ಬೆಳಿಗ್ಗೆ ಕೇಂದ್ರಕ್ಕೆ ಹೋಗಿದ್ದ ತಹಶೀಲ್ದಾರ್ ಆರ್.ಕೆ. ಕುಲಕರ್ಣಿ, ‘ಪರೀಕ್ಷೆಗೆ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗುವುದು. ನೆಗೆಟಿವ್ ಬಂದರೆ ನಿಮ್ಮನ್ನು ಮನೆಗಳಿಗೆ ಕಳುಹಿಸಲು ಅನುಕೂಲವಾಗುತ್ತದೆ’ ಎಂದು ತಿಳಿಸಿದ್ದರು. ಆಗಲೂ ಮೊದಲ ವಿರೋಧ ವ್ಯಕ್ತಪಡಿಸಿದ್ದ ಅವರು ನಂತರ ಸಮ್ಮತಿಸಿದ್ದರು. ಆದರೆ, ಮಧ್ಯಾಹ್ನ ಬಂದ ಪಿಡಿಒ ಪ್ರಶಾಂತ ಮುನವಳ್ಳಿ, ಗ್ರಾಮ ಲೆಕ್ಕಾಧಿಕಾರಿ ಪ್ರಶಾಂತ ನೇಸರಗಿ ಹಾಗೂ ಆಶಾ ಕಾರ್ಯಕರ್ತರೊಂದಿಗೆ ವಾಗ್ವಾದ ನಡೆಸಿದ್ದಾರೆ. ಕರೆ ಮಾಡಿ ಊರಿನವರನ್ನೂ ಕರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.