<p><strong>ಮಂಗಳೂರು</strong>: ‘ದೇಶದಲ್ಲಿ ಅಶಾಂತಿ ಮೂಡಿಸಲು ಹೊರಟವರಿಗೆ ತಕ್ಕ ಪಾಠ ಕಲಿಸಬೇಕಾಗಿದೆ. ಪರಿಶಿಷ್ಟರು, ಮುಸ್ಲಿಮರು, ಮಹಿಳೆಯರು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ ’ ಎಂದು ದಸಂಸ (ಅಂಬೇಡ್ಕರ್ವಾದ) ರಾಜ್ಯ ಘಟಕದ ಅಧ್ಯಕ್ಷ ಮಾವಳ್ಳಿ ಶಂಕರ್ ಆರೋಪಿಸಿದರು.</p>.<p>ಸಿಪಿಎಂ ಕರ್ನಾಟಕ ರಾಜ್ಯ ಸಮಿತಿ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಯೋಜಿಸಿರುವರಾಜ್ಯ ಮಟ್ಟದ ಮುಸ್ಲಿಂ ಸಮಾವೇಶದಲ್ಲಿ ಅವರು ಮಾತನಾಡಿದರು. ‘ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗುತ್ತಿದೆ. ಪಠ್ಯಪುಸ್ತಕ ಪರಿಷ್ಕರಣೆಯಲ್ಲೂ ಗೊಂದಲ ಸೃಷ್ಟಿಸಲಾಗಿದೆ‘ ಎಂದರು.</p>.<p>‘ಭಾರತವನ್ನು ಪಾಕಿಸ್ತಾನದಂಥ ಮತಾಂಧ ರಾಷ್ಟ್ರವನ್ನಾಗಿಸಲು ಬಿಜೆಪಿ ಮತ್ತು ಆರ್ಎಸ್ಎಸ್ ಪ್ರಯತ್ನಿಸುತ್ತಿವೆ. ಅದಕ್ಕೆ ಅವಕಾಶ ನೀಡಬಾರದು.ಜಾತ್ಯತೀತ ನಿಲುವು ಭಾರತದ ಜೀವವಾಯು. ಅದು ನಾಶವಾದರೆ ಭಾರತ ಇಲ್ಲವಾಗುತ್ತದೆ’ ಎಂದು ಸಮಾವೇಶ ಉದ್ಘಾಟಿಸಿದ ಕೇರಳದ ಶಾಸಕ ಡಾ.ಕೆ.ಟಿ. ಜಲೀಲ್ ಎಚ್ಚರಿಸಿದರು.</p>.<p>‘ಸಮದಾಯದ ಸಂಕಟವನ್ನು ರಾಜ್ಯಕ್ಕೆ ತಿಳಿಸುವುದು ಸಮಾವೇಶದ ಉದ್ದೇಶ. ಮುಸ್ಲಿಂ ಸಮಾವೇಶ’ ಎಂದು ಸಿಪಿಎಂ ರಾಜ್ಯ ಸಮಿತಿ ಸದಸ್ಯ ಮುನೀರ್ ಕಾಟಿಪಳ್ಳ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ‘ದೇಶದಲ್ಲಿ ಅಶಾಂತಿ ಮೂಡಿಸಲು ಹೊರಟವರಿಗೆ ತಕ್ಕ ಪಾಠ ಕಲಿಸಬೇಕಾಗಿದೆ. ಪರಿಶಿಷ್ಟರು, ಮುಸ್ಲಿಮರು, ಮಹಿಳೆಯರು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ ’ ಎಂದು ದಸಂಸ (ಅಂಬೇಡ್ಕರ್ವಾದ) ರಾಜ್ಯ ಘಟಕದ ಅಧ್ಯಕ್ಷ ಮಾವಳ್ಳಿ ಶಂಕರ್ ಆರೋಪಿಸಿದರು.</p>.<p>ಸಿಪಿಎಂ ಕರ್ನಾಟಕ ರಾಜ್ಯ ಸಮಿತಿ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಯೋಜಿಸಿರುವರಾಜ್ಯ ಮಟ್ಟದ ಮುಸ್ಲಿಂ ಸಮಾವೇಶದಲ್ಲಿ ಅವರು ಮಾತನಾಡಿದರು. ‘ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗುತ್ತಿದೆ. ಪಠ್ಯಪುಸ್ತಕ ಪರಿಷ್ಕರಣೆಯಲ್ಲೂ ಗೊಂದಲ ಸೃಷ್ಟಿಸಲಾಗಿದೆ‘ ಎಂದರು.</p>.<p>‘ಭಾರತವನ್ನು ಪಾಕಿಸ್ತಾನದಂಥ ಮತಾಂಧ ರಾಷ್ಟ್ರವನ್ನಾಗಿಸಲು ಬಿಜೆಪಿ ಮತ್ತು ಆರ್ಎಸ್ಎಸ್ ಪ್ರಯತ್ನಿಸುತ್ತಿವೆ. ಅದಕ್ಕೆ ಅವಕಾಶ ನೀಡಬಾರದು.ಜಾತ್ಯತೀತ ನಿಲುವು ಭಾರತದ ಜೀವವಾಯು. ಅದು ನಾಶವಾದರೆ ಭಾರತ ಇಲ್ಲವಾಗುತ್ತದೆ’ ಎಂದು ಸಮಾವೇಶ ಉದ್ಘಾಟಿಸಿದ ಕೇರಳದ ಶಾಸಕ ಡಾ.ಕೆ.ಟಿ. ಜಲೀಲ್ ಎಚ್ಚರಿಸಿದರು.</p>.<p>‘ಸಮದಾಯದ ಸಂಕಟವನ್ನು ರಾಜ್ಯಕ್ಕೆ ತಿಳಿಸುವುದು ಸಮಾವೇಶದ ಉದ್ದೇಶ. ಮುಸ್ಲಿಂ ಸಮಾವೇಶ’ ಎಂದು ಸಿಪಿಎಂ ರಾಜ್ಯ ಸಮಿತಿ ಸದಸ್ಯ ಮುನೀರ್ ಕಾಟಿಪಳ್ಳ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>