‘ತಾವರೆಕೆರೆ ಠಾಣೆ ವ್ಯಾಪ್ತಿಯಲ್ಲಿ ದರೋಡೆ ನಡೆದಿತ್ತು. ಆ ಪ್ರಕರಣದಲ್ಲಿ ಬಂಧಿಸಲಾಗಿದ್ದ ಆರೋಪಿ, ದರೋಡೆ ಮಾಡಿದ ಚಿನ್ನಾಭರಣವನ್ನು ಬಾಬುಗೆ ನೀಡಿರುವುದಾಗಿ ಹೇಳಿದ್ದ. ಆ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಬಾಬುಗೆ ನೋಟಿಸ್ ನೀಡಲಾಗಿತ್ತು. ಆತ ವಿಚಾರಣೆ ಬಂದಿರಲಿಲ್ಲ. ಹೀಗಾಗಿ, ನ್ಯಾಯಾಲಯದಿಂದ ಬಾಡಿ ವಾರಂಟ್ ಪಡೆದು ಆತನನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ಹೇಳಿದರು.