<p><strong>ಬೆಂಗಳೂರು:</strong> ಯಶಸ್ವಿನಿ ಯೋಜನೆಯ ಫಲಾನುಭವಿಗಳನ್ನು ‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ (ಎಬಿ–ಎಆರ್ಕೆ) ಯೋಜನೆಯಿಂದ ಹೊರಗಿಡುವಂತೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. </p>.<p>ಸಹಕಾರ ಇಲಾಖೆಯಿಂದ ಯಶಸ್ವಿನಿ ಹಾಗೂ ಆರೋಗ್ಯ ಇಲಾಖೆಯಿಂದ ಎಬಿ–ಎಆರ್ಕೆ ಅನುಷ್ಠಾನಗೊಳಿಸಲಾಗಿದೆ. ಅನೇಕ ಕುಟುಂಬಗಳು ಎರಡೂ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಎರಡೂ ಯೋಜನೆಗಳು ಪ್ರತಿ ಕುಟುಂಬಕ್ಕೆ ವಾರ್ಷಿಕ ತಲಾ ₹ 5 ಲಕ್ಷದವರೆಗೆ ಆರೋಗ್ಯ ರಕ್ಷಣೆಯನ್ನು ಒದಗಿಸುತ್ತವೆ. ಆದ್ದರಿಂದ ಎರಡೂ ಯೋಜನೆಗಳ ಫಲಾನುಭವಿಗಳಾಗಿರುವವರು ಯಶಸ್ವಿನಿ ಯೋಜನೆಯಡಿಯೇ ಪ್ರಯೋಜನ ಪಡೆಯಬೇಕು ಎಂದು ತಿಳಿಸಲಾಗಿದೆ. </p>.<p>ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (ಸಾಸ್ಟ್) ಎರಡೂ ಯೋಜನೆಗಳ ಅನುಷ್ಠಾನದ ನಿರ್ವಹಣೆ ಮಾಡುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಸಂಬಂಧಿಸಿದಂತೆ ಶಿಫಾರಸು ಮಾಡುವಾಗ, ಯಶಸ್ವಿನಿಯಡಿ ಚಿಕಿತ್ಸೆ ಪಡೆಯುವಂತೆ ಹಿಂಬರಹ ನೀಡಬೇಕು. ಈ ಎರಡೂ ಯೋಜನೆಯ ಫಲಾನುಭವಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ಹೇಳಲಾಗಿದೆ.</p>.<p>ರಾಜ್ಯದಲ್ಲಿ 41.51 ಲಕ್ಷ ಮಂದಿ ಯಶಸ್ವಿನಿ ಫಲಾನುಭವಿಗಳಾಗಿದ್ದು, 41.09 ಲಕ್ಷ ಮಂದಿ ಆಧಾರ್ ಹೊಂದಿದ್ದಾರೆ. ಇವರಲ್ಲಿ 35.71 ಲಕ್ಷ ಮಂದಿ ಎರಡೂ ಯೋಜನೆಗಳ ಫಲಾನುಭವಿಗಳಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಯಶಸ್ವಿನಿ ಯೋಜನೆಯ ಫಲಾನುಭವಿಗಳನ್ನು ‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ (ಎಬಿ–ಎಆರ್ಕೆ) ಯೋಜನೆಯಿಂದ ಹೊರಗಿಡುವಂತೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. </p>.<p>ಸಹಕಾರ ಇಲಾಖೆಯಿಂದ ಯಶಸ್ವಿನಿ ಹಾಗೂ ಆರೋಗ್ಯ ಇಲಾಖೆಯಿಂದ ಎಬಿ–ಎಆರ್ಕೆ ಅನುಷ್ಠಾನಗೊಳಿಸಲಾಗಿದೆ. ಅನೇಕ ಕುಟುಂಬಗಳು ಎರಡೂ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಎರಡೂ ಯೋಜನೆಗಳು ಪ್ರತಿ ಕುಟುಂಬಕ್ಕೆ ವಾರ್ಷಿಕ ತಲಾ ₹ 5 ಲಕ್ಷದವರೆಗೆ ಆರೋಗ್ಯ ರಕ್ಷಣೆಯನ್ನು ಒದಗಿಸುತ್ತವೆ. ಆದ್ದರಿಂದ ಎರಡೂ ಯೋಜನೆಗಳ ಫಲಾನುಭವಿಗಳಾಗಿರುವವರು ಯಶಸ್ವಿನಿ ಯೋಜನೆಯಡಿಯೇ ಪ್ರಯೋಜನ ಪಡೆಯಬೇಕು ಎಂದು ತಿಳಿಸಲಾಗಿದೆ. </p>.<p>ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (ಸಾಸ್ಟ್) ಎರಡೂ ಯೋಜನೆಗಳ ಅನುಷ್ಠಾನದ ನಿರ್ವಹಣೆ ಮಾಡುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಸಂಬಂಧಿಸಿದಂತೆ ಶಿಫಾರಸು ಮಾಡುವಾಗ, ಯಶಸ್ವಿನಿಯಡಿ ಚಿಕಿತ್ಸೆ ಪಡೆಯುವಂತೆ ಹಿಂಬರಹ ನೀಡಬೇಕು. ಈ ಎರಡೂ ಯೋಜನೆಯ ಫಲಾನುಭವಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ಹೇಳಲಾಗಿದೆ.</p>.<p>ರಾಜ್ಯದಲ್ಲಿ 41.51 ಲಕ್ಷ ಮಂದಿ ಯಶಸ್ವಿನಿ ಫಲಾನುಭವಿಗಳಾಗಿದ್ದು, 41.09 ಲಕ್ಷ ಮಂದಿ ಆಧಾರ್ ಹೊಂದಿದ್ದಾರೆ. ಇವರಲ್ಲಿ 35.71 ಲಕ್ಷ ಮಂದಿ ಎರಡೂ ಯೋಜನೆಗಳ ಫಲಾನುಭವಿಗಳಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>