<p><strong>ಮೈಸೂರು: </strong>ಹಲ್ಲೆಗೆ ಒಳಗಾಗಿ ಇಲ್ಲಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿರುವ ಶಾಸಕ ತನ್ವೀರ್ ಸೇಠ್ ಅವರ ಆರೋಗ್ಯದಲ್ಲಿ ಮಂಗಳವಾರ ಚೇತರಿಕೆ ಕಂಡು ಬಂದಿದೆ.</p>.<p>ಈ ಕುರಿತು ಪ್ರತಿಕ್ರಿಯಿಸಿರುವ ಆಸ್ಪತ್ರೆಯ ವೈದ್ಯಕೀಯ ಸೇವೆಗಳ ಅಧೀಕ್ಷಕ ಡಾ.ಉಪೇಂದ್ರ ಶೆಣೈ, ‘ತನ್ವೀರ್ ಸೇಠ್ ಚಿಕಿತ್ಸೆಗೆ ಉತ್ತಮವಾಗಿಯೆ ಸ್ಪಂದಿಸುತ್ತಿದ್ದಾರೆ. ಸಂಜೆ ವೇಳೆಗೆ ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಲಾಗುವುದು’ಎಂದು ಹೇಳಿದ್ದಾರೆ.</p>.<p>ಈ ಮಧ್ಯೆ ತನ್ವೀರ್ ಸೇಠ್ ಅವರ ಗನ್ ಮ್ಯಾನ್ ಫೈರೋಜ್ ಖಾನ್ ಅವರನ್ನು ಅಮಾನತುಪಡಿಸಲಾಗಿದೆ. ಫೈರೋಜ್ ಖಾನ್ ಇದ್ದಾಗ್ಯೂ ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆಸಿರುವುದು ಭದ್ರತಾಲೋಪ ಎಂದು ಪರಿಗಣಿಸಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.</p>.<p><strong>ರಾತ್ರಿ ಇಡೀ ವಿಚಾರಣೆ: </strong>ಹಲ್ಲೆಗೆ ಸಂಬಂಧಿಸಿದಂತೆ ವಶಕ್ಕೆ ತೆಗೆದುಕೊಂಡಿರುವ 10 ಮಂದಿಯನ್ನು ಪೊಲೀಸರು ಅಜ್ಞಾತಸ್ಥಳದಲ್ಲಿ ರಾತ್ರಿ ಇಡಿ ವಿಚಾರಣೆ ನಡೆಸಿದ್ದಾರೆ. ಇನ್ನಷ್ಟು ಮಂದಿಯ ಹುಡುಕಾಟದಲ್ಲಿ ತೊಡಗಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p><strong>ಇದನ್ನೂ ಓದಿ...<a href="https://www.prajavani.net/stories/stateregional/one-organisation-plan-to-kill-tanveer-sait-5-people-under-police-custody-683123.html" target="_blank">ತನ್ವೀರ್ ಸೇಠ್ ಕೊಲೆಗೆ ಸಂಘಟನೆ ಸಂಚು: ಐದು ಮಂದಿ ಪೊಲೀಸರ ವಶಕ್ಕೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಹಲ್ಲೆಗೆ ಒಳಗಾಗಿ ಇಲ್ಲಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿರುವ ಶಾಸಕ ತನ್ವೀರ್ ಸೇಠ್ ಅವರ ಆರೋಗ್ಯದಲ್ಲಿ ಮಂಗಳವಾರ ಚೇತರಿಕೆ ಕಂಡು ಬಂದಿದೆ.</p>.<p>ಈ ಕುರಿತು ಪ್ರತಿಕ್ರಿಯಿಸಿರುವ ಆಸ್ಪತ್ರೆಯ ವೈದ್ಯಕೀಯ ಸೇವೆಗಳ ಅಧೀಕ್ಷಕ ಡಾ.ಉಪೇಂದ್ರ ಶೆಣೈ, ‘ತನ್ವೀರ್ ಸೇಠ್ ಚಿಕಿತ್ಸೆಗೆ ಉತ್ತಮವಾಗಿಯೆ ಸ್ಪಂದಿಸುತ್ತಿದ್ದಾರೆ. ಸಂಜೆ ವೇಳೆಗೆ ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಲಾಗುವುದು’ಎಂದು ಹೇಳಿದ್ದಾರೆ.</p>.<p>ಈ ಮಧ್ಯೆ ತನ್ವೀರ್ ಸೇಠ್ ಅವರ ಗನ್ ಮ್ಯಾನ್ ಫೈರೋಜ್ ಖಾನ್ ಅವರನ್ನು ಅಮಾನತುಪಡಿಸಲಾಗಿದೆ. ಫೈರೋಜ್ ಖಾನ್ ಇದ್ದಾಗ್ಯೂ ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆಸಿರುವುದು ಭದ್ರತಾಲೋಪ ಎಂದು ಪರಿಗಣಿಸಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.</p>.<p><strong>ರಾತ್ರಿ ಇಡೀ ವಿಚಾರಣೆ: </strong>ಹಲ್ಲೆಗೆ ಸಂಬಂಧಿಸಿದಂತೆ ವಶಕ್ಕೆ ತೆಗೆದುಕೊಂಡಿರುವ 10 ಮಂದಿಯನ್ನು ಪೊಲೀಸರು ಅಜ್ಞಾತಸ್ಥಳದಲ್ಲಿ ರಾತ್ರಿ ಇಡಿ ವಿಚಾರಣೆ ನಡೆಸಿದ್ದಾರೆ. ಇನ್ನಷ್ಟು ಮಂದಿಯ ಹುಡುಕಾಟದಲ್ಲಿ ತೊಡಗಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p><strong>ಇದನ್ನೂ ಓದಿ...<a href="https://www.prajavani.net/stories/stateregional/one-organisation-plan-to-kill-tanveer-sait-5-people-under-police-custody-683123.html" target="_blank">ತನ್ವೀರ್ ಸೇಠ್ ಕೊಲೆಗೆ ಸಂಘಟನೆ ಸಂಚು: ಐದು ಮಂದಿ ಪೊಲೀಸರ ವಶಕ್ಕೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>