ಕಾರ್ಕಳ ಸಮೀಪದ ಬೆಳುವಾಯಿ ಗ್ರಾಮದವರಾದ ಅಬ್ದುಲ್ ನಜೀರ್ ಅವರು ತಮ್ಮ ವಕೀಲಿ ವೃತ್ತಿಯನ್ನು ಕಾರ್ಕಳದ ವಕೀಲ ಎಮ್.ಕೆ ವಿಜಯಕುಮಾರ್ ಅವರ ಮಾರ್ಗದರ್ಶನದಲ್ಲಿ ಆರಂಭಿಸಿದರು. 1983ರಲ್ಲಿ ಬೆಂಗಳೂರಿಗೆ ಬಂದ ಅಬ್ದುಲ್ ನಜೀರ್ ಅವರು ಕರ್ನಾಟಕ ಹೈಕೋರ್ಟ್ನಲ್ಲಿ ಅಭ್ಯಾಸ ಮುಂದುವರಿಸಿದರು. 2004ರ ಸೆ. 24ರಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ಎರಡು ವರ್ಷಗಳ ಹಿಂದಷ್ಟೇ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದ ಇವರು,ಸುಪ್ರೀಂಕೋರ್ಟ್ನ ಏಕೈಕ ಮುಸ್ಲಿಂ ನ್ಯಾಯಮೂರ್ತಿ ಎನಿಸಿದ್ದಾರೆ.