<p><strong>ಬೆಂಗಳೂರು:</strong> ರಾಜ್ಯದಲ್ಲಿ ‘ಆಯುಷ್ಮಾನ್ ವಯೋ ವಂದನಾ’ ಯೋಜನೆ ಜಾರಿಯಾಗದಿದ್ದರೂ 70 ವರ್ಷ ಮೇಲ್ಪಟ್ಟವರಿಗೆ ಆರೋಗ್ಯ ವಿಮೆಯ ಕಾರ್ಡ್ಗಳನ್ನು ವಿತರಿಸಲಾಗುತ್ತಿದೆ. ಈಗಾಗಲೇ 1.71 ಲಕ್ಷಕ್ಕೂ ಅಧಿಕ ವೃದ್ಧರು ಈ ಕಾರ್ಡ್ ಪಡೆದಿದ್ದಾರೆ. ಆದರೆ, ಆಸ್ಪತ್ರೆಗಳಲ್ಲಿ ಈ ಯೋಜನೆಯಡಿ ಚಿಕಿತ್ಸೆ ಸಿಗದ ಪರಿಣಾಮ ಗೊಂದಲಕ್ಕೆ ಒಳಗಾಗಿದ್ದಾರೆ. </p>.<p>‘ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ’ಯನ್ನು (ಎಬಿ–ಪಿಎಂಜೆಎವೈ) ಕಳೆದ ವರ್ಷ ವಿಸ್ತರಿಸಿದ ಕೇಂದ್ರ ಸರ್ಕಾರ, 70 ವರ್ಷ ಮೇಲ್ಪಟ್ಟ ಎಲ್ಲರಿಗೂ ಅನ್ವಯವಾಗುವಂತೆ ಈ ಯೋಜನೆಯನ್ನು ಜಾರಿ ಮಾಡಿತ್ತು. ಯೋಜನೆಯಡಿ ನಿಗದಿತ ಅನುದಾನದ ಖಚಿತತೆ ಇಲ್ಲದ ಕಾರಣ ರಾಜ್ಯ ಸರ್ಕಾರ ಇನ್ನೂ ಈ ಯೋಜನೆಯನ್ನು ಅನುಷ್ಠಾನ ಮಾಡಿಲ್ಲ. ಆದರೆ, ಯೋಜನೆಯಡಿ ಕಾರ್ಡ್ ವಿತರಿಸುತ್ತಿರುವ ಕಾರಣ, ವೃದ್ಧರು ಉತ್ಸಾಹದಿಂದ ಈ ಕಾರ್ಡ್ ಪಡೆಯುತ್ತಿದ್ದಾರೆ. ₹5 ಲಕ್ಷದ ವರೆಗೆ ಆರೋಗ್ಯ ವಿಮೆ ಭರವಸೆ ಒದಗಿ ಸುವ ‘ಆಯುಷ್ಮಾನ್ ವಯೋ ವಂದನಾ’ ಕಾರ್ಡ್ ಹೊಂದಿದ್ದರೂ ಚಿಕಿತ್ಸಾ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. </p>.<p>ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವು (ಎನ್ಎಚ್ಎ) ಈ ಯೋಜನೆಯ ಅನುಷ್ಠಾನದ ಹೊಣೆ ಹೊತ್ತಿದೆ. ಎನ್ಎಚ್ಎ ಪೋರ್ಟಲ್ ಮೂಲಕವೇ 70 ವರ್ಷ ಮೇಲ್ಪಟ್ಟ ಎಲ್ಲರಿಗೂ ಕಾರ್ಡ್ ಪಡೆಯುವ ಅವಕಾಶ ನೀಡಲಾಗಿದೆ. ವಿವಿಧ ಸಂಘ–ಸಂಸ್ಥೆಗಳು ಸಹ ಕಾರ್ಡ್ ವಿತರಣೆಗೆ ಸಂಬಂಧಿಸಿದಂತೆ ಅಭಿಯಾನ ನಡೆಸಿ, ಕಾರ್ಡ್ಗೆ ನೋಂದಣಿ ಮಾಡಿಸುತ್ತಿವೆ. ಯೋಜನೆ ಜಾರಿಯಾಗದ ಪರಿಣಾಮ ಈ ಕಾರ್ಡ್ಗಳು ನಿರರ್ಥಕವಾಗುತ್ತಿವೆ. </p>.<p><strong>ನಿವಾರಣೆಯಾಗದ ಗೊಂದಲ</strong>: ‘ಆಯುಷ್ಮಾನ್ ವಯೋ ವಂದನಾ’ ಯೋಜನೆಯಡಿ ಚಿಕಿತ್ಸೆಗೆ 70 ವರ್ಷ ಮೇಲ್ಪಟ್ಟವರು ಪಡಿತರ ಚೀಟಿ ನೀಡಬೇಕಾದ ಅಗತ್ಯ ಇರುವುದಿಲ್ಲ. ಇದರಿಂದಾಗಿ ಯೋಜನೆ ಜಾರಿಯಾದಲ್ಲಿ ಎಲ್ಲ ವೃದ್ಧರೂ ₹5 ಲಕ್ಷದವರಿಗೆ ಉಚಿತ ಚಿಕಿತ್ಸೆ ಪಡೆಯಲು ಸಾಧ್ಯ. ಯೋಜನೆಗೆ ಅಗತ್ಯವಿರುವ ಅನುದಾನದ ಬಗೆಗಿನ ಗೊಂದಲ ನಿವಾರಿಸುವಂತೆ ರಾಜ್ಯ ಆರೋಗ್ಯ ಇಲಾಖೆಯು ಕೇಂದ್ರ ಆರೋಗ್ಯ ಸಚಿವಾಲಯಕ್ಕೂ ಪತ್ರ ಬರೆದಿದೆ. ಆದರೆ, ಅನುದಾನದ ಭರವಸೆ ಸಿಗದಿದ್ದರಿಂದ ಯೋಜನೆ ಜಾರಿ ಮಾಡಿಲ್ಲ. </p>.<p>‘ಈ ಯೋಜನೆಗೆ ಕೇಂದ್ರ ಸರ್ಕಾರ ಶೇ 60ರಷ್ಟು ಹಾಗೂ ರಾಜ್ಯ ಸರ್ಕಾರ ಶೇ 40ರಷ್ಟು ವೆಚ್ಚ ಭರಿಸಬೇಕಾಗುತ್ತದೆ. ರಾಜ್ಯದಲ್ಲಿ ಯೋಜನೆ ಅನುಷ್ಠಾನಕ್ಕೆ ₹68.98 ಕೋಟಿ ಅನುದಾನ ಅಗತ್ಯವಿದೆ. ಇದರಲ್ಲಿ ಶೇ 60ರಷ್ಟನ್ನು ಕೇಂದ್ರ ಸರ್ಕಾರ ನೀಡಬೇಕಾಗಿದೆ. ₹36.58 ಕೋಟಿ ಅನುದಾನ ಪಡೆಯಲು ರಾಜ್ಯ ಅರ್ಹವಾಗಿದೆ. ಅನುದಾನದ ಸಮಸ್ಯೆಯಿಂದ ಯೋಜನೆ ಜಾರಿಯಾಗಿಲ್ಲ. ಯೋಜನೆಯಡಿ ಈಗಲೇ ಕಾರ್ಡ್ ಪಡೆಯಬೇಕಾದ ಅಗತ್ಯವಿಲ್ಲ’ ಎಂದು ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದರು. </p>.<div><blockquote>ಆಯುಷ್ಮಾನ್ ವಯೋ ವಂದನಾ ಯೋಜನೆ ಜಾರಿಗೆ ಪ್ರಯತ್ನಿಸಲಾಗುತ್ತಿದೆ. ಆದರೆ ಕೇಂದ್ರ ಸರ್ಕಾರದಿಂದ ಸಮರ್ಪಕ ಉತ್ತರ ಹಾಗೂ ಅನುದಾನದ ಭರವಸೆ ಸಿಗುತ್ತಿಲ್ಲ </blockquote><span class="attribution">ದಿನೇಶ್ ಗುಂಡೂರಾವ್ ಆರೋಗ್ಯ ಸಚಿವ</span></div>.<h2> ಪಡಿತರ ಚೀಟಿ ಇದ್ದಲ್ಲಿ ಚಿಕಿತ್ಸೆ </h2>.<p>ರಾಜ್ಯದಲ್ಲಿ ಸದ್ಯ ಎಬಿ–ಪಿಎಂಜೆಎವೈ–ಆರೋಗ್ಯ ಕರ್ನಾಟಕ ಯೋಜನೆ ಜಾರಿಯಲ್ಲಿದೆ. ಈ ಯೋಜನೆಯಡಿ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ 70 ವರ್ಷ ಮೇಲ್ಪಟ್ಟವರು ಸೇರಿ ಎಲ್ಲ ವಯೋಮಾನದವರಿಗೆ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆ ಒದಗಿಸಲಾಗುತ್ತಿದೆ. ಎಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಸದಸ್ಯರಿಗೆ ಯೋಜನೆಯಡಿ ಚಿಕಿತ್ಸಾ ವೆಚ್ಚದ ಶೇ 30ರಷ್ಟು ಪಾವತಿಸಲಾಗುತ್ತಿದೆ. ಪಡಿತರ ಚೀಟಿ ಹಾಗೂ ಆಧಾರ್ ಕಾರ್ಡ್ ನೀಡಬೇಕಿದೆ. ಈ ಯೋಜನೆಯನ್ನು ರಾಜ್ಯದಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (ಸಾಸ್ಟ್) ನಿರ್ವಹಿಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ‘ಆಯುಷ್ಮಾನ್ ವಯೋ ವಂದನಾ’ ಯೋಜನೆ ಜಾರಿಯಾಗದಿದ್ದರೂ 70 ವರ್ಷ ಮೇಲ್ಪಟ್ಟವರಿಗೆ ಆರೋಗ್ಯ ವಿಮೆಯ ಕಾರ್ಡ್ಗಳನ್ನು ವಿತರಿಸಲಾಗುತ್ತಿದೆ. ಈಗಾಗಲೇ 1.71 ಲಕ್ಷಕ್ಕೂ ಅಧಿಕ ವೃದ್ಧರು ಈ ಕಾರ್ಡ್ ಪಡೆದಿದ್ದಾರೆ. ಆದರೆ, ಆಸ್ಪತ್ರೆಗಳಲ್ಲಿ ಈ ಯೋಜನೆಯಡಿ ಚಿಕಿತ್ಸೆ ಸಿಗದ ಪರಿಣಾಮ ಗೊಂದಲಕ್ಕೆ ಒಳಗಾಗಿದ್ದಾರೆ. </p>.<p>‘ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ’ಯನ್ನು (ಎಬಿ–ಪಿಎಂಜೆಎವೈ) ಕಳೆದ ವರ್ಷ ವಿಸ್ತರಿಸಿದ ಕೇಂದ್ರ ಸರ್ಕಾರ, 70 ವರ್ಷ ಮೇಲ್ಪಟ್ಟ ಎಲ್ಲರಿಗೂ ಅನ್ವಯವಾಗುವಂತೆ ಈ ಯೋಜನೆಯನ್ನು ಜಾರಿ ಮಾಡಿತ್ತು. ಯೋಜನೆಯಡಿ ನಿಗದಿತ ಅನುದಾನದ ಖಚಿತತೆ ಇಲ್ಲದ ಕಾರಣ ರಾಜ್ಯ ಸರ್ಕಾರ ಇನ್ನೂ ಈ ಯೋಜನೆಯನ್ನು ಅನುಷ್ಠಾನ ಮಾಡಿಲ್ಲ. ಆದರೆ, ಯೋಜನೆಯಡಿ ಕಾರ್ಡ್ ವಿತರಿಸುತ್ತಿರುವ ಕಾರಣ, ವೃದ್ಧರು ಉತ್ಸಾಹದಿಂದ ಈ ಕಾರ್ಡ್ ಪಡೆಯುತ್ತಿದ್ದಾರೆ. ₹5 ಲಕ್ಷದ ವರೆಗೆ ಆರೋಗ್ಯ ವಿಮೆ ಭರವಸೆ ಒದಗಿ ಸುವ ‘ಆಯುಷ್ಮಾನ್ ವಯೋ ವಂದನಾ’ ಕಾರ್ಡ್ ಹೊಂದಿದ್ದರೂ ಚಿಕಿತ್ಸಾ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. </p>.<p>ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವು (ಎನ್ಎಚ್ಎ) ಈ ಯೋಜನೆಯ ಅನುಷ್ಠಾನದ ಹೊಣೆ ಹೊತ್ತಿದೆ. ಎನ್ಎಚ್ಎ ಪೋರ್ಟಲ್ ಮೂಲಕವೇ 70 ವರ್ಷ ಮೇಲ್ಪಟ್ಟ ಎಲ್ಲರಿಗೂ ಕಾರ್ಡ್ ಪಡೆಯುವ ಅವಕಾಶ ನೀಡಲಾಗಿದೆ. ವಿವಿಧ ಸಂಘ–ಸಂಸ್ಥೆಗಳು ಸಹ ಕಾರ್ಡ್ ವಿತರಣೆಗೆ ಸಂಬಂಧಿಸಿದಂತೆ ಅಭಿಯಾನ ನಡೆಸಿ, ಕಾರ್ಡ್ಗೆ ನೋಂದಣಿ ಮಾಡಿಸುತ್ತಿವೆ. ಯೋಜನೆ ಜಾರಿಯಾಗದ ಪರಿಣಾಮ ಈ ಕಾರ್ಡ್ಗಳು ನಿರರ್ಥಕವಾಗುತ್ತಿವೆ. </p>.<p><strong>ನಿವಾರಣೆಯಾಗದ ಗೊಂದಲ</strong>: ‘ಆಯುಷ್ಮಾನ್ ವಯೋ ವಂದನಾ’ ಯೋಜನೆಯಡಿ ಚಿಕಿತ್ಸೆಗೆ 70 ವರ್ಷ ಮೇಲ್ಪಟ್ಟವರು ಪಡಿತರ ಚೀಟಿ ನೀಡಬೇಕಾದ ಅಗತ್ಯ ಇರುವುದಿಲ್ಲ. ಇದರಿಂದಾಗಿ ಯೋಜನೆ ಜಾರಿಯಾದಲ್ಲಿ ಎಲ್ಲ ವೃದ್ಧರೂ ₹5 ಲಕ್ಷದವರಿಗೆ ಉಚಿತ ಚಿಕಿತ್ಸೆ ಪಡೆಯಲು ಸಾಧ್ಯ. ಯೋಜನೆಗೆ ಅಗತ್ಯವಿರುವ ಅನುದಾನದ ಬಗೆಗಿನ ಗೊಂದಲ ನಿವಾರಿಸುವಂತೆ ರಾಜ್ಯ ಆರೋಗ್ಯ ಇಲಾಖೆಯು ಕೇಂದ್ರ ಆರೋಗ್ಯ ಸಚಿವಾಲಯಕ್ಕೂ ಪತ್ರ ಬರೆದಿದೆ. ಆದರೆ, ಅನುದಾನದ ಭರವಸೆ ಸಿಗದಿದ್ದರಿಂದ ಯೋಜನೆ ಜಾರಿ ಮಾಡಿಲ್ಲ. </p>.<p>‘ಈ ಯೋಜನೆಗೆ ಕೇಂದ್ರ ಸರ್ಕಾರ ಶೇ 60ರಷ್ಟು ಹಾಗೂ ರಾಜ್ಯ ಸರ್ಕಾರ ಶೇ 40ರಷ್ಟು ವೆಚ್ಚ ಭರಿಸಬೇಕಾಗುತ್ತದೆ. ರಾಜ್ಯದಲ್ಲಿ ಯೋಜನೆ ಅನುಷ್ಠಾನಕ್ಕೆ ₹68.98 ಕೋಟಿ ಅನುದಾನ ಅಗತ್ಯವಿದೆ. ಇದರಲ್ಲಿ ಶೇ 60ರಷ್ಟನ್ನು ಕೇಂದ್ರ ಸರ್ಕಾರ ನೀಡಬೇಕಾಗಿದೆ. ₹36.58 ಕೋಟಿ ಅನುದಾನ ಪಡೆಯಲು ರಾಜ್ಯ ಅರ್ಹವಾಗಿದೆ. ಅನುದಾನದ ಸಮಸ್ಯೆಯಿಂದ ಯೋಜನೆ ಜಾರಿಯಾಗಿಲ್ಲ. ಯೋಜನೆಯಡಿ ಈಗಲೇ ಕಾರ್ಡ್ ಪಡೆಯಬೇಕಾದ ಅಗತ್ಯವಿಲ್ಲ’ ಎಂದು ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದರು. </p>.<div><blockquote>ಆಯುಷ್ಮಾನ್ ವಯೋ ವಂದನಾ ಯೋಜನೆ ಜಾರಿಗೆ ಪ್ರಯತ್ನಿಸಲಾಗುತ್ತಿದೆ. ಆದರೆ ಕೇಂದ್ರ ಸರ್ಕಾರದಿಂದ ಸಮರ್ಪಕ ಉತ್ತರ ಹಾಗೂ ಅನುದಾನದ ಭರವಸೆ ಸಿಗುತ್ತಿಲ್ಲ </blockquote><span class="attribution">ದಿನೇಶ್ ಗುಂಡೂರಾವ್ ಆರೋಗ್ಯ ಸಚಿವ</span></div>.<h2> ಪಡಿತರ ಚೀಟಿ ಇದ್ದಲ್ಲಿ ಚಿಕಿತ್ಸೆ </h2>.<p>ರಾಜ್ಯದಲ್ಲಿ ಸದ್ಯ ಎಬಿ–ಪಿಎಂಜೆಎವೈ–ಆರೋಗ್ಯ ಕರ್ನಾಟಕ ಯೋಜನೆ ಜಾರಿಯಲ್ಲಿದೆ. ಈ ಯೋಜನೆಯಡಿ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ 70 ವರ್ಷ ಮೇಲ್ಪಟ್ಟವರು ಸೇರಿ ಎಲ್ಲ ವಯೋಮಾನದವರಿಗೆ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆ ಒದಗಿಸಲಾಗುತ್ತಿದೆ. ಎಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಸದಸ್ಯರಿಗೆ ಯೋಜನೆಯಡಿ ಚಿಕಿತ್ಸಾ ವೆಚ್ಚದ ಶೇ 30ರಷ್ಟು ಪಾವತಿಸಲಾಗುತ್ತಿದೆ. ಪಡಿತರ ಚೀಟಿ ಹಾಗೂ ಆಧಾರ್ ಕಾರ್ಡ್ ನೀಡಬೇಕಿದೆ. ಈ ಯೋಜನೆಯನ್ನು ರಾಜ್ಯದಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (ಸಾಸ್ಟ್) ನಿರ್ವಹಿಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>