮಾಯಿ, ಸಂಸ್ಥೆಯ ಅಧ್ಯಕ್ಷ ಪ್ರೊ. ಕೃಷ್ಣೇಗೌಡ ಭಾಗವಹಿಸುತ್ತಾರೆ. ಆನ್ಲೈನ್ ನೋಂದಣಿಗೆ ಅವಕಾಶವಿದೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನವನ್ನು ಜ್ಞಾನಜ್ಯೋತಿ ಸಭಾಂಗಣದಲ್ಲಿ ಇದೇ 25ರಂದು ಹಮ್ಮಿಕೊಳ್ಳಲಾಗಿದೆ’ ಎಂದು ಬಿಜೆಪಿ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ವಾಜಪೇಯಿ ಅವರ ಜನ್ಮದಿನವನ್ನು ‘ಸುಶಾಸನ ದಿನ’ವಾಗಿ ದೇಶದಾದ್ಯಂತ ಆಚರಿಸಲಾಗುತ್ತಿದೆ. ಪ್ರತಿಷ್ಠಾನವು ವಾಜಪೇಯಿ ಅವರ ಗೌರವಾರ್ಥ ಪ್ರತಿವರ್ಷ ಸುಶಾಸನ ದಿನವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದೆ. ಈ ಬಾರಿ ‘ಶಿಕ್ಷಣದಲ್ಲಿ ಸುಶಾಸನ’ ಎಂಬ ಕಾರ್ಯಕ್ರಮವನ್ನು ಮಧ್ಯಾಹ್ನ 1 ಗಂಟೆಯಿಂದ ಸಂಜೆ 7ರವರೆಗೆ ಆಯೋಜಿಸಲಾಗಿದೆ’ ಎಂದರು.</p>.<p>‘ಕಾರ್ಯಕ್ರಮವನ್ನು ಎರಡು ಭಾಗವಾಗಿ ಮಾಡಲಾಗಿದ್ದು, ಮೊದಲು ಸಂವಾದ ನಡೆಯಲಿದೆ. ಸಾರ್ವಜನಿಕ ವಿಶ್ವವಿದ್ಯಾಲಯ, ಪಠ್ಯಕ್ರಮ, ಕೃತಕ ಬುದ್ಧಿಮತ್ತೆ ಕುರಿತಂತೆ ಸಂವಾದ ನಡೆಯಲಿದೆ. ಸಾಯಿ ಸ್ವಾಮಿಯವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಿಕ್ಷಣ- ತಂತ್ರಜ್ಞಾನ ಕ್ಷೇತ್ರದ 15 ಜನ ತಜ್ಞರು ಇದರಲ್ಲಿ ಭಾಗವಹಿಸಲಿದ್ದಾರೆ’ ಎಂದರು.</p>.<p>‘ಎರಡನೇ ಭಾಗದಲ್ಲಿ ಅಟಲ್ ಪುರಸ್ಕಾರ ಪ್ರದಾನ ನಡೆಯಲಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಬಸವರಾಜ ಬೊಮ್ಮಾಯಿ, ಸಂಸ್ಥೆಯ ಅಧ್ಯಕ್ಷ ಪ್ರೊ. ಕೃಷ್ಣೇಗೌಡ ಭಾಗವಹಿಸುತ್ತಾರೆ. ಆನ್ಲೈನ್ ನೋಂದಣಿಗೆ ಅವಕಾಶವಿದೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>