<p><strong>ಬೆಂಗಳೂರು</strong>: ದರೋಡೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಡಿ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬುನನ್ನು ತಾವರಕೆರೆ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.</p>.<p>ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕಂಪನಿಯ ಕಚೇರಿ ಮೇಲೆ ದಾಳಿ ನಡೆಸಿದ್ದ ಇನ್ಸ್ಪೆಕ್ಟರ್ ನೇತೃತ್ವದ ತಂಡ, ಬಾಬುನನ್ನು ವಶಕ್ಕೆ ಪಡೆಯಿತು. ಅದೇ ವೇಳೆ ಬಾಬು ಸಹಚರರು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದರು. ಲಘು ಲಾಠಿ ಪ್ರಹಾರ ನಡೆಸಿ ಆರೋಪಿಯನ್ನು ಜೀಪಿಗೆ ಹತ್ತಿಸಿ ಠಾಣೆಗೆ ಕರೆದೊಯ್ಯಲಾಯಿತು.</p>.<p>‘ತಾವರೆಕೆರೆ ಠಾಣೆ ವ್ಯಾಪ್ತಿಯಲ್ಲಿ ದರೋಡೆ ನಡೆದಿತ್ತು. ಆ ಪ್ರಕರಣದಲ್ಲಿ ಬಂಧಿಸಲಾಗಿದ್ದ ಆರೋಪಿ, ದರೋಡೆ ಮಾಡಿದ ಚಿನ್ನಾಭರಣವನ್ನು ಬಾಬುಗೆ ನೀಡಿರುವುದಾಗಿ ಹೇಳಿದ್ದ. ಆ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಬಾಬುಗೆ ನೋಟಿಸ್ ನೀಡಲಾಗಿತ್ತು. ಆತ ವಿಚಾರಣೆ ಬಂದಿರಲಿಲ್ಲ. ಹೀಗಾಗಿ, ನ್ಯಾಯಾಲಯದಿಂದ ಬಾಡಿ ವಾರಂಟ್ ಪಡೆದು ಆತನನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ತನ್ನ ಸಹಚರರ ಮೂಲಕ ಕಳ್ಳತನ ಹಾಗೂ ದರೋಡೆ ಮಾಡಿಸುತ್ತಿರುವ ಬಾಬು, ಅದರಿಂದ ಬಂದ ಚಿನ್ನಾಭರಣವನ್ನು ತಾನೇ ಇಟ್ಟುಕೊಂಡುಅಟ್ಟಿಕಾ ಗೋಲ್ಡ್ ಕಂಪನಿ ಮೂಲಕ ವಹಿವಾಟು ನಡೆಸುತ್ತಿರುವ ಮಾಹಿತಿ ಇದೆ. ಅದನ್ನು ಖಾತ್ರಿಪಡಿಸಿಕೊಳ್ಳಲು ಆತನನ್ನು ವಿಚಾರಣೆಗೆ ಒಳಪಡಿಸಬೇಕಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದರೋಡೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಡಿ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬುನನ್ನು ತಾವರಕೆರೆ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.</p>.<p>ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕಂಪನಿಯ ಕಚೇರಿ ಮೇಲೆ ದಾಳಿ ನಡೆಸಿದ್ದ ಇನ್ಸ್ಪೆಕ್ಟರ್ ನೇತೃತ್ವದ ತಂಡ, ಬಾಬುನನ್ನು ವಶಕ್ಕೆ ಪಡೆಯಿತು. ಅದೇ ವೇಳೆ ಬಾಬು ಸಹಚರರು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದರು. ಲಘು ಲಾಠಿ ಪ್ರಹಾರ ನಡೆಸಿ ಆರೋಪಿಯನ್ನು ಜೀಪಿಗೆ ಹತ್ತಿಸಿ ಠಾಣೆಗೆ ಕರೆದೊಯ್ಯಲಾಯಿತು.</p>.<p>‘ತಾವರೆಕೆರೆ ಠಾಣೆ ವ್ಯಾಪ್ತಿಯಲ್ಲಿ ದರೋಡೆ ನಡೆದಿತ್ತು. ಆ ಪ್ರಕರಣದಲ್ಲಿ ಬಂಧಿಸಲಾಗಿದ್ದ ಆರೋಪಿ, ದರೋಡೆ ಮಾಡಿದ ಚಿನ್ನಾಭರಣವನ್ನು ಬಾಬುಗೆ ನೀಡಿರುವುದಾಗಿ ಹೇಳಿದ್ದ. ಆ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಬಾಬುಗೆ ನೋಟಿಸ್ ನೀಡಲಾಗಿತ್ತು. ಆತ ವಿಚಾರಣೆ ಬಂದಿರಲಿಲ್ಲ. ಹೀಗಾಗಿ, ನ್ಯಾಯಾಲಯದಿಂದ ಬಾಡಿ ವಾರಂಟ್ ಪಡೆದು ಆತನನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ತನ್ನ ಸಹಚರರ ಮೂಲಕ ಕಳ್ಳತನ ಹಾಗೂ ದರೋಡೆ ಮಾಡಿಸುತ್ತಿರುವ ಬಾಬು, ಅದರಿಂದ ಬಂದ ಚಿನ್ನಾಭರಣವನ್ನು ತಾನೇ ಇಟ್ಟುಕೊಂಡುಅಟ್ಟಿಕಾ ಗೋಲ್ಡ್ ಕಂಪನಿ ಮೂಲಕ ವಹಿವಾಟು ನಡೆಸುತ್ತಿರುವ ಮಾಹಿತಿ ಇದೆ. ಅದನ್ನು ಖಾತ್ರಿಪಡಿಸಿಕೊಳ್ಳಲು ಆತನನ್ನು ವಿಚಾರಣೆಗೆ ಒಳಪಡಿಸಬೇಕಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>