ಇಂತಹ ಕಳಪೆ ನಕಲಿ ಬೀಜ ಮಾರಾಟ ಮಾಡುವವರು ಬದುಕಿದ್ದಂತಹ ರೈತರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ.ಇಂತಹ ಕೃತ್ಯವನ್ನು ತಾವೆಂದಿಗೂ ಸಹಿಸುವುದಿಲ್ಲ. ಕೃಷಿ ಅಧಿಕಾರಿಗಳು ಮತ್ತು ವಿಚಕ್ಷಣಾ ತಂಡ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದ್ದಾರೆ.ನಕಲಿ ಕಳಪೆ ಅಕ್ರಮ ಬೀಜವಾಗಲಿ ಗೊಬ್ಬರವಾಗಲಿ ಮಾರಾಟ ಮಾಡುವವರು ಎಷ್ಟೇ ಪ್ರಭಾವಿಗಳಾದರೂ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತೇವೆ.ಹಾವೇರಿಯಲ್ಲಿ ಪತ್ತೆಯಾದ ನಕಲಿ ಬಿಡಿ ಬೀಜಗಳ ದಾಸ್ತಾನು ವಶ ಪ್ರಕರಣವನ್ನು ನ್ಯಾಯಾಲಯದ ವಶಕ್ಕೆ ವಹಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.