<p><strong>ಬೆಂಗಳೂರು:</strong> ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಆಯುಧ ಪೂಜೆಯನ್ನು ಜನರು ಶ್ರದ್ಧಾ ಭಕ್ತಿ ಮತ್ತು ಸಂಭ್ರಮದಿಂದ ಆಚರಿಸಿದರು.</p>.<p>ಗುರುವಾರ ಬಹುತೇಕ ಕಚೇರಿಗಳು, ಕಂಪನಿಗಳಿಗೆ ರಜೆ ಇದುದ್ದರಿಂದಬೆಂಗಳೂರಿನ ಜನರು ಬುಧವಾರವೇ ಹಬ್ಬ ಆಚರಿಸಿ ಸಂಭ್ರಮಿಸಿದರು. ಅಂಗಡಿ ಮಾಲೀಕರು ಸಿಹಿ ಹಂಚುವ ಮೂಲಕ ಶುಭಾಶಯ ವಿನಿಮಯ ಮಾಡಿಕೊಂಡರು.</p>.<p>ಗುರುವಾರ ಬೆಂಗಳೂರು, ಮೈಸೂರು, ಧಾರವಾಡ, ಮಂಗಳೂರು, ಕಲ್ಬುರ್ಗಿ ಸೇರಿದಂತೆರಾಜ್ಯದಾದ್ಯಂತ ಜನರ ಆಯುಧ ಪೂಜೆಯನ್ನು ಸಂಭ್ರಮದಿಂದ ಆಚರಿಸಿದರು. ಇಂದು ಕೂಡ ಹೂವು, ಹಣ್ಣು ಖರೀದಿಯ ವ್ಯಾಪಾರ ಜೋರಾಗಿತ್ತು.</p>.<p>ಮನೆಗಳ ಎದುರು ಬೆಳಿಗ್ಗೆಯಿಂದಲೇ ರಂಗೋಲಿಗಳು ಕಂಗೊಳಿಸುತ್ತಿದ್ದವು. ಮನೆಗಳ ಎದುರು ವಾಹನಗಳನ್ನು ನಿಲ್ಲಿಸಿ, ಬೂದಗುಂಬಳ ಕಾಯಿ ಒಡೆದು ಪೂಜೆ ಮಾಡುವುದು ಎಲ್ಲೆಡೆ ಕಂಡುಬಂತು. ವಾಹನಗಳಿಗೆ ಹೂವಿನ ಹಾರ ಹಾಕಿ ಸಿಂಗರಿಸಲಾಗಿತ್ತು.</p>.<p>ಬಹುತೇಕ ಪ್ರಸಿದ್ಧ ದೇವಸ್ಥಾನಗಳಲ್ಲಿ ಜನರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುವುದು ಸಾಮಾನ್ಯವಾಗಿತ್ತು. ನಗರ ಪ್ರದೇಶಗಳಲ್ಲಿ ಸೈಕಲ್, ಬೈಕ್, ಕಾರು, ಜೀಪು ಸೇರಿದಂತೆ ವಾಹನಗಳಿಗೆ ಅಲಂಕರಿಸಿ ಜನರು ಸಂಭ್ರಮಿಸಿದರು.</p>.<p>ಇನ್ನು ಗ್ರಾಮೀಣ ಪ್ರದೇಶಗಳಲ್ಲಿ ರೈತಾಪಿ ಜನರು ಕೃಷಿ ಪರಿಕರಗಳು, ಟ್ಯಾಕ್ಟರ್ ಸೇರಿದಂತೆ ದಿನ ಬಳಕೆಯ ವಸ್ತುಗಳನ್ನು ಪೂಜಿಸಿ ಆಯುಧ ಪೂಜೆಯನ್ನು ಆಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಆಯುಧ ಪೂಜೆಯನ್ನು ಜನರು ಶ್ರದ್ಧಾ ಭಕ್ತಿ ಮತ್ತು ಸಂಭ್ರಮದಿಂದ ಆಚರಿಸಿದರು.</p>.<p>ಗುರುವಾರ ಬಹುತೇಕ ಕಚೇರಿಗಳು, ಕಂಪನಿಗಳಿಗೆ ರಜೆ ಇದುದ್ದರಿಂದಬೆಂಗಳೂರಿನ ಜನರು ಬುಧವಾರವೇ ಹಬ್ಬ ಆಚರಿಸಿ ಸಂಭ್ರಮಿಸಿದರು. ಅಂಗಡಿ ಮಾಲೀಕರು ಸಿಹಿ ಹಂಚುವ ಮೂಲಕ ಶುಭಾಶಯ ವಿನಿಮಯ ಮಾಡಿಕೊಂಡರು.</p>.<p>ಗುರುವಾರ ಬೆಂಗಳೂರು, ಮೈಸೂರು, ಧಾರವಾಡ, ಮಂಗಳೂರು, ಕಲ್ಬುರ್ಗಿ ಸೇರಿದಂತೆರಾಜ್ಯದಾದ್ಯಂತ ಜನರ ಆಯುಧ ಪೂಜೆಯನ್ನು ಸಂಭ್ರಮದಿಂದ ಆಚರಿಸಿದರು. ಇಂದು ಕೂಡ ಹೂವು, ಹಣ್ಣು ಖರೀದಿಯ ವ್ಯಾಪಾರ ಜೋರಾಗಿತ್ತು.</p>.<p>ಮನೆಗಳ ಎದುರು ಬೆಳಿಗ್ಗೆಯಿಂದಲೇ ರಂಗೋಲಿಗಳು ಕಂಗೊಳಿಸುತ್ತಿದ್ದವು. ಮನೆಗಳ ಎದುರು ವಾಹನಗಳನ್ನು ನಿಲ್ಲಿಸಿ, ಬೂದಗುಂಬಳ ಕಾಯಿ ಒಡೆದು ಪೂಜೆ ಮಾಡುವುದು ಎಲ್ಲೆಡೆ ಕಂಡುಬಂತು. ವಾಹನಗಳಿಗೆ ಹೂವಿನ ಹಾರ ಹಾಕಿ ಸಿಂಗರಿಸಲಾಗಿತ್ತು.</p>.<p>ಬಹುತೇಕ ಪ್ರಸಿದ್ಧ ದೇವಸ್ಥಾನಗಳಲ್ಲಿ ಜನರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುವುದು ಸಾಮಾನ್ಯವಾಗಿತ್ತು. ನಗರ ಪ್ರದೇಶಗಳಲ್ಲಿ ಸೈಕಲ್, ಬೈಕ್, ಕಾರು, ಜೀಪು ಸೇರಿದಂತೆ ವಾಹನಗಳಿಗೆ ಅಲಂಕರಿಸಿ ಜನರು ಸಂಭ್ರಮಿಸಿದರು.</p>.<p>ಇನ್ನು ಗ್ರಾಮೀಣ ಪ್ರದೇಶಗಳಲ್ಲಿ ರೈತಾಪಿ ಜನರು ಕೃಷಿ ಪರಿಕರಗಳು, ಟ್ಯಾಕ್ಟರ್ ಸೇರಿದಂತೆ ದಿನ ಬಳಕೆಯ ವಸ್ತುಗಳನ್ನು ಪೂಜಿಸಿ ಆಯುಧ ಪೂಜೆಯನ್ನು ಆಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>