‘ಎಫ್ಐಆರ್ ರದ್ದತಿಗೆ ಸಂಬಂಧಿಸಿದಂತೆ ಪ್ರಕರಣದ ವಿಚಾರಣೆ ಬಾಕಿ ಇದೆ. ದೂರುದಾರ ಶರಣಗೌಡ ಕಂದಕೂರ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಶರಣಗೌಡ ಅವರು ತಮ್ಮ ವಕೀಲರ ಮೂಲಕ ವಿಚಾರಣೆಗೆ ಹಾಜರಾಗಿ ವಾದ ಮಂಡಿ
ಸಬೇಕು. ವಾದ–ಪ್ರತಿವಾದ ಆಲಿಸಿದ ಬಳಿಕ ಮತ್ತೆ ಪ್ರಕರಣದ ವಿಚಾರಣೆ ನಡೆಯುತ್ತದೆ. ಆ ಬಳಿಕ ಎಫ್ಐಆರ್ ರದ್ದು ಮಾಡಬೇಕೋ, ಬೇಡವೋ ಎಂಬ ಬಗ್ಗೆ ತೀರ್ಪು ನೀಡಲಿದೆ’ ಎಂದು ಯಡಿಯೂರಪ್ಪ ಪರ ವಕೀಲ ಸಂಜಯ್ ಕುಲಕರ್ಣಿ ತಿಳಿಸಿದರು.