<p><strong>ಬೆಂಗಳೂರು:</strong> ‘ನಕ್ಸಲರಿಗೆ ಶರಣಾಗಲು ಕರೆ ನೀಡಿದ್ದು, ಕೆಲವು ಇಲಾಖೆಯವರು ನಕ್ಸಲರನ್ನು ಸಂಪರ್ಕಿಸಿ ಶರಣಾಗತಿಗೆ ಯತ್ನಿಸುತ್ತಿದ್ದಾರೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.</p>.<p>ಡಿಜಿಪಿ ಪ್ರಣವ್ ಮೊಹಂತಿ ತಮ್ಮನ್ನು ಭೇಟಿಯಾದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನಕ್ಸಲರ ಶರಣಾಗುವ ಬಗ್ಗೆ ಮಾತನಾಡಲು ಅವರು ಬಂದಿದ್ದರು. ಅವರಿಗೆ ಕೆಲವು ಸೂಚನೆಗಳನ್ನು ನೀಡಿದ್ದೇನೆ’ ಎಂದರು.</p>.<p>‘ಶರಣಾಗತಿ ಮಾಡಿಸುವುದೇ ಉತ್ತಮ. ಅವರು ಗುಂಡು ಹಾರಿಸುತ್ತಾರೆ, ನಮ್ಮವರು ಗುಂಡು ಹಾರಿಸುತ್ತಾರೆ. ಅದನ್ನು ಬದಿಗಿಟ್ಟು ಶರಣಾಗಲು ಈಗಾಗಲೇ ಮುಕ್ತ ಆಹ್ವಾನ ನೀಡಿದ್ದೇವೆ’ ಎಂದರು.</p>.<p>ಕಲಬುರಗಿ ಜೈಲಿನಲ್ಲಿ ಅವ್ಯವಸ್ಥೆ ಕುರಿತು ಮಾತನಾಡಿದ ಪರಮೇಶ್ವರ, ‘ಈ ಬಗ್ಗೆ ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ. ಜೈಲರ್, ಅಧಿಕಾರಿಗಳ ತಪ್ಪಿದ್ದರೆ ಅವರ ಮೇಲೆ ಕ್ರಮ ಖಚಿತ’ ಎಂದರು.</p>.<p>ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಬಗೆಹರಿಸುವುದು ಉದ್ದೇಶ. ಬಿಜೆಪಿಯವರು ಹೋರಾಟ ಮಾಡಲಿ, ಬೇಡ ಎನ್ನುವುದಿಲ್ಲ. ಆ ಭಾಗದ ಜನರ ಸಮಸ್ಯೆ ಕುರಿತು ಹೆಚ್ಚು ಚರ್ಚಿಸಲಿ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನಕ್ಸಲರಿಗೆ ಶರಣಾಗಲು ಕರೆ ನೀಡಿದ್ದು, ಕೆಲವು ಇಲಾಖೆಯವರು ನಕ್ಸಲರನ್ನು ಸಂಪರ್ಕಿಸಿ ಶರಣಾಗತಿಗೆ ಯತ್ನಿಸುತ್ತಿದ್ದಾರೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.</p>.<p>ಡಿಜಿಪಿ ಪ್ರಣವ್ ಮೊಹಂತಿ ತಮ್ಮನ್ನು ಭೇಟಿಯಾದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನಕ್ಸಲರ ಶರಣಾಗುವ ಬಗ್ಗೆ ಮಾತನಾಡಲು ಅವರು ಬಂದಿದ್ದರು. ಅವರಿಗೆ ಕೆಲವು ಸೂಚನೆಗಳನ್ನು ನೀಡಿದ್ದೇನೆ’ ಎಂದರು.</p>.<p>‘ಶರಣಾಗತಿ ಮಾಡಿಸುವುದೇ ಉತ್ತಮ. ಅವರು ಗುಂಡು ಹಾರಿಸುತ್ತಾರೆ, ನಮ್ಮವರು ಗುಂಡು ಹಾರಿಸುತ್ತಾರೆ. ಅದನ್ನು ಬದಿಗಿಟ್ಟು ಶರಣಾಗಲು ಈಗಾಗಲೇ ಮುಕ್ತ ಆಹ್ವಾನ ನೀಡಿದ್ದೇವೆ’ ಎಂದರು.</p>.<p>ಕಲಬುರಗಿ ಜೈಲಿನಲ್ಲಿ ಅವ್ಯವಸ್ಥೆ ಕುರಿತು ಮಾತನಾಡಿದ ಪರಮೇಶ್ವರ, ‘ಈ ಬಗ್ಗೆ ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ. ಜೈಲರ್, ಅಧಿಕಾರಿಗಳ ತಪ್ಪಿದ್ದರೆ ಅವರ ಮೇಲೆ ಕ್ರಮ ಖಚಿತ’ ಎಂದರು.</p>.<p>ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಬಗೆಹರಿಸುವುದು ಉದ್ದೇಶ. ಬಿಜೆಪಿಯವರು ಹೋರಾಟ ಮಾಡಲಿ, ಬೇಡ ಎನ್ನುವುದಿಲ್ಲ. ಆ ಭಾಗದ ಜನರ ಸಮಸ್ಯೆ ಕುರಿತು ಹೆಚ್ಚು ಚರ್ಚಿಸಲಿ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>