<p><strong>ಮೈಸೂರು:</strong> ರಾಜಕೀಯ ಅಸ್ತಿತ್ವಕ್ಕಾಗಿ ಶಾಸಕ ತನ್ವೀರ್ಸೇಠ್ ಮೇಲೆ ಹಲ್ಲೆ ನಡೆಸಲಾಗಿದೆ. ರಾಜಕೀಯ ಪೈಪೋಟಿ ಹಾಗೂ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳು ಇದರ ಹಿಂದಿರುವುದು ಪ್ರಾಥಮಿಕ ತನಿಖೆ ವೇಳೆ ಸ್ಪಷ್ಟವಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಬಂಧಿತ ಆರೋಪಿಯು ಪಿಎಫ್ಐ ಹಾಗೂ ಎಸ್ಡಿಪಿಐ ಎರಡೂ ಸಂಘಟನೆಗಳಲ್ಲಿ ಸಕ್ರಿಯನಾಗಿದ್ದ. ಇಲ್ಲಿ ನಡೆದ ರಾಜು ಮತ್ತು ಇತರೆಡೆ ನಡೆದಿರುವ ಹತ್ಯೆಗಳಿಗೂ ಈ ಹಲ್ಲೆ ಪ್ರಕರಣಕ್ಕೂ ನಂಟಿದೆ. ಇನ್ನೆರಡು ದಿನಗಳಲ್ಲಿ ತನಿಖೆ ಪೂರ್ಣಗೊಳ್ಳಲಿದೆ ಎಂದು ಇಲ್ಲಿ ಬುಧವಾರ ಸುದ್ದಿಗಾರರಿಗೆ ಹೇಳಿದರು.</p>.<p>ತನಿಖೆ ಮುಗಿದ ನಂತರ ನಿರ್ದಿಷ್ಟವಾದ ಸಂಘಟನೆ ಇದರ ಹಿಂದಿದೆ ಎಂಬುದು ಸಾಬೀತಾದರೆ ಕೂಡಲೇ ಆ ಸಂಘಟನೆಯನ್ನು ನಿಷೇಧಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ತನ್ವೀರ್ಸೇಠ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇಂದು ಸ್ವಲ್ಪ ಕಾಲ ನಡೆದಾಡಿದ್ದಾರೆ. ಕುಳಿತು ಉಪಾಹಾರ ಸೇವಿಸಿದ್ದಾರೆ. ಆತಂಕಪಡುವ ಅಗತ್ಯ ಇಲ್ಲ ಎಂದು ಅವರು ತಿಳಿಸಿದರು.</p>.<p><strong>ಇದನ್ನೂ ಓದಿ...<a href="https://www.prajavani.net/stories/stateregional/attacked-mysuru-mla-tanveer-sait-on-ventilator-condition-normal-683378.html" target="_blank">ಹಲ್ಲೆ ಪ್ರಕರಣ: ಶಾಸಕ ತನ್ವೀರ್ ಸೇಠ್ ಆರೋಗ್ಯದಲ್ಲಿ ಚೇತರಿಕೆ</a></strong></p>.<p>‘ಕೆಪಿಎಲ್ ಮ್ಯಾಚ್ಫಿಕ್ಸಿಂಗ್ ತನಿಖೆ ಮೇಲೆ ನನ್ನ ಪುತ್ರ ಹಸ್ತಕ್ಷೇಪ ನಡೆಸಿರುವುದು ಸುಳ್ಳು ಸುದ್ದಿ. ಈ ಪ್ರಕರಣಕ್ಕೂ ನಮ್ಮ ಕುಟುಂಬದವರಿಗೂ ಯಾವುದೇ ಸಂಬಂಧ ಇಲ್ಲ. ಬೇಕಾದರೆ ನೀವೇ ಪೊಲೀಸರನ್ನು ಕೇಳಿ’ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>‘ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ಹಾಗೂ ನಿರ್ದಾಕ್ಷಿಣ್ಯವಾಗಿ ಮಾಡಿ ಎಂದು ನಾನೇ ಹೇಳಿದ್ದೇನೆ. ನಾನು ಹಾಗೂ ನನ್ನ ಪುತ್ರ ಕ್ರಿಕೆಟ್ ಆಡುತ್ತೇವೆ ಎಂದ ಮಾತ್ರಕ್ಕೆ ಈ ರೀತಿಯ ಆರೋಪ ಮಾಡುವುದು ಸರಿಯಲ್ಲ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<p><strong>ಇದನ್ನೂ ಓದಿ...<a href="https://www.prajavani.net/stories/stateregional/talk-war-between-bsy-and-siddaramaiah-in-case-of-tanvir-seth-683443.html" target="_blank">ತನ್ವೀರ್ ಸೇಠ್ ಪ್ರಕರಣ: ಬಿಎಸ್ವೈ–ಸಿದ್ದರಾಮಯ್ಯ ನಡುವೆ ವಾಕ್ಸಮರ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ರಾಜಕೀಯ ಅಸ್ತಿತ್ವಕ್ಕಾಗಿ ಶಾಸಕ ತನ್ವೀರ್ಸೇಠ್ ಮೇಲೆ ಹಲ್ಲೆ ನಡೆಸಲಾಗಿದೆ. ರಾಜಕೀಯ ಪೈಪೋಟಿ ಹಾಗೂ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳು ಇದರ ಹಿಂದಿರುವುದು ಪ್ರಾಥಮಿಕ ತನಿಖೆ ವೇಳೆ ಸ್ಪಷ್ಟವಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಬಂಧಿತ ಆರೋಪಿಯು ಪಿಎಫ್ಐ ಹಾಗೂ ಎಸ್ಡಿಪಿಐ ಎರಡೂ ಸಂಘಟನೆಗಳಲ್ಲಿ ಸಕ್ರಿಯನಾಗಿದ್ದ. ಇಲ್ಲಿ ನಡೆದ ರಾಜು ಮತ್ತು ಇತರೆಡೆ ನಡೆದಿರುವ ಹತ್ಯೆಗಳಿಗೂ ಈ ಹಲ್ಲೆ ಪ್ರಕರಣಕ್ಕೂ ನಂಟಿದೆ. ಇನ್ನೆರಡು ದಿನಗಳಲ್ಲಿ ತನಿಖೆ ಪೂರ್ಣಗೊಳ್ಳಲಿದೆ ಎಂದು ಇಲ್ಲಿ ಬುಧವಾರ ಸುದ್ದಿಗಾರರಿಗೆ ಹೇಳಿದರು.</p>.<p>ತನಿಖೆ ಮುಗಿದ ನಂತರ ನಿರ್ದಿಷ್ಟವಾದ ಸಂಘಟನೆ ಇದರ ಹಿಂದಿದೆ ಎಂಬುದು ಸಾಬೀತಾದರೆ ಕೂಡಲೇ ಆ ಸಂಘಟನೆಯನ್ನು ನಿಷೇಧಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ತನ್ವೀರ್ಸೇಠ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇಂದು ಸ್ವಲ್ಪ ಕಾಲ ನಡೆದಾಡಿದ್ದಾರೆ. ಕುಳಿತು ಉಪಾಹಾರ ಸೇವಿಸಿದ್ದಾರೆ. ಆತಂಕಪಡುವ ಅಗತ್ಯ ಇಲ್ಲ ಎಂದು ಅವರು ತಿಳಿಸಿದರು.</p>.<p><strong>ಇದನ್ನೂ ಓದಿ...<a href="https://www.prajavani.net/stories/stateregional/attacked-mysuru-mla-tanveer-sait-on-ventilator-condition-normal-683378.html" target="_blank">ಹಲ್ಲೆ ಪ್ರಕರಣ: ಶಾಸಕ ತನ್ವೀರ್ ಸೇಠ್ ಆರೋಗ್ಯದಲ್ಲಿ ಚೇತರಿಕೆ</a></strong></p>.<p>‘ಕೆಪಿಎಲ್ ಮ್ಯಾಚ್ಫಿಕ್ಸಿಂಗ್ ತನಿಖೆ ಮೇಲೆ ನನ್ನ ಪುತ್ರ ಹಸ್ತಕ್ಷೇಪ ನಡೆಸಿರುವುದು ಸುಳ್ಳು ಸುದ್ದಿ. ಈ ಪ್ರಕರಣಕ್ಕೂ ನಮ್ಮ ಕುಟುಂಬದವರಿಗೂ ಯಾವುದೇ ಸಂಬಂಧ ಇಲ್ಲ. ಬೇಕಾದರೆ ನೀವೇ ಪೊಲೀಸರನ್ನು ಕೇಳಿ’ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>‘ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ಹಾಗೂ ನಿರ್ದಾಕ್ಷಿಣ್ಯವಾಗಿ ಮಾಡಿ ಎಂದು ನಾನೇ ಹೇಳಿದ್ದೇನೆ. ನಾನು ಹಾಗೂ ನನ್ನ ಪುತ್ರ ಕ್ರಿಕೆಟ್ ಆಡುತ್ತೇವೆ ಎಂದ ಮಾತ್ರಕ್ಕೆ ಈ ರೀತಿಯ ಆರೋಪ ಮಾಡುವುದು ಸರಿಯಲ್ಲ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<p><strong>ಇದನ್ನೂ ಓದಿ...<a href="https://www.prajavani.net/stories/stateregional/talk-war-between-bsy-and-siddaramaiah-in-case-of-tanvir-seth-683443.html" target="_blank">ತನ್ವೀರ್ ಸೇಠ್ ಪ್ರಕರಣ: ಬಿಎಸ್ವೈ–ಸಿದ್ದರಾಮಯ್ಯ ನಡುವೆ ವಾಕ್ಸಮರ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>