<p><strong>ಬೆಂಗಳೂರು:</strong> ದೇಶದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ (ಎಎಸ್ಆರ್ಟಿಯು) 2023-24ನೇ ಸಾಲಿನ ಮೂರು ರಾಷ್ಟ್ರೀಯ ಪ್ರಶಸ್ತಿಗಳನ್ನು ಕೆಎಸ್ಆರ್ಟಿಸಿ ಮತ್ತು ಒಂದು ರಾಷ್ಟ್ರೀಯ ಪ್ರಶಸ್ತಿಯನ್ನು ಬಿಎಂಟಿಸಿ ಪಡೆದಿವೆ.</p>.<p>ದೇಶದ 62 ಸಾರಿಗೆ ಸಂಸ್ಥೆಗಳ ಸದಸ್ಯತ್ವ ಹೊಂದಿರುವ ಎಎಸ್ಆರ್ಟಿಯು ಭಾರತ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ನಿರ್ದೇಶನದಂತೆ ಕಾರ್ಯನಿರ್ವಹಿಸುವ ಸಂಘಟನೆಯಾಗಿದೆ. </p>.<p>ಅಶ್ವಮೇಧ ಬ್ರ್ಯಾಂಡಿಂಗ್, ವರ್ಚಸ್ಸು ಅಭಿವೃದ್ಧಿ, ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಯೋಜನೆಗಳು ಹಾಗೂ ಗಣಕೀಕರಣಕ್ಕಾಗಿ ಕೆಎಸ್ಆರ್ಟಿಸಿಗೆ ಮೂರು ಪ್ರಶಸ್ತಿಗಳು ಲಭಿಸಿವೆ.</p>.<p>ಮೆಟ್ರೊ ಫೀಡರ್ ಕ್ಯೂಆರ್ ಕೋಡ್ ಮೂಲಕ ಡಿಜಿಟಲ್ ಪ್ರಯೋಗಕ್ಕಾಗಿ ಬಿಎಂಟಿಸಿಗೆ ಪ್ರಶಸ್ತಿ ನೀಡಲಾಗಿದೆ. ನವದೆಹಲಿಯಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಪ್ರಶಸ್ತಿ ಪ್ರದಾನ ಮಾಡಿದರು.</p>.<p>ಕೆಎಸ್ಆರ್ಟಿಸಿಯ ಉಪಮುಖ್ಯ ಸಂಚಾರ ವ್ಯವಸ್ಥಾಪಕ ಗುರುರಾಜ್ ಎಚ್, ಕಾರ್ಮಿಕ ಕಲ್ಯಾಣಾಧಿಕಾರಿ ರಾಧಾ, ಬಿಎಂಟಿಸಿಯ ಗಣಕ ಶಾಖೆಯ ಸಹಾಯಕ ಸಂಚಾರ ಅಧೀಕ್ಷಕಿ ಯಶೋದಾ ಪ್ರಶಸ್ತಿ ಸ್ವೀಕರಿಸಿದರು.</p>.<p>ಕೆಎಸ್ಆರ್ಟಿಸಿಯಲ್ಲಿ 26 ವರ್ಷಗಳಿಂದ ಚಾಲಕ ಕಂ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸುಲೋಚನಾ ದೇವಿ, ಬಿಎಂಟಿಸಿಯಲ್ಲಿ ನಿರ್ವಾಹಕರಾಗಿರುವ ಸವಿತಾ, ಸಿ.ಎನ್. ಕುಸುಮಾ, ಮಂಜುಳಾ ಅವರನ್ನು ಇದೇ ಸಂದರ್ಭದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ದೇಶದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ (ಎಎಸ್ಆರ್ಟಿಯು) 2023-24ನೇ ಸಾಲಿನ ಮೂರು ರಾಷ್ಟ್ರೀಯ ಪ್ರಶಸ್ತಿಗಳನ್ನು ಕೆಎಸ್ಆರ್ಟಿಸಿ ಮತ್ತು ಒಂದು ರಾಷ್ಟ್ರೀಯ ಪ್ರಶಸ್ತಿಯನ್ನು ಬಿಎಂಟಿಸಿ ಪಡೆದಿವೆ.</p>.<p>ದೇಶದ 62 ಸಾರಿಗೆ ಸಂಸ್ಥೆಗಳ ಸದಸ್ಯತ್ವ ಹೊಂದಿರುವ ಎಎಸ್ಆರ್ಟಿಯು ಭಾರತ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ನಿರ್ದೇಶನದಂತೆ ಕಾರ್ಯನಿರ್ವಹಿಸುವ ಸಂಘಟನೆಯಾಗಿದೆ. </p>.<p>ಅಶ್ವಮೇಧ ಬ್ರ್ಯಾಂಡಿಂಗ್, ವರ್ಚಸ್ಸು ಅಭಿವೃದ್ಧಿ, ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಯೋಜನೆಗಳು ಹಾಗೂ ಗಣಕೀಕರಣಕ್ಕಾಗಿ ಕೆಎಸ್ಆರ್ಟಿಸಿಗೆ ಮೂರು ಪ್ರಶಸ್ತಿಗಳು ಲಭಿಸಿವೆ.</p>.<p>ಮೆಟ್ರೊ ಫೀಡರ್ ಕ್ಯೂಆರ್ ಕೋಡ್ ಮೂಲಕ ಡಿಜಿಟಲ್ ಪ್ರಯೋಗಕ್ಕಾಗಿ ಬಿಎಂಟಿಸಿಗೆ ಪ್ರಶಸ್ತಿ ನೀಡಲಾಗಿದೆ. ನವದೆಹಲಿಯಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಪ್ರಶಸ್ತಿ ಪ್ರದಾನ ಮಾಡಿದರು.</p>.<p>ಕೆಎಸ್ಆರ್ಟಿಸಿಯ ಉಪಮುಖ್ಯ ಸಂಚಾರ ವ್ಯವಸ್ಥಾಪಕ ಗುರುರಾಜ್ ಎಚ್, ಕಾರ್ಮಿಕ ಕಲ್ಯಾಣಾಧಿಕಾರಿ ರಾಧಾ, ಬಿಎಂಟಿಸಿಯ ಗಣಕ ಶಾಖೆಯ ಸಹಾಯಕ ಸಂಚಾರ ಅಧೀಕ್ಷಕಿ ಯಶೋದಾ ಪ್ರಶಸ್ತಿ ಸ್ವೀಕರಿಸಿದರು.</p>.<p>ಕೆಎಸ್ಆರ್ಟಿಸಿಯಲ್ಲಿ 26 ವರ್ಷಗಳಿಂದ ಚಾಲಕ ಕಂ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸುಲೋಚನಾ ದೇವಿ, ಬಿಎಂಟಿಸಿಯಲ್ಲಿ ನಿರ್ವಾಹಕರಾಗಿರುವ ಸವಿತಾ, ಸಿ.ಎನ್. ಕುಸುಮಾ, ಮಂಜುಳಾ ಅವರನ್ನು ಇದೇ ಸಂದರ್ಭದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>